![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 10, 2020, 4:42 PM IST
ಕುಂದಾಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯದಲ್ಲಿ ರ್ಯಾಂಕ್ ಪಡೆದಿರುವ ಉಡುಪಿ ಜಿಲ್ಲೆಯ ಕಿರಿಮಂಜೇಶ್ವರದ ಸಂದೀಪನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುರಭಿ ಎಸ್ ಶೆಟ್ಟಿ ತನ್ನ ಉದಯವಾಣಿ ಜೊತೆಗೆ ಮಾತನಾಡಿದ್ದು, 625 ಅಂಕವನ್ನು ನಿರೀಕ್ಷಿಸಿದ್ದೆ. ಆದರೆ 624 ಅಂಕ ಬಂದಿದೆ. ಆದರೂ ಸಂತೋಷವಾಗಿದೆ ಎಂದಿದ್ದಾರೆ.
ಪ್ರತಿದಿನ ಆರರಿಂದ ಎಂಟು ಗಂಟೆ ಅಭ್ಯಾಸ ಮಾಡುತ್ತಿದ್ದೆ. ಪೋಷಕರು ಮತ್ತು ಶಿಕ್ಷಕರು ಉತ್ತಮ ಪ್ರೋತ್ಸಾಹ ನೀಡಿದ್ದಾರೆ. ಸ್ನೇಹಿತೆಯ ಜೊತೆಗೆ ಮಾದರಿ ಪ್ರಶ್ನೆ ಪತ್ರಿಕೆಗಳ ಸಹಾಯದಿಂದ ಅಭ್ಯಾಸ ನಡೆಸುತ್ತಿದ್ದೆ. ಎಲ್ಲಾ ಪರೀಕಗ್ಷೆಗಳು ಸುಲಭವಿತ್ತು. 625 ಅಂಕ ಪಡೆಯುವ ನಿರೀಕ್ಷೆಯಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಒಂದು ಅಂಕ ಕಡಿಮೆಯಾಗಿದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕುವೆ ಎಂದಿದ್ದಾರೆ.
ಚಮ್ಮಟೆಹರ್ಲು ಉಪ್ಪುಂದದ ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಮತ್ತು ಸೀಮಾ ಸುರೇಶ್ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣ ಮುಂದುವರಿಸಲಿದ್ದು, ವೈದ್ಯಕೀಯ ಶಿಕ್ಷಣದಲ್ಲಿ ಆಸಕ್ತಿಯಿದೆ ಎನ್ನುತ್ತಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.