ಸ್ಥಗಿತಗೊಂಡ ವಿದ್ಯುತ್‌ ಇಲಾಖೆಯ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ


Team Udayavani, Aug 17, 2021, 3:55 AM IST

ಸ್ಥಗಿತಗೊಂಡ ವಿದ್ಯುತ್‌ ಇಲಾಖೆಯ ನೇಮಕಾತಿ ಪ್ರಕ್ರಿಯೆಗೆ ಮರುಚಾಲನೆ

ಕೋಟ: ಒಂದೂವರೇ ವರ್ಷದ ಹಿಂದೆ ವಿದ್ಯುತ್‌ ಇಲಾಖೆಯ ಕೆಲವು ಹುದ್ದೆಗೆ ಸಿಬಂದಿ ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಗಿತ್ತು. ಆದರೆ ಕೊರೊನಾ ಕಾರಣದಿಂದ ಸ್ಥಗಿತಗೊಂಡು ಅವರಿಗೆ ನಿರಾಸೆಯಾಗಿತ್ತು. ಇದೀಗ ಪ್ರಕ್ರಿಯೆಗೆ ಮರುಚಾಲನೆ ನೀಡಲಾಗಿದ್ದು, ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಇಲಾಖೆ ಸಚಿವ ಸುನಿಲ್‌ ಕುಮಾರ್‌ ತಿಳಿಸಿದರು.

ಸೋಮವಾರ ಕೋಟ ಕಾರಂತ ಕಲಾಭವನಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರ್ಚಿಸುವ ಸಲುವಾಗಿ ಬುಧವಾರ ವಿಶೇಷ ಸಭೆ ಕರೆಯಲಾಗಿದೆ ಎಂದರು.

ಪ್ರೀಪೇಯ್ಡ್ ಮೀಟರ್‌ ಚರ್ಚೆ :

ಪ್ರೀಪೇಯ್ಡ್  ಮೀಟರ್‌ ಅಳವಡಿಕೆ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ, 2023 ಡಿಸೆಂಬರ್‌ನೊಳಗೆ ವಿದ್ಯುತ್‌ ಮೀಟರ್‌ಗಳಿಗೆ ಪ್ರೀಪೇಯ್ಡ್ ತಂತ್ರಜ್ಞಾನ ಅಳವಡಿಸುವ ಯೋಜನೆ ಕೇಂದ್ರ ಸರಕಾರದಿಂದ ಪ್ರಸ್ತಾವನೆಯಲ್ಲಿದ್ದು ರಾಜ್ಯದಲ್ಲೂ ಇನ್ನಷ್ಟು ಸುಧಾರಣೆಗಳೊಂದಿಗೆ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದರು.

ಸಕ್ಕರೆ ಕಾರ್ಖಾನೆ :

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರಾರಂಭ ಕುರಿತು ಕೇಳಿದ ಪ್ರಶ್ನೆಗೆ, ಕೋವಿಡ್‌ನಿಂದಾಗ ಅರ್ಥಿಕ ಹಿನ್ನಡೆಯಿಂದಾಗಿ ತತ್‌ಕ್ಷಣ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳುವ ಸ್ಥಿತಿಯಲ್ಲಿಲ್ಲ. ಆದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ರೂಪುರೇಖೆ ಸಿದ್ಧಪಡಿಸುವ ಸಲುವಾಗಿ ಎಲ್ಲ ಶಾಸಕರನ್ನು ಒಗ್ಗೂಡಿಸಿ ಶೀಘ್ರದಲ್ಲಿ ಸಮಾಲೋಚನೆ ನಡೆಸಲಿದ್ದೇವೆ ಎಂದರು.

ದಸರಾ, ರಾಜ್ಯೋತ್ಸವ ಚರ್ಚಿಸಿ ತೀರ್ಮಾನ :

ಕುಂದಾಪುರ: ದಸರಾ, ರಾಜ್ಯೋತ್ಸವ ಆಚರಣೆ, ಪ್ರಶಸ್ತಿ ಪ್ರದಾನ,  ಸಾಹಿತ್ಯ ಪರಿಷತ್ತು ಚುನಾವಣೆ ಸಂಬಂಧ ಶುಕ್ರವಾರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನಿಸಲಿದ್ದೇವೆ ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಅವರು ಸೋಮವಾರ ಇಲ್ಲಿನ ಸರಕಾರಿ ಆಸ್ಪತ್ರೆಯ ಆಕ್ಸಿಜನ್‌ ಘಟಕಕ್ಕೆ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.

ಇಂಧನ ಇಲಾಖೆಗೆ ಸಂಬಂಧಿಸಿದ ಅರಣ್ಯ ಇಲಾಖೆಯ ಆಕ್ಷೇಪ :

ಗಳ ಕುರಿತು ಗಮನದಲ್ಲಿದೆ. ಅರಣ್ಯ ಸಚಿವರ ಜತೆ ಈ ಕುರಿತು ಚರ್ಚಿಸಿ ಅಡೆತಡೆ ನಿವಾರಿಸಿ ವಿದ್ಯುತ್‌ ವ್ಯವಸ್ಥೆ ಸರಿಪಡಿಸಲಾಗುವುದು. ಕೊಲ್ಲೂರಿನಲ್ಲಿ ಸಬ್‌ಸ್ಟೇಶನ್‌ ಸ್ಥಾಪಿಸಲಾಗುವುದು. ಅರೆಕಾಲಿಕ, ಗುತ್ತಿಗೆ ಆಧಾರಿತ ಸಿಬಂದಿ ಖಾಯಂ ಕುರಿತು ಸದ್ಯ ಯಾವುದೇ ಅವಸರದ ತೀರ್ಮಾನಗಳಿಲ್ಲ. ಉಡುಪಿ ಜಿಲ್ಲೆಗೆ ಮೆಡಿಕಲ್‌ ಕಾಲೇಜು ಪಿಪಿಪಿ ಆಧಾರದಲ್ಲಿ ಉಡುಪಿಯ ಕೊಳಲಗಿರಿಯಲ್ಲಿ ಬರಲಿದೆ. ಪೂರ್ಣ ಪ್ರಮಾಣದ ಸರಕಾರಿ ಕಾಲೇಜು ಸ್ಥಾಪನೆಗೆ ಕೋವಿಡ್‌ ಕಾರಣದಿಂದ ಅನುದಾನದ ಸಮಸ್ಯೆ ಇದೆ ಎಂದರು. ಉಡುಪಿ ಜಿಲ್ಲೆಗೆ 50 ವೈದ್ಯರ ನೇಮಕ ಆಗಿದ್ದು ಇನ್ನಷ್ಟು ಸುಧಾರಿತ ಕ್ರಮ ಆರೋಗ್ಯ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಆಗಲಿದೆ ಎಂದರು.

ಸಹಾಯಕ ಕಮಿಷನರ್‌ ಕೆ. ರಾಜು, ತಹಶಿಲ್ದಾರ್‌ ಕಿರಣ್‌ ಗೌರಯ್ಯ, ಕೋವಿಡ್‌ ಆಸ್ಪತ್ರೆ ನೋಡೆಲ್‌ ವೈದ್ಯಾಧಿಕಾರಿ ಡಾ| ನಾಗೇಶ್‌, ಆಹಾರ ನಿಗಮ ರಾಜ್ಯ ಉಪಾಧ್ಯಕ್ಷ ಕಿರಣ್‌ ಕೊಡ್ಗಿ ಉಪಸ್ಥಿತರಿದ್ದರು.

ಎಸ್‌ಡಿಪಿಐ ಪುಂಡಾಟ ಹತ್ತಿಕ್ಕುವೆವು :

ಈಗ ಇರುವುದು ಕಾಂಗ್ರೆಸ್‌ ಸರಕಾರ ಅಲ್ಲ. ಬಿಜೆಪಿ ಸರಕಾರ ಎನ್ನುವುದು ಎಸ್‌ಡಿಪಿಐಯವರ ಗಮನದಲ್ಲಿ ಇರಲಿ. ಖುಷಿ ಬಂದಂತೆ ನಡೆದುಕೊಳ್ಳಲು ನಾವು ಅವಕಾಶ ನೀಡುವುದಿಲ್ಲ ಎಂದು ಪುತ್ತೂರಿನಲ್ಲಿ ನಡೆದ ಸ್ವಾತಂತ್ರ್ಯ ರಥ ತಡೆ ಘಟನೆಗೆ ಸಂಬಂಧಿಸಿ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.