Neralakatte: ಹಿಲ್ಕೋಡು ಮಣ್ಣಿನ ರಸ್ತೆ ಅಭಿವೃದ್ಧಿಗೆ ಬೇಡಿಕೆ

ಒಂದು ಕಿ.ಮೀ. ರಸ್ತೆ ಡಾಮರೀಕರಣಕ್ಕೆ ಮಿನಮೇಷ; ಗ್ರಾ.ಪಂ. ವ್ಯಾಪ್ತಿಯ ಅತೀ ಹಳೆಯ ರಸ್ತೆಗಿಲ್ಲ ದುರಸ್ತಿ ಭಾಗ್ಯ

Team Udayavani, Sep 11, 2024, 6:39 PM IST

Neralakatte: ಹಿಲ್ಕೋಡು ಮಣ್ಣಿನ ರಸ್ತೆ ಅಭಿವೃದ್ಧಿಗೆ ಬೇಡಿಕೆ

ನೇರಳಕಟ್ಟೆ: ಕರ್ಕುಂಜೆ ಗ್ರಾ.ಪಂ. ವ್ಯಾಪ್ತಿಯಲ್ಲೇ ಅತ್ಯಂತ ಹಳೆಯದಾದ ಹಿಲ್ಕೋಡು ಮಣ್ಣಿನ ರಸ್ತೆಯು ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗದೇ ನನೆಗುದಿಗೆ ಬಿದ್ದಿದೆ. ಅನೇಕ ವರ್ಷಗಳಿಂದ ಊರವರು ಈ ರಸ್ತೆಯ ಡಾಮರೀಕರಣಕ್ಕೆ ಒತ್ತಾಯಿಸುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ.

ನೇರಳಕಟ್ಟೆ ಜಂಕ್ಷನ್‌ ಬಳಿಯ ಮೂರುಕೈನಿಂದ ಕೆಂಚಮ್ಮ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಸುಮಾರು 1 ಕಿ.ಮೀ. ದೂರದ ಈ ರಸ್ತೆ ಈಗಲೂ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಮಳೆಗಾಲದಲ್ಲಿ ಕೆಸರುಮಯಗೊಂಡು, ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ.

ಈ ರಸ್ತೆ ಯಾಕೆ ನಿರ್ಲಕ್ಷ್ಯ?
ಇದು 60-70 ವರ್ಷಗಳಷ್ಟು ಹಳೆಯದಾದ ರಸ್ತೆಯಾಗಿದೆ. ಕರ್ಕುಂಜೆ ವ್ಯಾಪ್ತಿಯ ಬಾಕಿ ಉಳಿದ ಎಲ್ಲ ಪ್ರಮುಖ ರಸ್ತೆಗಳೆಲ್ಲವನ್ನು ಅಭಿವೃದ್ಧಿಪಡಿಸಲಾಗಿದೆ. ಈ ರಸ್ತೆಯ ನಂತರ ಆದ ರಸ್ತೆಗಳಿಗೂ ಅಭಿವೃದ್ಧಿ ಭಾಗ್ಯ ಸಿಕ್ಕಿದೆ. ಆದರೆ ಈ ರಸ್ತೆಯ ಅಭಿವೃದ್ಧಿಗೆ ಮಾತ್ರ ಯಾಕೆ ಈ ರೀತಿಯ ನಿರ್ಲಕ್ಷ್ಯ ಎನ್ನುವುದಾಗಿ ಊರವರು ಪ್ರಶ್ನಿಸುತ್ತಿದ್ದಾರೆ.

ಹಿಲ್ಕೋಡು ಭಾಗದ ಜನರು ನೇರಳಕಟ್ಟೆ ಪೇಟೆಗೆ ಬರಲು ಇದೇ ಮುಖ್ಯ ಸಂಪರ್ಕ ರಸ್ತೆಯಾಗಿದೆ. ಹಿಂದೆ ಬಾಂಡ್ಯ, ಕೊಡ್ಲಾಡಿ ಭಾಗದಿಂದಲೂ ಈ ರಸ್ತೆಯಾಗಿಯೇ ಬರುತ್ತಿದ್ದರು. ಈಗ ಆಜ್ರಿ – ಸಿದ್ದಾಪುರ ರಸ್ತೆಯಾಗಿದ್ದರಿಂದ ಈ ರಸ್ತೆಯನ್ನು ಆ ಆ ಭಾಗದ ಜನ ಅಷ್ಟೊಂದು ಬಳಸುತ್ತಿಲ್ಲ. ಆದರೆ ಹಿಲ್ಕೋಡು ಭಾಗದ 15 ರಿಂದ 20 ಮನೆಗಳ ಜನ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಎಲ್ಲರಿಗೂ ಮನವಿ
ನಮ್ಮ ಹಿಲ್ಕೋಡು ರಸ್ತೆಯ ಡಾಮರು ಕಾಮಗಾರಿಗೆ ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದೇವೆ. ಗ್ರಾ.ಪಂ.ಗೆ ಮನವಿ ಮಾಡಿದ್ದೇವೆ. ಗ್ರಾಮಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾವಿಸಿದ್ದೇವೆ. ಹಿಂದಿನ, ಈಗಿನ ಶಾಸಕರಿಗೂ ಪತ್ರ ಸಲ್ಲಿಸಿದ್ದೇವೆ. ಕಳೆದ ಚುನಾಚಣೆ ವೇಳೆ ಪ್ರತಿಭಟನೆ ಮಾಡಲು ಮುಂದಾದಾಗ ತಾ.ಪಂ. ಇಒ ಭೇಟಿ ನೀಡಿ, ಅನುದಾನ ನೀಡುವ ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೇ ಅನುದಾನ ಬಂದಿಲ್ಲ. ಈ ರಸ್ತೆ ಅಭಿವೃದ್ಧಿಗೆ ನಾವು ಇನ್ನೆಷ್ಟು ವರ್ಷ ಕಾಯಬೇಕು?. – ನಾಗರಾಜ್‌ ಹಿಲ್ಕೋಡು, ಸ್ಥಳೀಯರು

ಹೆಚ್ಚಿನ ಅನುದಾನ ಅಗತ್ಯ
ಹಿಲ್ಕೋಡು ರಸ್ತೆಗೆ ಚುನಾವಣೆ ಸಂದರ್ಭದಲ್ಲಿ ಬಂದ ಬೇಡಿಕೆ ಗಳನ್ನು ಪಂಚಾಯತ್‌ನಿಂದ ಮೇಲಧಿಕಾರಿಗಳಿಗೆ ಕಳುಹಿಸಿದ್ದೇವೆ. ಇದಕ್ಕೆ ಸುಮಾರು 15 ಲಕ್ಷ ರೂ. ಅನುದಾನದ ಅಗತ್ಯವಿದೆ. ಕ್ರಿಯಾ ಯೋಜನೆ ಇನ್ನೂ ಆಗಿಲ್ಲ. ಸದಸ್ಯರು ಸೂಚಿಸಿದರೆ, ಮುಂದಿನ ಕ್ರಿಯಾ ಯೋಜನೆಯಲ್ಲಿ ಹಣ ಇಡಲು ಪ್ರಯತ್ನಿಸಲಾಗುವುದು. – ಗಣೇಶ್‌ ಹೆಬ್ಟಾರ್‌, ಕರ್ಕುಂಜೆ ಗ್ರಾ.ಪಂ. ಪಿಡಿಒ

 

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.