![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Apr 17, 2020, 6:38 AM IST
ವಂಡ್ಸೆ: ಕೋವಿಡ್ 19 ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಮನೆಯಿಂದ ಹೊರ ಬರುವ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವೆಂದು ಘೋಷಿಸಿದ್ದು, ಇದರಿಂದ ಮಾಸ್ಕ್ ಗೆ ಮತ್ತಷ್ಟು ಬೇಡಿಕೆ ಹೆಚ್ಚುತ್ತಿದೆ. ಇದರಿಂದ ಕೆಲವೆಡೆ ಮಾಸ್ಕ್ ಕೊರತೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಂಡ್ಸೆ ಗ್ರಾ.ಪಂ. ಅಧೀನದ “ಮಹಿಳಾ ಸ್ವಾವಲಂಬನಾ’ ಕೇಂದ್ರದ ವನಿತೆಯರು ಬಟ್ಟೆಯ ಮಾಸ್ಕ್ ಅನ್ನು ತಯಾರಿಸುತ್ತಿದ್ದಾರೆ.
ಇಲ್ಲಿನ “ಸ್ವಾವಲಂಬನಾ’ ಎನ್ನುವ ಮಹಿಳೆಯರ ಹೊಲಿಗೆ ವೃತ್ತಿ ಮತ್ತು ತರಬೇತಿ ಕೇಂದ್ರ ಹಾಗೂ ಪರಿಸರ ಸ್ನೇಹಿ ಬ್ಯಾಗ್ ತಯಾರಿಕಾ ಕೇಂದ್ರಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯೇ ಮಾಸ್ಕ್ ತಯಾರಿಸಲು ನಿರ್ದೇಶನ ನೀಡಿದೆ.
ಇಲ್ಲಿ ಸದ್ಯ 30 ಮಂದಿ ಸದಸ್ಯರಿದ್ದಾರೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದಲ್ಲಿ 5-6 ಮಂದಿ ಮಾತ್ರ ಬಟ್ಟೆಯ
ಮಾಸ್ಕ್ ಗಳನ್ನು ಸಿದ್ಧಪಡಿಸುತ್ತಿದ್ದು, ಬಾಕಿ ಉಳಿದ ಸದಸ್ಯರು ತಮ್ಮ ಮನೆಯಿಂದಲೇ ತಯಾರಿಸಿಕೊಡುತ್ತಿದ್ದಾರೆ.
ಕೇಂದ್ರದ ಮೇಲ್ವಿಚಾರಕಿ ಮಹಾಲಕ್ಷ್ಮಿ ಅವರು ಹೇಳುವಂತೆ ದಿನವೊಂದಕ್ಕೆ ಒಬ್ಬರು 60 -70 ಮಾಸ್ಕ್ ಗಳನ್ನು ತಯಾರಿಸುತ್ತಾರೆ. ಈಗಾಗಲೇ 2 ಸಾವಿರ ಮಾಸ್ಕ್ ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಖಾಸಗಿಯವರಿಂದಲೂ ಬೇಡಿಕೆ ಬರುತ್ತಿದ್ದು, ಒಂದಕ್ಕೆ 15 ರೂ. ದರದಲ್ಲಿ ಕೊಡಲಾಗುತ್ತಿದೆ ಎನ್ನುತ್ತಾರೆ.
ಕೊರತೆಯಾಗಬಾರದು ಎಂಬ ಉದ್ದೇಶ
“ಎಲ್ಲೆಡೆ ಮಾಸ್ಕ್ ಅವಶ್ಯಕತೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕೊರತೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಗ್ರಾ.ಪಂ. ಸಹಕಾರದೊಂದಿಗೆ ಸ್ವಾವಲಂಬನಾ ಕೇಂದ್ರದ ಸದಸ್ಯರು ಒಮ್ಮೆ ಬಳಸಿ, ಒಗೆದು ಮತ್ತೂಮ್ಮೆ ಬಳಸುವಂತಹ ಬಟ್ಟೆಯ ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ’ ಎನ್ನುವುದಾಗಿ ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ “ಉದಯವಾಣಿ’ಗೆ ಮಾಹಿತಿ ನೀಡಿದರು.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.