ಶೀಘ್ರ ನೂತನ ಕಟ್ಟಡಕ್ಕೆ  ಗ್ರಾಮಕರಣಿಕರ ಕಚೇರಿ ಸ್ಥಳಾಂತರ


Team Udayavani, Aug 22, 2021, 3:20 AM IST

ಶೀಘ್ರ ನೂತನ ಕಟ್ಟಡಕ್ಕೆ  ಗ್ರಾಮಕರಣಿಕರ ಕಚೇರಿ ಸ್ಥಳಾಂತರ

ಹೆಮ್ಮಾಡಿ: ಕಳೆದ 3 ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದೆ, ಶಾಲೆಯ ಕೋಣೆಯೊಂದರಲ್ಲಿ ಕಾರ್ಯಾಚರಿಸುತ್ತಿರುವ ಹೆಮ್ಮಾಡಿಯ ಗ್ರಾಮಕರಣಿಕರ ಕಚೇರಿಯು ಸ್ವಂತ, ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರವಾಗುವ ಕಾಲ ಸನ್ನಿಹಿತವಾಗಿದೆ.

ಈಗಾಗಲೇ ಹೊಸ ಕಟ್ಟಡದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಂಡು, ತಿಂಗಳೊಳಗೆ ಹೊಸ ಕಟ್ಟಡದಲ್ಲಿ ಗ್ರಾಮಕರಣಿಕರ ಕಚೇರಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ.

ಕಂದಾಯ ಇಲಾಖೆಯ ಅಧೀನದಲ್ಲಿ ಬರುವ ಹೆಮ್ಮಾಡಿಯ ಗ್ರಾಮಕರಣಿಕರ ಕಚೇರಿಯು ಹೆಮ್ಮಾಡಿಯ ಸರಕಾರಿ ಹಿರಿಯ ಪ್ರಾಥಮಿ ಕ ಶಾಲೆಯ ಅಕ್ಷರ ದಾಸೋಹದ ಕೊಠಡಿಯಲ್ಲಿ ಕಳೆದ 3 ವರ್ಷಗಳಿಂದ ಕಾರ್ಯ ನಿರ್ವಹಣೆ ಮಾಡುತ್ತಿದೆ.

ಗ್ರಾ.ಪಂ. ಪಕ್ಕದಲ್ಲೇ ಕಚೇರಿ :

ಪಂಚಾಯತ್‌ ಕಟ್ಟಡದಲ್ಲೇ ಗ್ರಾಮಕರಣಿಕರ ಕಚೇರಿಯಿದ್ದರೆ ಅಲ್ಲಿಗೆ ಕೆಲಸ- ಕಾರ್ಯಕ್ಕೆ ಬರುವ ಜನರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಈವರೆಗೆ ರಸ್ತೆಯ ಆಚೆ, ಎದುರಿನ ಶಾಲಾ ಕಟ್ಟಡದಲ್ಲಿ ಗ್ರಾಮ ಕರಣಿಕರ ಕಚೇರಿ ಇದ್ದುದರಿಂದ  ಶಾಲಾ ಮೈದಾನದಲ್ಲಿ ನೀರು ನಿಂತು ಇಲ್ಲಿಗೆ ಬರುವ ವೃದ್ಧರು, ಮಹಿಳೆಯರು, ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ಆದರೆ ಈಗ ಪಂಚಾಯತ್‌ ಪಕ್ಕದಲ್ಲೇ ಈ ಕಟ್ಟಡವಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಅನುಕೂಲವಾಗಲಿದೆ.

ಸ್ಥಳಾಂತರಿಸುವಂತೆ ಮನವಿ :

ಹಿಂದೆ ಹೆಮ್ಮಾಡಿ ಶಾಲೆಯ ಅಕ್ಷರ ದಾಸೋಹದ ಕೊಠಡಿಯಲ್ಲಿ ಈ ಕಚೇರಿಯಿರುವುದರಿಂದ ಶಾಲೆಯ ಕಾರ್ಯ ಚಟುವಟಿಕೆಗಳಿಗೆ ತೊಡಕಾಗುತ್ತಿದ್ದು, ಈ ಕಾರಣದಿಂದ ಇಲ್ಲಿಂದ ಗ್ರಾಮಕರಣಿಕರ ಕಚೇರಿ ಯನ್ನು ಸ್ಥಳಾಂತರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನೂ ಮಾಡಿ ದ್ದರು. ಮಾತ್ರವಲ್ಲದೆ ಬಿಲ್‌ ವಿಚಾರದ ಗೊಂದಲದಿಂದಾಗಿ ಈ ಕಟ್ಟಡಕ್ಕೆ ಸರಿಯಾದ ವಿದ್ಯುತ್‌ ಸೌಲಭ್ಯವೂ ಇರಲಿಲ್ಲ.

ಸುದಿನ ವರದಿ :

ಹೆಮ್ಮಾಡಿಯ ಗ್ರಾಮ ಕರಣಿಕರ ಕಚೇರಿಗೆ ಸ್ವಂತ ಕಟ್ಟಡವಿಲ್ಲದ ಬಗ್ಗೆ, ಕಳೆದ 3 ವರ್ಷಗಳಿಂದ ಶಾಲೆಯ ಕೋಣೆಯೊಂದರಲ್ಲಿ ಈ ಕಚೇರಿ ಕಾರ್ಯಾಚರಿಸುವ ಕುರಿತಂತೆ “ಉದಯವಾಣಿ ಸುದಿನ’ವು ಕಳೆದ ಎ.10 ರಂದು “ಹೆಮ್ಮಾಡಿ: ಗ್ರಾಮ ಕರಣಿಕರಿಗೇ ಸೂಕ್ತ ನೆಲೆಯಿಲ್ಲ’ ಎಂಬ ವಿಶೇಷ ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ವಿಎ – ಅಂಚೆ ಕಚೇರಿ :

ಹೆಮ್ಮಾಡಿ ಪಂಚಾಯತ್‌ ಮುತುವರ್ಜಿಯಲ್ಲಿ ಹಳೆಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಮೀಸಲಿರಿಸಿದ್ದ ಕಟ್ಟಡವನ್ನೇ ಇನ್ನಷ್ಟು ನವೀಕರಣಗೊಳಿಸಿ, ಅದರಲ್ಲಿ ಗ್ರಾಮಕರಣಿಕರ ಕಚೇರಿ ಹಾಗೂ ಗ್ರಾಮೀಣ ಅಂಚೆ ಕಚೇರಿಯನ್ನು ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕವು ಕರ್ಕುಂಜೆ ಗ್ರಾ.ಪಂ.ನೊಂದಿಗೆ ನಡೆಯಲಿರುವುದರಿಂದ ಈ ಕಟ್ಟಡವನ್ನು ಬೇರೆ ಉಪಯೋಗಕ್ಕಾಗಿ ಬಳಸಿಕೊಳ್ಳಲು ಪಂಚಾಯತ್‌ ಮುಂದಾಗಿದೆ.

ತ್ಯಾಜ್ಯ ವಿಲೇವಾರಿ ಘಟಕವನ್ನು ನಾವು ಕರ್ಕುಂಜೆ ಪಂಚಾಯತ್‌ನೊಂದಿಗೆ ನಿರ್ವಹಿಸುವ ಯೋಜನೆ ಹಾಕಿಕೊಂಡಿದ್ದು, ಅದಕ್ಕಾಗಿ ಈ ಕಟ್ಟಡವನ್ನು ಅಂಚೆ ಕಚೇರಿ ಹಾಗೂ ವಿಎ ಕಚೇರಿಗೆ ಬಳಸಿಕೊಳ್ಳಲಾಗುವುದು. ಇದಕ್ಕಾಗಿ ಹಿಂದೆ 90 ಸಾವಿರ ರೂ. ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗಿದ್ದು, ಅದರೊಂದಿಗೆ ಇದನ್ನು ಇನ್ನಷ್ಟು ವಿಸ್ತರಿಸಿ, ಅದಕ್ಕೆ ಬೇಕಾದ ಎಲ್ಲ ಸೌಕರ್ಯವನ್ನು ಒದಗಿಸಲು ಪಂ. ನಿಂದ 2 ಲಕ್ಷ ರೂ. ಅನುದಾನವನ್ನು ವಿನಿಯೋಗಿಸಲಾಗುತ್ತಿದೆ. ಆದಷ್ಟು ಬೇಗ ಆರಂಭವಾಗಲಿದೆ.   – ಯು. ಸತ್ಯನಾರಾಯಣ, ಅಧ್ಯಕ್ಷರು, ಹೆಮ್ಮಾಡಿ ಗ್ರಾ.ಪಂ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.