Kannada Habba: ನ.1-7: ಕುಂದಾಪುರದಲ್ಲಿ ಕನ್ನಡ ಹಬ್ಬ


Team Udayavani, Oct 18, 2024, 9:00 PM IST

Kannada Habba: ನ.1-7: ಕುಂದಾಪುರದಲ್ಲಿ ಕನ್ನಡ ಹಬ್ಬ

ಉಡುಪಿ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್‌ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಿಂದ 7ರವರೆಗೆ ಕುಂದಾಪುರದ ಬೋರ್ಡ್‌ ಹೈಸ್ಕೂಲ್‌ ಕಲಾಮಂದಿರದಲ್ಲಿ ಕನ್ನಡ ಹಬ್ಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಬಿ.ಕಿಶೋರ್‌ ಕುಮಾರ್‌ ತಿಳಿಸಿದರು.

ಕನ್ನಡ ಹಬ್ಬದ ಪೂರ್ವಭಾವಿಯಾಗಿ ಅ.31ರಂದು ಕನ್ನಡ ರಥೋತ್ಸವ ಹಮ್ಮಿಕೊಂಡಿದ್ದೇವೆ. ಅಂದು ಸಂಜೆ ಬೋರ್ಡ್‌ಹೈಸ್ಕೂಲ್‌ನಿಂದ ಹೊರಡಲಿರುವ ರಥೋತ್ಸವ ಹೊಸ ಬಸ್‌ನಿಲ್ದಾಣ ಮಾರ್ಗವಾಗಿ ಶಾಸ್ತ್ರೀ ಸರ್ಕಲ್‌ ಸುತ್ತಿ ಪುನಃ ಬೋರ್ಡ್‌ ಹೈಸ್ಕೂಲ್‌ಗೆ ಬರಲಿದೆ. ಜಿಲ್ಲಾಧಿಕಾರಿ, ಎಸ್‌.ಪಿ., ಸಂಸದರು, ಶಾಸಕರು, ಮಾಜಿ ಸಚಿವರು ಸಹಿತವಾಗಿ ಜನ ಪ್ರತಿನಿಧಿಗಳು, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ, ತಾಲೂಕು ಅಧ್ಯಕ್ಷರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಕನ್ನಡಾಭಿಮಾನಿಗಳ ಸೇರಿ 3 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಹಬ್ಬದ ನಿಮಿತ್ತ ಕುಂದಾಪುರ ಪೇಟೆಯ ಎಲ್ಲ ಅಂಗಡಿಗಳು ವಿದ್ಯುದ್ದೀಪಾಲಂಕಾರ ಮಾಡಲಿವೆ. ನಿತ್ಯವೂ ಸಂಜೆ 6 ಗಂಟೆಯಿಂದ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ.1ರ ಸಂಜೆ 6 ಗಂಟೆಗೆ ಉದ್ಘಾಟನೆಯನ್ನು ಉದ್ಯಮಿ ಆನಂದ ಸಿ. ಕುಂದರ್‌ ನೆರವೇರಿಸಲಿದ್ದಾರೆ. ಕನ್ನಡ ನೆಲದಲ್ಲಿ ಡಾ| ರಾಜ್‌ಕುಮಾರ್‌ ಎಂಬ ವಿಷಯವಾಗಿ ನಟ ರಾಮಕೃಷ್ಣ ಉಪನ್ಯಾಸ ನೀಡಲಿದ್ದಾರೆ. ಹೀಗೆ ನ.7ರವರೆಗೂ ಒಂದೊಂದು ದಿನ ಒಬ್ಬೊಬ್ಬರ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮವಾಗಿ ನಾಟಕ, ಯಕ್ಷಗಾನ ಇತ್ಯಾದಿ ಇರಲಿದೆ ಎಂದರು.

ಟ್ರಸ್ಟ್‌ ಸದಸ್ಯರಾದ ಶ್ರೀಧರ್‌ ಸುವರ್ಣ, ರಾಮಚಂದ್ರ ಬಿ.ಎನ್‌. ಸುದ್ದಿಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.