![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-415x229.jpg)
Kundapura ತಲ್ಲೂರು : ಕುಸಿದು ಬಿದ್ದು 12ರ ಬಾಲಕ ಸಾವು
Team Udayavani, Oct 21, 2023, 8:10 PM IST
![Kundapura ತಲ್ಲೂರು : ಕುಸಿದು ಬಿದ್ದು 12ರ ಬಾಲಕ ಸಾವು](https://www.udayavani.com/wp-content/uploads/2023/10/boy-620x372.jpg)
ಕುಂದಾಪುರ: ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್ ಶೆಟ್ಟಿ (12) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಅ.21ರಂದು ತಲ್ಲೂರಿನಲ್ಲಿ ಸಂಭವಿಸಿದೆ.
ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ತಲ್ಲೂರಿನ ಮನೆ ಬಳಿ ಶಾಲಾ ಬಸ್ಸಿಗಾಗಿ ಕಾಯುತ್ತಿದ್ದು, ಬಸ್ ಬಂದಾಗ ಹತ್ತುವ ವೇಳೆ ಅಸ್ವಸ್ಥಗೊಂಡು, ಕುಸಿದು ಬಿದ್ದಿದ್ದು, ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಬೆಳಗ್ಗೆ 10.20ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.
ಈತ ಹಟ್ಟಿಯಂಗಡಿ ಸಿದ್ದಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕಲಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲನಾಗಿದ್ದ. ಶುಕ್ರವಾರವಷ್ಟೇ ಆತ ಹುಟ್ಟುಹಬ್ಬವನ್ನು ಆಚರಿಸಿದ್ದು, ಶನಿವಾರ ಸಾವನ್ನಪ್ಪಿರುವುದು ಮಾತ್ರ ದುರಂತ.
ಇಬ್ಬರು ಮಕ್ಕಳು ಸಾವು
ಅರುಣ್ ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ಅನುಶ್ರೀ (13) ಕಳೆದ ವರ್ಷದ ಅ.27ರಂದು ಮನೆಯಲ್ಲಿ ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈಗ ಪುತ್ರನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.
ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ತಿಳಿದಯ ಬರಬಹುದು. ತಂದೆ ಅರುಣ್ ಕುಮಾರ್ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!](https://www.udayavani.com/wp-content/uploads/2024/07/ONLINE-150x84.jpg)
Manipal ಆನ್ಲೈನ್ ವಂಚಕರ ಬಲೆಗೆ ಬಿದ್ದ ಪಿಎಚ್.ಡಿ. ವಿದ್ಯಾರ್ಥಿನಿ!
![Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ](https://www.udayavani.com/wp-content/uploads/2024/07/r-150x75.jpg)
Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ
![Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ](https://www.udayavani.com/wp-content/uploads/2024/07/kota-a-150x94.jpg)
Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ
MUST WATCH
ಹೊಸ ಸೇರ್ಪಡೆ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.