ಸಾನ್ನಿಧ್ಯ ವೃದ್ಧಿಯಿಂದ ಊರು ಸಮೃದ್ಧಿ: ಬಾಳೆಕುದ್ರು ಶ್ರೀ
Team Udayavani, Apr 25, 2018, 1:15 PM IST
ಕೋಟ: ದೈವ ಹಾಗೂ ದೇವಾಲಯಗಳ ಅಭಿವೃದ್ಧಿಯಿಂದ ಊರು ಸಮೃದ್ಧಗೊಳ್ಳುತ್ತದೆ ಎಂದು ಬಾಳೆಕುದ್ರು ಮಠದ ಶ್ರೀ ನರಸಿಂಹಾ ಶ್ರಮ ಸ್ವಾಮಿ ಹೇಳಿದರು.
ಅವರು ಶನಿವಾರ ಬನ್ನಾಡಿ ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೈವಗಳ ಸಣ್ಣ ಗರೋಡಿ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಸಭಾ ಕಾರ್ಯಕ್ರಮ ದಲ್ಲಿ ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಾಸ್ತಾನ ಹೆಬ್ಟಾರಬೆಟ್ಟು ಚೆನ್ನಯ್ಯ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಳವಂದಿಗರಾದ ಶಂಕರ ಶೆಟ್ಟಿ ಹಾಗೂ ಕ್ಷೇತ್ರದ ಅರ್ಚಕ ಗುಲ್ಲ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ನೂತನ ಸಭಾಂಗಣ, ಕಚೇರಿ ಮತ್ತು ಪಾಕಶಾಲೆಗಳನ್ನು ಉದ್ಘಾಟಿಸಲಾಯಿತು.
ಕುಂದಾಪುರ ಪುರಸಭೆ ಮಾಜಿ ಉಪಾಧ್ಯಕ್ಷ ರಾಜೀವ ಕೋಟ್ಯಾನ್, ಬನ್ನಾಡಿ ಗರೋಡಿ ಆಡಳಿತ ಮೊಕ್ತೇಸರ ಬಿ. ಪ್ರಭಾಕರ ಶೆಟ್ಟಿ, ಕಟಪಾಡಿ ಬಿಲ್ಲವ ಪರಿಷತ್ ಸಂಚಾಲಕ ನವೀನ್ ಅಮೀನ್ ಶಂಕರಪುರ, ಸ್ಥಳವಂದಿಗ ಮಂಜಯ್ಯ ಶೆಟ್ಟಿ ಬನ್ನಾಡಿ ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೆಮ್ಮಣ್ಣು ಸ್ವಾಗತಿಸಿ, ಖಜಾಂಚಿ ವಿನಯ್ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜು ಶ್ರೀಯಾನ್ ಸಮ್ಮಾನಿತರನ್ನು ಪರಿಚಯಿಸಿ, ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು.
ಪುನಃ ಪ್ರತಿಷ್ಠೆ ಪ್ರಯುಕ್ತ ವಡ್ಡರ್ಸೆ ರಾಘವೇಂದ್ರ ಭಟ್ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ, ಬ್ರಹ್ಮಕುಂಭಾ ಭಿಷೇಕ, ಅನ್ನಸಂತರ್ಪಣೆ ಬಳಿಕ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.