ಪೇಟೆಗೆ ಬರಲು ಹೊಳೆ ದಾಟುವುದೇ ಕಷ್ಟ !


Team Udayavani, Jul 23, 2021, 6:50 AM IST

ಪೇಟೆಗೆ ಬರಲು ಹೊಳೆ ದಾಟುವುದೇ ಕಷ್ಟ !

ಕುಂದಾಪುರ: ಹಂಗಳೂರಿನ ವಿನಾಯಕ ಥಿಯೇಟರ್‌ ಬಳಿಯಿಂದ ಕೋಡಿ ಪ್ರದೇಶಕ್ಕೆ ಹೋಗುವ ರಸ್ತೆಯಲ್ಲಿ ನಡೆಯಬೇಕಿದ್ದ ಸೇತುವೆ ಕಾಮಗಾರಿ ನಡೆಯದ ಕಾರಣ ಆ ಭಾಗದ ಜನರು ನಿರ್ಬಂಧಿತರಾಗಿದ್ದಾರೆ. ತಾತ್ಕಾಲಿಕವಾಗಿ ಮಾಡಿಕೊಟ್ಟ ರಸ್ತೆಯನ್ನು ಮಳೆಯ ಕಾರಣದಿಂದ ತೆರವು ಮಾಡಲಾಗಿದ್ದು ಜನ ಹೊಳೆ ದಾಟಿಕೊಂಡು ಬರಬೇಕಾದ ಸ್ಥಿತಿ ಇದೆ.

ಕೋಟಿ ರೂ.ಗಳ ಕೋಡಿ ಸೇತುವೆ:

ಕೋಡಿ ಭಾಗಕ್ಕೆ ಎರಡು ಸೇತುವೆಗಳು 2 ಕೋ.ರೂ. ವೆಚ್ಚದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮೂಲಕ ಮಂಜೂರಾಗಿದೆ. ಕಾಮಗಾರಿ ಮಾರ್ಚ್‌ ವೇಳೆಗೆ ಮುಗಿದು ಜನರ, ವಾಹನಗಳ ಓಡಾಟಕ್ಕೆ ದೊರೆಯಬೇಕಿತ್ತು. ಆದರೆ ಕಾಮಗಾರಿ ಸಂದರ್ಭ ಸಮೀಪದ ಮನೆಗಳಿಗೆ ತೊಂದರೆಯಾಗುತ್ತಿದೆ ಎಂದು ಕಾಮಗಾರಿಯ ನೀಲನಕಾಶೆಯಲ್ಲೇ ಬದಲಾವಣೆ ಮಾಡಲಾಯಿತು. ಅದಾದ ಬಳಿಕ ಒಂದು ಬಾರಿ ಮಾಡಿದ ಕಾಮಗಾರಿಯನ್ನು ಇಲಾಖೆ ಇನ್ನಷ್ಟು ಗಟ್ಟಿಯಾಗಿ ನಿರ್ಮಿಸಬೇಕೆಂದು ಅಗೆದು ತೆಗೆಸಿ ಹಾಕಿತು. ಆ ಕಾರಣದಿಂದ ವಿಳಂಬ ಆದರೂ ಕಾಮಗಾರಿಯ ಬಾಳಿಕೆ ಹೆಚ್ಚು ಬರುತ್ತದೆ ಎಂದು ಗುಣಮಟ್ಟದ ಕಾಮಗಾರಿಯ ಕಾಳಜಿಗಾಗಿ ಇಲಾಖೆಯ ಮೇಲೆ ಜನ ಹೆಚ್ಚಿನ ವಿಶ್ವಾಸ ಇಟ್ಟರು. ಆದರೆ ಅನಂತರದ ದಿನಗಳಲ್ಲಿ ಕಾಮಗಾರಿ ವೇಗ ಪಡೆದುಕೊಳ್ಳಲೇ ಇಲ್ಲ

ಅಪೂರ್ಣ:

ಒಂದು ಸೇತುವೆಯ ಸ್ಲಾéಬ್‌ ಕಾಮಗಾರಿ ಪೂರ್ಣವಾಗಿದೆ. ಅದರಿಂದ ರಸ್ತೆಗೆ  ಸಂಪರ್ಕ ಒದಗಿಸಿಲ್ಲ. ಇನ್ನೊಂದು ಸೇತುವೆಯ ಪಿಲ್ಲರ್‌ ಕಾರ್ಯ ಕೂಡ ಆಗಿಲ್ಲ. ಕಲ್ಲು ಒಡೆಯುವ ಕೆಲಸವೇ ಬಾಕಿ ಇದೆ. ಆದರೆ ರಸ್ತೆ ಅಗೆತ ಆಗಿದೆ. ವಾಹನಗಳ ಓಡಾಟಕ್ಕೆಂದು ತಾತ್ಕಾಲಿಕವಾಗಿ ಪೈಪ್‌ ಅಳವಡಿಸಿ ವ್ಯವಸ್ಥೆ ಮಾಡಿಕೊಡಲಾಗಿತ್ತು. ಬಸ್‌ ಸಂಚಾರ ಹಾಗೂ ಘನ ವಾಹನಗಳು ನಿರ್ಬಂಧಿತವಾದ ಕಾರಣ ಇದರ ಮೂಲಕ ರಿಕ್ಷಾಗಳು ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದವು. ಕೋಡಿ ಭಾಗಕ್ಕೆ ಸೀವಾಕ್‌, ಸಮುದ್ರ ತೀರ ಸೇರಿದಂತೆ ಪ್ರವಾಸಿಗರನ್ನು ಕರೆದೊಯ್ಯಲು ರಿಕ್ಷಾಗಳಿಗೂ ಇದೇ ಆಧಾರವಾಗಿತ್ತು.

ತೆರವು:

ಇಲ್ಲಿ ತಾತ್ಕಾಲಿಕ ಮೋರಿ ನಿರ್ಮಿಸಿದ ಕಾರಣ ಈ ಭಾಗದ ಜನರಿಗೇನೋ  ಅನುಕೂಲವಾಯಿತು. ಆದರೆ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿರುತ್ತದೆ. ತಡೆ ಒಡ್ಡಿದರೆ ಕೋಟೇಶ್ವರ, ಬೀಜಾಡಿ ಭಾಗದ ಗದ್ದೆಗಳು ಮುಳುಗಡೆ ಯಾಗುತ್ತದೆ. ಆಗ ಅನಿವಾರ್ಯವಾಗಿ ತಡೆಯನ್ನು ತೆರವುಗೊಳಿಸಿ ನೀರಿನ ಹರಿವನ್ನು ಸುಗಮಗೊಳಿಸಬೇಕಾ ಗುತ್ತದೆ. ತಡೆ ತೆರವಾದಾಗ ಯಾವುದೇ ವಾಹನಗಳು/ಜನ ಹೊಳೆ ದಾಟಲು ಇಲ್ಲಿ ಪರ್ಯಾಯವೇ ಇಲ್ಲ.

ರೈತರ ಆಗ್ರಹ:

ಕೋಡಿ, ಹಂಗಳೂರು ಭಾಗದ ಜನರು ತಾತ್ಕಾಲಿಕ ಮೋರಿ ನಿರ್ಮಿಸಿ ಹೊಳೆ ದಾಟಲು ವ್ಯವಸ್ಥೆ ಮಾಡಿಕೊಡಿ ಎಂದು ಆಗ್ರ ಹಿಸಿದ್ದಾರೆ. ಯಾವುದೇ ಕಾರಣಕ್ಕೂ ಹರಿಯುವ ನೀರಿಗೆ ತಡೆ ಒಡ್ಡಬೇಡಿ, ಕಷ್ಟಪಟ್ಟು ಮಾಡಿದ ಕೃಷಿ ನಾಶವಾಗುತ್ತದೆ ಎಂದು ಕೋಟೇಶ್ವರ, ಬೀಜಾಡಿ ಭಾಗದ ರೈತರು ಆಗ್ರಹಿಸಿದ್ದಾರೆ. ಇದೇ ಕಾರಣಕ್ಕೆ ರವಿವಾರ ಒಂದಷ್ಟು  ಜನ ಸೇರಿ ಮಾತಿನ ಚಕಮಕಿಯೂ ನಡೆದಿತ್ತು. ಪೊಲೀಸರು, ಅಧಿಕಾರಿಗಳು ಭೇಟಿ ನೀಡುವಂತಾಯಿತು.

ಹೊಳೆಯಲ್ಲಿ  ಸಂಚಾರ ಅನಿವಾರ್ಯ :

ಪಾದಚಾರಿಗಳು ಹೊಳೆ ದಾಟಿ ಬರುತ್ತಾರೆ. ನೀರಿನ ಹರಿವು ಹೆಚ್ಚಿದ್ದಾಗ ಇದು ಅಪಾಯಕ್ಕೆ ದಾರಿ. ಅಷ್ಟಲ್ಲದೆ ಕೆಲವರು ದ್ವಿಚಕ್ರ ವಾಹನಗಳು, ಸೈಕಲ್‌ ಮೊದಲಾದವನ್ನೂ ದಾಟಿಸುತ್ತಾರೆ. ಬೇರೆಲ್ಲ ವಾಹನಗಳೂ ಕೋಟೇಶ್ವರದ ಸಮೀಪ ಇರುವ ಎಂಕೋಡಿ ರಸ್ತೆ ಮೂಲಕ ಅಥವಾ ಕುಂದಾಪುರ ಚರ್ಚ್‌ ರಸ್ತೆ ಮೂಲಕ ಕೋಡಿಗೆ ಹೋಗಬೇಕು. ಈ ಅನನುಕೂಲ ಸದ್ಯದ ಮಾಹಿತಿ ಪ್ರಕಾರ ಇನ್ನೂ ಒಂದು ತಿಂಗಳು ಮುಂದುವರಿಯಲಿದೆ. ಕಾಮಗಾರಿ ವೇಗ ಪಡೆಯುತ್ತಿದ್ದರೆ ಈ ಮಳೆಗಾಲದಲ್ಲಿ ಜನರಿಗೆ ಈ ತಾಪತ್ರಯ ಇರುತ್ತಿರಲಿಲ್ಲ. ವಿಳಂಬದ ಕಾರಣ ದಿಂದಾಗಿ ಜನ ಸಂಕಷ್ಟ ಪಡುವಂತಾಗಿದೆ.

ಮಳೆ ಕಡಿಮೆಯಾದ ಬಳಿಕ ಅಥವಾ 1 ವಾರದ ಅನಂತರ ತಾತ್ಕಾಲಿಕವಾಗಿ ಮೋರಿ ಮಾಡಿ ಓಡಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಆ.15ರ ಅನಂತರ ಕಾಮಗಾರಿ ಆರಂಭವಾಗಲಿದ್ದು ಮುಕ್ಕಾಲಂಶ ಆದ ಸೇತುವೆ ಪೂರ್ಣವಾಗಲಿದೆ. ಬಾಕಿ ಉಳಿದ ಸೇತುವೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಕಾಮಗಾರಿ ಆರಂಭವಾದರೆ  50 ದಿನಗಳ ಅವಧಿ ಸಾಲುತ್ತದೆ.  ಹರ್ಷವರ್ಧನ, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.