ಸೇನಾಪುರದಲ್ಲಿ “ಡಂಪಿಂಗ್‌ ಯಾರ್ಡ್‌’ಗೆ ವಿರೋಧ

ಸ್ಥಳೀಯರಿಂದ ಹೋರಾಟದ ಎಚ್ಚರಿಕೆ; "ಬೇರೆ ಗ್ರಾಮಗಳ ಕಸ ಇಲ್ಲಿ ಹಾಕುವುದು ಬೇಡ' ಎಂಬ ಆಗ್ರಹ

Team Udayavani, Oct 2, 2020, 2:25 AM IST

KUDಸೇನಾಪುರದಲ್ಲಿ “ಡಂಪಿಂಗ್‌ ಯಾರ್ಡ್‌’ಗೆ ವಿರೋಧ

ಸೇನಾಪುರ: ಡಂಪಿಂಗ್‌ ಯಾರ್ಡ್‌ಗೆ ಪ್ರಸ್ತಾವಿತ ಜಾಗದಲ್ಲಿ ಸ್ಥಳೀಯರು ಸೇರಿರುವುದು.

ಕುಂದಾಪುರ: ಸೇನಾಪುರ ಗ್ರಾಮದ ದಲಿತ ಕುಟುಂಬಗಳೇ ಹೆಚ್ಚಾಗಿ ರುವ ಅಂಬೇಡ್ಕರ್‌ ನಗರದ ಒಂದು ಎಕರೆ ಪ್ರದೇಶವಿರುವ ಸರಕಾರಿ ಜಾಗದಲ್ಲಿ ಡಂಪಿಂಗ್‌ ಯಾರ್ಡ್‌ ತೆರೆಯಲು ತೆರಮರೆಯ ಸಿದ್ಧತೆಗಳು ನಡೆಯುತ್ತಿದೆ. ಆದರೆ ಇದಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಯಾವುದೇ ಕಾರಣಕ್ಕೂ ಬೇರೆ ಗ್ರಾಮಗಳ ಕಸ ವಿಲೇವಾರಿ ಮಾಡಲು ಇಲ್ಲಿ ಡಂಪಿಂಗ್‌ ಯಾರ್ಡ್‌ ಮಾಡುವುದು ಬೇಡ ಎನ್ನುವ ಕೂಗು ಇಲ್ಲಿನ ಜನರದ್ದಾಗಿದೆ.

ನಾಡ ಗ್ರಾ.ಪಂ.ನಿಂದ ಇತ್ತೀಚೆಗಷ್ಟೇ ಬೇರ್ಪಟ್ಟು ಈಗ ಹೊಸಾಡು ಪಂಚಾಯತ್‌ಗೆ ಸೇರ್ಪಡೆಗೊಂಡ ಸೇನಾಪುರ ಗ್ರಾಮದ ರೈಲು ನಿಲ್ದಾಣ ಸಮೀಪದ ಅಂಬೇಡ್ಕರ್‌ ನಗರದಲ್ಲಿ 3 ಗ್ರಾ.ಪಂ. ವ್ಯಾಪ್ತಿಯ ಸೇನಾಪುರ ಮಾತ್ರವಲ್ಲದೆ ನಾಡ, ಬಡಾಕೆರೆ, ಹಡವು, ಆಲೂರು, ಹಕ್ಲಾಡಿ ಗ್ರಾಮಗಳ ಕಸ ವಿಲೇವಾರಿ ಮಾಡಲು “ಡಂಪಿಂಗ್‌ ಯಾರ್ಡ್‌’ ತೆರೆಯಲು ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಸರ್ವೇ ನಂಬರ್‌ 156 ರಲ್ಲಿ ಜಾಗ ಗುರುತಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎನ್ನುವ ಮಾಹಿತಿಯಿದೆ.

ಯಾರು ಹೊಣೆ?
ಸೇನಾಪುರ ಗ್ರಾಮದಲ್ಲಿ ಉತ್ಪತ್ತಿಯಾಗುವ ಕಸ ವಿಲೇವಾರಿ ಮಾಡುವ ಸಲುವಾಗಿ ಇಲ್ಲಿನ ಅಂಬೇಡ್ಕರ್‌ ನಗರದಲ್ಲಿ ಡಂಪಿಂಗ್‌ ಯಾರ್ಡ್‌ ತೆರೆದರೆ ನಮ್ಮ ತಕರಾರಿಲ್ಲ. ಆದರೆ ನಮ್ಮ ಗ್ರಾಮ ಹೊರತುಪಡಿಸಿ ಇತರೆ ಗ್ರಾಮಗಳ ಕಸವನ್ನು ಇಲ್ಲಿ ವಿಲೇವಾರಿ ಮಾಡುವುದು ಎಷ್ಟು ಸರಿ. ಕಸ ಸಮರ್ಪಕ ವಿಲೇವಾರಿಯಾಗದೆ ಗಬ್ಬು ವಾಸನೆ ಬಂದರೆ ಇಡೀ ಊರಿಗೆ ಕೆಟ್ಟ ಹೆಸರು ಬರಬಹುದು. ಪರಿಸರಕ್ಕೂ ಸಾಕಷ್ಟು ಹಾನಿಯಾಗಬಹುದು. ಇಲ್ಲಿನ ಕುಡಿಯುವ ನೀರಿನ ವ್ಯವಸ್ಥೆಗೂ ಸಮಸ್ಯೆಯಾಗಬಹುದು. ಕಸದಿಂದ ಏನಾದರೂ ಸಾಂಕ್ರಾಮಿಕ ರೋಗಗಳು ಹರಡಿದರೆ ಅದಕ್ಕೆ ಯಾರೂ ಹೊಣೆ ಎನ್ನುವುದು ಇಲ್ಲಿನ ಗ್ರಾಮಸ್ಥರ ಪ್ರಶ್ನೆಯಾಗಿದೆ.

ಎಷ್ಟು ಮನೆಗಳಿವೆ?
ಸೇನಾಪುರ ರೈಲು ನಿಲ್ದಾಣ ಪಕ್ಕದಲ್ಲೇ ಇರುವ ಅಂಬೇಡ್ಕರ್‌ ನಗರದಲ್ಲಿ ಈ ಕಸ ವಿಲೇವಾರಿ ಘಟಕ (ಡಂಪಿಂಗ್‌ ಯಾರ್ಡ್‌) ತೆರೆಯಲು ಜಾಗ ಗುರುತಿಸಲಾಗಿದೆ. ಈ ಜಾಗದ ಆಸುಪಾಸಿನಲ್ಲಿ ದಲಿತ ಕುಟುಂಬಗಳೇ ಹೆಚ್ಚಾಗಿದ್ದು, ಸುಮಾರು 50-60 ಮನೆಗಳಿವೆ. ಇನ್ನು ಈ ಜಾಗದ ಸಮೀಪವೇ ಹಕೂರಿಗೂ ತೆರಳುವ ಮಾರ್ಗವಿದೆ. ಅದು ಈ ಜಾಗ ಗೋಮಾಳ ವ್ಯಾಪ್ತಿಯಲ್ಲಿ ಬರುವುದರಿಂದ ಡಂಪಿಂಗ್‌
ಯಾರ್ಡ್‌ಗೆ ಹೇಗೆ ಕೊಡಲಾಗಿದೆ ಎನ್ನುವುದಾಗಿ ಅಂಬೇಡ್ಕರ್‌ ನಗರದ ನಿವಾಸಿ ಶಂಭು ಪ್ರಶ್ನಿಸುತ್ತಾರೆ.

ಹೋರಾಟ ಮಾಡುತ್ತೇವೆ
ಸೇನಾಪುರ ಗ್ರಾಮ ಮಾತ್ರವಲ್ಲದೆ ಇತರೆ ಗ್ರಾಮಗಳ ಕಸ ವಿಲೇವಾರಿ ಮಾಡಲು ಡಂಪಿಂಗ್‌ ಯಾರ್ಡ್‌ ಮಾಡುವುದು ಎಷ್ಟು ಸರಿ. ಅವರವರ ಪಂಚಾಯತ್‌ ವ್ಯಾಪ್ತಿಯಲ್ಲಿ ಬೇಕಾದರೆ ಮಾಡಲಿ. ಗ್ರಾಮದ ನಿವೇಶನ ರಹಿತರಿಗೆ ಭೂಮಿ ಕೊಡಲು ಜಾಗ ಇಲ್ಲಂತ ಹೇಳುತ್ತಾರೆ. ಆದರೆ ಬೇರೆ ಬೇರೆ ಗ್ರಾಮಗಳ ಕಸ ವಿಲೇವಾರಿಗೆ ಡಂಪಿಂಗ್‌ ಯಾರ್ಡ್‌ ತೆರೆಯಲು ಮಾತ್ರ ನಮ್ಮ ಗ್ರಾಮದಲ್ಲಿ ಜಾಗವಿದೆ. ನಾವು ಇಲ್ಲಿ ಬೇರೆ ಗ್ರಾಮಗಳ ಡಂಪಿಂಗ್‌ ಯಾರ್ಡ್‌ ತೆರೆಯಲು ಬಿಡುವುದಿಲ್ಲ. ಇಲ್ಲಿನವರು ಮಾತ್ರವಲ್ಲದೆ ಗ್ರಾಮಸ್ಥರೆಲ್ಲ ಸೇರಿ ಹೋರಾಟ ಮಾಡುತ್ತೇವೆ.
– ಅಣ್ಣಪ್ಪ ಪೂಜಾರಿ ಗುಡ್ಡಮ್ಮಾಡಿ, ಗ್ರಾ.ಪಂ. ಮಾಜಿ ಸದಸ್ಯರು

ಪ್ರಸ್ತಾವನೆ ಸಲ್ಲಿಕೆ
3 ಗ್ರಾ.ಪಂ.ಗಳನ್ನು ಒಳಗೊಂಡು ಸೇನಾಪುರದಲ್ಲಿ ಕಸದ ಡಂಪಿಂಗ್‌ ಯಾರ್ಡ್‌ ತೆರೆಯುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿನ ಸ್ಥಳೀಯರ ಆಕ್ಷೇಪಣೆಗಳಿದ್ದಲ್ಲಿ ಪರಿಶೀಲಿಸಲಾಗುವುದು.
– ಆನಂದಪ್ಪ ನಾಯ್ಕ, ಕುಂದಾಪುರ ತಹಶೀಲ್ದಾರ್‌

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.