ಮತ್ತೆ ಗರಿಗೆದರಿದ ಸೌಡ-ಶಂಕರನಾರಾಯಣ ಸಂಪರ್ಕ ಸೇತುವೆ ಬೇಡಿಕೆ

ರಾಷ್ಟ್ರೀಯ ಹೆದ್ದಾರಿ ಶೃಂಗೇರಿ ಉಪ ವಿಭಾಗದ ಅಧಿಕಾರಿಗಳಿಂದ ಪರಿಶೀಲನೆ

Team Udayavani, Oct 6, 2020, 4:31 AM IST

KARKALA.-2

ಸೇತುವೆ ನಿರ್ಮಾಣಕ್ಕಾಗಿ ವಾರಾಹಿ ನದಿಯಲ್ಲಿ ಪ್ರಸ್ತಾವಿತ ಪ್ರದೇಶ.

ಕುಂದಾಪುರ: ಬಹುಕಾಲದ ಬೇಡಿಕೆಯಾಗಿರುವ ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣದ ಬೇಡಿಕೆಯೊಂದು ಈಡೇರುವ ನಿರೀಕ್ಷೆ ಮತ್ತೂಮ್ಮೆ ಗರಿಗೆದರಿದೆ. ಈಗಾಗಲೇ ಸೇತುವೆ ಬೇಡಿಕೆಗೆ ಶಾಸಕರು, ಸಂಸದರಿಂದ ಹಸುರು ನಿಶಾನೆ ಸಿಕ್ಕಿದ್ದು, ಇದರ ಭಾಗವಾಗಿ ಸೌಡಕ್ಕೆ ಶೃಂಗೇರಿ ವಿಭಾಗದ ಹೆದ್ದಾರಿ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಶನಿವಾರ ಸಂಜೆ ಭೇಟಿ ನೀಡಿ ಸೇತುವೆ ನಿರ್ಮಾಣದ ಪ್ರಸ್ತಾವಿತ ಜಾಗವನ್ನು ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಶೃಂಗೇರಿ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಪರಂ ರೆಡ್ಡಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗರಾಜ್‌ ನಾಯ್ಕ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ.

ಶಂಕರನಾರಾಯಣ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸೌಡ, ಹಾರ್ದಳ್ಳಿ – ಮಂಡಳ್ಳಿ , ಮೊಳಹಳ್ಳಿ , ಯಡಾಡಿ- ಮತ್ಯಾಡಿ ಮತ್ತಿತರ ಭಾಗದ ಜನ ಸೇತುವೆಯಿಲ್ಲದೆ ಹಾಲಾಡಿ ಮೂಲಕ ಸುತ್ತುಬಳಸಿ, 10 ಕಿ.ಮೀ. ಹೆಚ್ಚುವರಿ ಸಂಚಾರ ನಡೆಸಬೇಕಾಗಿದೆ. ಈ ಸೇತುವೆಗಾಗಿ ಶಂಕರನಾರಾಯಣ ತಾಲೂಕು ಹೋರಾಟ ಸಮಿತಿ, ಸೌಡ ಮತ್ತಿತರ ಊರುಗಳ ಜನ ಕಳೆದ 30 ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಮೊದಲು ಸೌಡ-ಶಂಕರನಾರಾಯಣ, ಆಲೂರಿನ ರಾಗಿಹಕ್ಲು, ಕಬ್ಬಿನಾಲೆ ಹಾಗೂ ಬೈಂದೂರಿನ ತಾರಾಪತಿ – ಅಳಿವೆಕೋಡಿ ಬಳಿ ಸೇರಿದಂತೆ ಒಟ್ಟು 4 ಸೇತುವೆ ಈ ಹಿಂದೆ ಕೇಂದ್ರ ರಸ್ತೆ ಅಭಿವೃದ್ಧಿ ನಿಗಮದಿಂದ ಮಂಜೂರಾಗಿತ್ತು. ಆಗಿನ ಸಿಎಂ ಸಿದ್ದರಾಮಯ್ಯ ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕೂಡ ನೆರವೇರಿಸಿದ್ದರು. 18 ಕೋ.ರೂ. ಅನುದಾನದ ಪ್ಯಾಕೇಜ್‌ ತಾಂತ್ರಿಕ ಕಾರಣದಿಂದ ಕೈಬಿಟ್ಟು ಹೋಗಿತ್ತು. ಈಗ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಮುತುವರ್ಜಿಯಿಂದಾಗಿ ರಾಜ್ಯ ಸರಕಾರದಿಂದ ಈ ಸೇತುವೆಗಳಿಗೆ 35 ಕೋ.ರೂ. ಅನುದಾನ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಎರಡು ಕ್ಷೇತ್ರಗಳಿಗೂ ಸಂಬಂಧ
ಪ್ರಸ್ತಾವಿತ ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣ ಪ್ರದೇಶದಲ್ಲಿ ವಾರಾಹಿ ನದಿ ಪಾತ್ರದ ಒಂದು ದಡವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರಲ್ಲಿ ಹಾಗೂ ಇನ್ನೊಂದು ತೀರವು ಉಡುಪಿ-ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯ ಕುಂದಾಪುರದಲ್ಲಿದೆ.

2 ಸೇತುವೆಗಳಿಗೆ ಸಿದ್ಧತೆ
ಸದ್ಯ ತಲಾ 10 ಕೋ.ರೂ. ವೆಚ್ಚದಲ್ಲಿ ಸೌಡ ಸೇತುವೆ ಹಾಗೂ ತಾರಾಪತಿ – ಅಳಿವೆಕೋಡಿ ಸೇತುವೆ ನಿರ್ಮಾಣಕ್ಕೆ ಹಸುರು ನಿಶಾನೆ ಸಿಕ್ಕಿದೆ. ಈ ಎರಡು ಸೇತುವೆಗಳ ನಿರ್ಮಾಣ ಕಾಮಗಾರಿಯ ಮರು ಟೆಂಡರ್‌ ಕರೆಯಲು ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಉಳಿದ ಎರಡು ಸೇತುವೆಗಳ ಜಾಗದ ವಿಚಾರ ಹಾಗೂ ಸರಿಯಾದ ರಸ್ತೆ ಸಂಪರ್ಕ ಸಮಸ್ಯೆ ಇರುವುದರಿಂದ ವಿಳಂಬವಾಗುವ ಸಾಧ್ಯತೆಗಳಿವೆ.

ಹತ್ತಾರು ಗ್ರಾಮಗಳಿಗೆ ಲಾಭ
ಪ್ರಮುಖವಾಗಿ ಈ ಸೇತುವೆಯಾದರೆ ಉಡುಪಿ, ಶಿವಮೊಗ್ಗ ಜಿಲ್ಲೆಗೆ ಮತ್ತೂಂದು ಸಂಪರ್ಕ ರಸ್ತೆಯಾಗಲಿದೆ. ಅದಕ್ಕಿಂತಲೂ ಪ್ರಮುಖವಾಗಿ ಸೌಡ ಸೇತುವೆಯಾದರೆ ಉಪ ನೋಂದಣಿ ಕಚೇರಿ ಸಹಿತ ಹತ್ತು ಹಲವು ಸರಕಾರಿ ಕಚೇರಿಗಳನ್ನೂ ಹೊಂದಿರುವ ಶಂಕರ ನಾರಾಯಣಕ್ಕೆ ಹಾರ್ದಳ್ಳಿ-ಮಂಡಳ್ಳಿ, ಮೊಳಹಳ್ಳಿ, ಹೊಂಬಾಡಿ – ಮಂಡಾಡಿ, ಯಡಾಡಿ – ಮತ್ಯಾಡಿ, ಕೊರ್ಗಿ, ಜಪ್ತಿ, ಹೆಸ್ಕಾತ್ತೂರು ಗ್ರಾಮಗಳ ಜನರಿಗೆ ಪ್ರಯೋಜನವಾಗಲಿದೆ. ಸೌಡ ಭಾಗದ ಜನರು ಕುಂದಾಪುರ ಹಾಗೂ ಉಡುಪಿಗೆ ಪ್ರಯಾಣಿಸಲು 10ರಿಂದ 12 ಕಿ.ಮೀ. ಹತ್ತಿರವಾಗಲಿದೆ. ಮಚ್ಚಟ್ಟು, ಸಿದ್ದಾಪುರ, ಹೊಸಂಗಡಿ, ಉಳ್ಳೂರು ಭಾಗದ ಜನರಿಗೆ ಮಣಿಪಾಲ, ಉಡುಪಿಗೆ ತೆರಳಲು ಕೂಡ ಅನುಕೂಲವಾಗಲಿದೆ.

ಬಹಳಷ್ಟು ಪ್ರಯೋಜನ
ಸೌಡ – ಶಂಕರನಾರಾಯಣ ಸೇತುವೆಯಾದಲ್ಲಿ ಸಾವಿರಾರು ಮಂದಿಗೆ ಅನುಕೂಲವಾಗಲಿದೆ. ಸಿದ್ದಾಪುರ, ಹೊಸಂಗಡಿ ಭಾಗದವರಿಗೆ ಜಿಲ್ಲಾ ಕೇಂದ್ರ ಮಣಿಪಾಲ, ಉಡುಪಿ, ಕುಂದಾಪುರಕ್ಕೆ ಸಂಚರಿಸಲು ಹತ್ತಿರವಾಗಲಿದೆ. ಸೌಡ ಭಾಗದವರಿಗೆ ಶಂಕರನಾರಾಯಣಕ್ಕೆ ಬರಲು ಬಹಳಷ್ಟು ಪ್ರಯೋಜನವಾಗಲಿದೆ.
– ಚಿಟ್ಟೆ ರಾಜಗೋಪಾಲ ಹೆಗ್ಡೆ, ಸಂಚಾಲಕರು, ಶಂಕರನಾರಾಯಣ ತಾಲೂಕು ಹೋರಾಟ ಸಮಿತಿ

4 ಸೇತುವೆ ನಿರ್ಮಾಣ
ಸೌಡ – ಶಂಕರನಾರಾಯಣ, ಆಲೂರಿನ ರಾಗಿಹಕ್ಲು, ಕಬ್ಬಿನಾಲೆ ಹಾಗೂ ಬೈಂದೂರಿನ ತಾರಾಪತಿ – ಅಳಿವೆಕೋಡಿ ಈ 4 ಸೇತುವೆಗಳಿಗೆ ಸಂಸದರೊಂದಿಗೆ ಮಾತನಾಡಿ, ರಾಜ್ಯ ಸರಕಾರಕ್ಕೆ ಹೊಸದಾಗಿ ಬೇಡಿಕೆ ಸಲ್ಲಿಸಿದ್ದೇನೆ. 35 ಕೋ.ರೂ. ಅನುದಾನ ಮಂಜೂರಾಗುವ ಭರವಸೆಯಿದೆ. ಅದನ್ನು ಈ ಸೇತುವೆಗಳಿಗೆ ವಿನಿಯೋಗಿಸಲಾಗುವುದು.
– ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.