ಮನೆ ಸೇರಲು ಗಾವಡಿಜಡ್ಡು ಗ್ರಾಮಸ್ಥರ ಪರದಾಟ


Team Udayavani, Aug 20, 2021, 3:40 AM IST

Untitled-1

ಹೊಸಂಗಡಿ: ಇದು ಅನೇಕ ವರ್ಷಗಳಿಂದ ಇರುವ ಮಣ್ಣಿನ ರಸ್ತೆ. ಮಳೆಗಾಲದಲ್ಲಿ ಪ್ರತೀ ವರ್ಷ ಈ ಮಾರ್ಗದಲ್ಲಿ ಸಂಚರಿಸಲು ಜನ ಹರಸಾಹಸ ಪಡುತ್ತಾರೆ. ಇದೇ ರಸ್ತೆಗೆ ಪಂಚಾಯತ್‌ನಿಂದ  ಹೊಂಡ ಬಿದ್ದ ಕಡೆಗಳಲ್ಲಿ ಮಳೆಗಾಲ ಆರಂಭವಾಗುವ ಸ್ವಲ್ಪ ಮುನ್ನ ಮಣ್ಣು ಹಾಕಲಾಗಿತ್ತು. ಇದೇ ಈಗ ಇಲ್ಲಿನ ಜನರಿಗೆ ಸಮಸ್ಯೆ ತಂದೊಡ್ಡಿರುವುದು. ವಾಹನ ಮಾತ್ರವಲ್ಲದೆ, ನಡೆದುಕೊಂಡು ಹೋಗಲು ಕೂಡ ಸಂಕಷ್ಟ ಪಡುವಂತಾಗಿದೆ.

ಇದು ಹೊಸಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮರಾಠಿ ಸಮುದಾಯದ ಮನೆಗಳಿರುವ ಗಾವಡಿಜಡ್ಡುವನ್ನು ಸಂಪರ್ಕಿಸುವ ಮಣ್ಣಿನ ರಸ್ತೆಯ ದುಸ್ಥಿತಿ. ಅಲ್ಲಲ್ಲಿ ಕೆಸರುಮಯ ಆಗಿರುವುದರಿಂದ ಈಗ ಇಲ್ಲಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. 25 ಕುಟುಂಬಗಳು

ಗಾವಡಿಜಡ್ಡುವಿನಲ್ಲಿ ಮರಾಠಿ ಸಮುದಾಯದ 25ಕ್ಕೂ ಅಧಿಕ ಕುಟುಂಬಗಳಿದ್ದು, ಇವರೆಲ್ಲ ನಿತ್ಯ ಪೇಟೆ ಅಥವಾ ಇನ್ನು ಬೇರೆ ಬೇರೆ ಕಡೆಗಳಿಗೆ ಹೋಗಲು ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ. ಹೊಸಂಗಡಿ ಪೇಟೆಯಿಂದ ಗಾವಡಿಜಡ್ಡುವಿಗೆ ಸುಮಾರು 3 ಕಿ.ಮೀ. ದೂರವಿದೆ. ಇದರಲ್ಲಿ ಮುಖ್ಯ ರಸ್ತೆಯಿಂದ ಸುಮಾರು 2 ಕಿ.ಮೀ. ದೂರದವರೆಗೆ ಕಾಂಕ್ರೀಟ್‌ ರಸ್ತೆಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ ಅಂದರೆ ಸುಮಾರು 1 ಕಿ.ಮೀ. ದೂರದ ಮಣ್ಣಿನ ರಸ್ತೆ ಮಾತ್ರ ಸಂಪೂರ್ಣ ಹದಗೆಟ್ಟಿದ್ದು, ಜನ ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.

ದುರಸ್ತಿಪಡಿಸಿದರೂ ಪ್ರಯೋಜನವಿಲ್ಲ  :

ಈ ರಸ್ತೆಯನ್ನು ಈ ಬಾರಿಯ ಮಳೆಗಾಲ ಆರಂಭವಾಗುವುದಕ್ಕೂ ಮುನ್ನ  ಹೊಂಡ- ಗುಂಡಿಗಳಿರುವ ಕಡೆಗಳಲ್ಲಿ ಸುಮಾರು 80 ಸಾವಿರ ರೂ. ವೆಚ್ಚದಲ್ಲಿ ಪಂಚಾಯತ್‌ ವತಿಯಿಂದ ದುರಸ್ತಿ ಪಡಿಸಲಾಗಿದೆ. ಆದರೆ ಅಲ್ಲಲ್ಲಿ ಮಣ್ಣು ಹಾಕಿದ್ದರಿಂದ ರಾಡಿಯೆದ್ದಿದ್ದು, ಇದು ಇನ್ನಷ್ಟು ಸಮಸ್ಯೆ ತಂದೊಡ್ಡಿದೆ.

ಪೇಟೆಗೆ ಬರುವುದೇ ಕಷ್ಟ :

ಇಲ್ಲಿ ನೆಲೆಸಿರುವ ಜನರಿಗೆ ಎಲ್ಲದಕ್ಕೂ ಹೊಸಂಗಡಿ ಪೇಟೆಗೆ ಬರಬೇಕು. ಈ ಹದಗೆಟ್ಟ ಕೆಸರುಮಯ ರಸ್ತೆಯಿಂದಾಗಿ ಪೇಟೆ ಕಡೆಗೆ ಬರುವುದೇ ಇವರಿಗೆ ದೊಡ್ಡ ಸಾಹಸಮಯ ಕೆಲಸವಾಗಿದೆ. ಪಡಿತರ ತರಲು, ಅಗತ್ಯದ ದಿನಸಿ ವಸ್ತುಗಳ ಖರೀದಿ ಹೀಗೆ ಎಲ್ಲದಕ್ಕೂ ಸಮಸ್ಯೆಯಾಗಿದೆ. ಇನ್ನು ಯಾರಿಗಾದರೂ ಅನಾರೋಗ್ಯ ಉಂಟಾದರೆ ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು ಸಹ ತುಂಬಾ ಸಮಸ್ಯೆಯಾಗುತ್ತಿದೆ.

ಇತರ ಸಮಸ್ಯೆಗಳೇನು? :

  • ಗಾವಡಿಜಡ್ಡುವಿನಲ್ಲಿರುವ 25 ಕುಟುಂಬಗಳ ಪೈಕಿ ಐದು ಮನೆಗಳಿಗೆ ಇನ್ನೂ ಸಹ ವಿದ್ಯುತ್‌ ಸಂಪರ್ಕವನ್ನೇ ಕಲ್ಪಿಸಿಕೊಟ್ಟಿಲ್ಲ.
  • ಇಲ್ಲಿನ ಕೆಲವು ಮನೆಗಳಿಗೆ ನೆಟ್‌ವರ್ಕ್‌ ಸಮಸ್ಯೆಯಿದೆ.
  • ಪಡಿತರಕ್ಕಾಗಿ 3-4 ಕಿ.ಮೀ. ದೂರ ಸಂಚರಿಸಬೇಕಾಗಿದೆ.

ಕಳಪೆ ಕಾಮಗಾರಿ :

ಈ ನಮ್ಮ ವಾರ್ಡಿನ ಗಾವಡಿಜಡ್ಡುವಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಜನ ವಾಹನದಲ್ಲಿ ಬಿಡಿ, ನಡೆದುಕೊಂಡು ಹೋಗಲು ಸಹ ಸಂಕಷ್ಟಪಡುವಂತಾಗಿದೆ. ಕೆಲವು ದಿನಗಳ ಹಿಂದೆ ದುರಸ್ತಿ ಮಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಕಳಪೆ ಕಾಮಗಾರಿಯಿಂದಾಗಿ ಮತ್ತಷ್ಟು ರಾಡಿಯೆದ್ದು ಹೋಗಿದೆ. ಈ ರಸ್ತೆಯ ಅಭಿವೃದ್ಧಿಗೆ ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ.    – ಸಂತೋಷ್‌, ಸ್ಥಳೀಯ ಗ್ರಾ.ಪಂ. ಸದಸ್ಯರು

ಪ್ರಸ್ತಾವನೆ ಸಲ್ಲಿಕೆ :

ಗಾವಡಿಜಡ್ಡುವಿನ ರಸ್ತೆ ಅಭಿವೃದ್ಧಿ ಬಗ್ಗೆ ಈಗಾಗಲೇ ಪಂಚಾಯತ್‌ ಗಮನದಲ್ಲಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳಿಗೆ ಪಂಚಾಯತ್‌ನಿಂದ ಪ್ರಸ್ತಾವನೆ ಸಲ್ಲಿಸಲಾಗುವುದು.  – ಶ್ವೇತಾಲತಾ, ಹೊಸಂಗಡಿ ಗ್ರಾ.ಪಂ. ಪಿಡಿಒ

 

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.