![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 17, 2020, 8:56 PM IST
ಸಾಂದರ್ಭಿಕ ಚಿತ್ರ
ಗಂಗೊಳ್ಳಿ: ದೇವಸ್ಥಾನದೊಳಕ್ಕೆ ವ್ಯಕ್ತಿಯೊಬ್ಬರು ಗುರುವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಕಾಪಾಡಲು ಹೋದ ಇಬ್ಬರು ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಗಂಗೊಳ್ಳಿಯ ದೇವಸ್ಥಾನವೊಂದರಲ್ಲಿ ಸ್ಥಳೀಯ ನಿವಾಸಿ ದಾಕಹಿತ್ಲುವಿನ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ರಕ್ಷಿಸಲು ಹೋದ ಲಕ್ಷ್ಮಣ್ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಅವರು ರಕ್ಷಣೆ ಮಾಡಲು ಹೋಗಿ ಸುಟ್ಟ ಗಾಯಗಳಾಗಿವೆ.
ಗಂಗೊಳ್ಳಿಯ ಖಾರ್ವಿಕೇರಿ ಸಮೀಪ ದಲ್ಲಿರುವ ದೇವಸ್ಥಾನಕ್ಕೆ ಅಮಾವಾಸ್ಯೆ ಪೂಜೆ ಇದ್ದ ಹಿನ್ನೆಲೆ ಭಕ್ತರು ಬಂದಿದ್ದರು. ಇದೇ ವೇಳೆ ಪೆಟ್ರೋಲ್ ಕ್ಯಾನ್ ಹಿಡಿದು ಬಂದ ರಾಘವೇಂದ್ರ ಮೈಮೇಲೆ ಸುರಿದು ಕೊಂಡಿದ್ದು ನೋಡ ನೋಡುತ್ತಿದ್ದಂತೆಯೇ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಗಾಯಾಳುವನ್ನು ಗಂಗೊಳ್ಳಿ ಆಪತ್ಭಾಂದವ ಆ್ಯಂಬುಲೆನ್ಸ್ ಮೂಲಕ ಸಮಾಜ ಸೇವಕ ಇಬ್ರಾಹಿಂ ಗಂಗೊಳ್ಳಿ ಹಾಗೂ ರಜಬ್ ಬುದ್ಧ ಅವರು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಯುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.