Hangarkere: ತಲ್ಲೂರು ಗ್ರಾ.ಪಂ.ನಿಂದ ದಂಡೆ ನಿರ್ಮಾಣ

ಹೂಳೆತ್ತಿ, ಅಭಿವೃದ್ಧಿಪಡಿಸಿದರೆ ಊರಿಗೆ ವರದಾನ

Team Udayavani, Aug 22, 2024, 6:19 PM IST

Tallur Grama Panchayat Embankment Construction

ಕುಂದಾಪುರ: ತಲ್ಲೂರು ಗ್ರಾಮದ ಉಪ್ಪಿನಕುದ್ರು – ತಲ್ಲೂರು ಮುಖ್ಯ ರಸ್ತೆಗೆ ತಾಗಿಕೊಂಡೇ ಇರುವಂತಹ “ಹಂಗಾರ್‌ಕೆರೆ’ಗೆ ತಲ್ಲೂರು ಗ್ರಾ.ಪಂ. ವತಿಯಿಂದ ತುರ್ತಾಗಿ ತಡೆಗೋಡೆ ನಿರ್ಮಾಣ ಕಾರ್ಯ ಬುಧವಾರದಿಂದ ಆರಂಭಗೊಂಡಿದೆ. ಈ ಕೆರೆಯು ರಸ್ತೆಯ ಸನಿಹದಲ್ಲೇ ಇರುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿತ್ತು.

ತಲ್ಲೂರು – ಉಪ್ಪಿನಕುದ್ರು ರಸ್ತೆಯ ತಲ್ಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕಿಂತ ಸ್ವಲ್ಪ ದೂರದಲ್ಲಿಯೇ ಈ ಪುರಾತನ ಕೆರೆಯಿದ್ದು, ಹಿಂದೆ ನಿರ್ಮಿಸಿದ್ದ ದಂಡೆ ಮುರಿದು ಬಿದ್ದಿತ್ತು. ಹತ್ತಿರದಲ್ಲೇ ಅಂಗನವಾಡಿ ಕೇಂದ್ರವೂ ಇದ್ದುದರಿಂದ ಅಪಾಯಕಾರಿಯಾಗಿದ್ದು, ಈಗ ಪಂಚಾಯತ್‌ನಿಂದ ತಡೆಗೋಡೆ ನಿರ್ಮಿಸಲಾಗುತ್ತಿದ್ದು, ಜನ ನಿಟ್ಟುಸಿರು ಬಿಡುವಂತಾಗಿದೆ.

ಹೂಳೆತ್ತಿದರೆ ಕೃಷಿಗೆ ಪೂರಕ
ಇದು 60 ವರ್ಷಗಳಿಗೂ ಹಿಂದಿನ ಕೆರೆಯಾಗಿದ್ದು, ವಿಶಾಲವಾದ ಪ್ರದೇಶದಲ್ಲಿದೆ. ಈ ಕೆರೆಯ ಹೂಳೆತ್ತದೇ 30 ವರ್ಷಗಳಿಗೂ ಹೆಚ್ಚು ಕಾಲವಾಗಿದೆ. ಇನ್ನು 10 ವರ್ಷದ ಹಿಂದೆ ಒಮ್ಮೆ ರಸ್ತೆ ಬದಿಗೆ ದಂಡೆ ನಿರ್ಮಿಸಲಾಗಿತ್ತು. ಅದು ಸಹ ಈಗ ತುಂಡಾಗಿ ಹೋಗಿದೆ. ಈಗ ತಡೆಗೋಡೆ ಆಗುತ್ತಿದೆ. ಅದರೊಂದಿಗೆ ಹೂಳೆತ್ತಿ, ಪುನರುಜ್ಜೀವನಗೊಳಿಸಿದರೆ, ಇಲ್ಲಿನ ಪರಿಸರದ ಸುಮಾರು 25ಕ್ಕೂ ಮಿಕ್ಕಿ ಮನೆಗಳಲ್ಲಿರುವ ಬಾವಿಯ ಅಂತರ್ಜಲ ಮಟ್ಟ ವೃದ್ಧಿಗೂ ಸಹಕಾರಿಯಾಗಬಹುದು. ಇದಲ್ಲದೆ ಇಲ್ಲಿನ ಹತ್ತಾರು ಎಕರೆ ಗದ್ದೆಗಳಲ್ಲಿ ಎರಡನೇ ಬೆಳೆ ಬೆಳೆಯಲು ಸಹ ಪೂರಕವಾಗಲಿದೆ. ಕೆರೆಯ ಹೂಳೆತ್ತಿ, ಕುಸಿಯದಂತೆ ಕಲ್ಲುಗಳನ್ನು ಕಟ್ಟಿ, ತಡೆಗೋಡೆ ನಿರ್ಮಿಸಿದರೆ ಈ ಪರಿಸರದ ಉತ್ತಮ ನೀರಿನ ಮೂಲ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಅಭಿವೃದ್ಧಿಗೆ ಪ್ರಸ್ತಾವ
ಹಂಗಾರ್‌ಕೆರೆ ರಸ್ತೆ ಬದಿಯೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ತುರ್ತಾಗಿ ಪಂಚಾಯತ್‌ ವತಿಯಿಂದ ತುರ್ತಾಗಿ ತಡೆಗೋಡೆ ನಿರ್ಮಿಸುತ್ತಿದ್ದೇವೆ. ಇನ್ನು ಲೋಕೋಪಯೋಗಿ ಇಲಾಖೆಗೂ ಪಂಚಾಯತ್‌ನಿಂದ ಪತ್ರ ಬರೆದಿದ್ದೇವೆ. ಇನ್ನು ಕೆರೆಯ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಶಾಸಕರಿಗೂ ಪ್ರಸ್ತಾವನೆ ಸಲ್ಲಿಸಿದ್ದೇವೆ.
– ಗಿರೀಶ್‌ ನಾಯ್ಕ, ಅಧ್ಯಕ್ಷರು, ತಲ್ಲೂರು ಗ್ರಾ.ಪಂ.

ಟಾಪ್ ನ್ಯೂಸ್

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Kundapura ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಆರೋಪಿಗೆ ನಿರೀಕ್ಷಣ ಜಾಮೀನು ಮಂಜೂರು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Malpe: ಬೆಂಕಿ ಉಗುಳುವ ವೇಳೆ ಸೀಮೆ ಎಣ್ಣೆ ಹೊಟ್ಟೆಯೊಳಗೆ ಹೋಗಿ ವ್ಯಕ್ತಿ ಸಾವು

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಗಾಯ

Kaup: ಸ್ಕೂಟಿಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

ಅರ್ಧ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕಾರಿ

Malpe: ಅರ್ಧ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕಾರಿ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Exam 3

M.Com ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.