ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಈಗ ಆರಂಭವಾದರಷ್ಟೇ ಪ್ರಯೋಜನ


Team Udayavani, Oct 28, 2020, 6:12 AM IST

Paddy

ಸಾಂದರ್ಭಿಕ ಚಿತ್ರ

ಕೋಟ: ಮಳೆಯ ಕಣ್ಣಾ ಮುಚ್ಚಲೆಯ ನಡುವೆ ಭತ್ತದ ಕಟಾವು ಪ್ರಕ್ರಿಯೆ ಆರಂಭಗೊಂಡಿದ್ದು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಕರಾವಳಿಯ ರೈತರಲ್ಲಿ ಭತ್ತವನ್ನು ಸಂಗ್ರಹಿಸಿಟ್ಟು ಬೆಲೆ ಏರಿಕೆಯಾದಾಗ ಮಾರಾಟ ಮಾಡುವ ಅಭ್ಯಾಸ‌ ಕಡಿಮೆ. ಮಳೆ, ಗೋದಾಮುಗಳ ಕೊರತೆ ಮುಂತಾದ ಕಾರಣಗಳಿಂದಾಗಿ ಉತ್ಪನ್ನವನ್ನು ಬೇಗನೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ.

ರೈತರ ಈ ಅನಿವಾರ್ಯತೆಯನ್ನು ಬಳಸಿಕೊಂಡು ಕೆಲವು ಮಿಲ್‌ಗ‌ಳು ಕಡಿಮೆ ಹಣಕ್ಕೆ ಭತ್ತವನ್ನು ಖರೀದಿಸಿ ರೈತರಿಗೆ ನಷ್ಟ ಮಾಡುತ್ತಾರೆ. ಆದ್ದರಿಂದ ಕಟಾವಿನ ಆರಂಭದಲ್ಲೇ ಅಂದರೆ ಅಕ್ಟೋಬರ್‌ ಅಂತ್ಯದೊಳಗೆ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕೇಂದ್ರಗಳು° ತೆರೆದರೆ ಸಾಕಷ್ಟು ಅನುಕೂಲವಾಗಲಿದೆ. ಇದು ಉಡುಪಿ ಜಿಲ್ಲೆಯ ರೈತರ ಆಗ್ರಹವೂ ಹೌದು.

ಕಳೆದ ಬಾರಿ ನವೆಂಬರ್‌ ಆರಂಭದಲ್ಲಿ ಉಡುಪಿ ಜಿಲ್ಲಾಡಳಿತ ಖರೀದಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿತ್ತು. ಸರಕಾರದಿಂದ ವಿಳಂಬವಾಗಿ ಅನುಮೋದನೆಗೊಂಡು ಜನವರಿ ಮೊದಲ ವಾರ ಆರಂಭಗೊಂಡಿತ್ತು. ಅಷ್ಟರಲ್ಲಿ ಬಹುತೇಕ ರೈತರು ಭತ್ತವನ್ನು ಖಾಸಗಿ ಮಿಲ್‌ಗಳಿಗೆ ಮಾರಾಟ ಮಾಡಿ ಆಗಿದ್ದರಿಂದ ಖರೀದಿ ಕೇಂದ್ರದ ಕಡೆ ಯಾರೂ ಸುಳಿದಿರಲಿಲ್ಲ. ಈ ವರ್ಷವಾದರೂ ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡು ಪ್ರಕ್ರಿಯೆಗಳನ್ನು ಚುರುಕುಗೊಳಿಸಿದ ರಷ್ಟೇ ಪ್ರಯೋಜನವಾದೀತು.

ಪ್ರತಿ ತಾ|ನಲ್ಲಿ ಸ್ಥಾಪನೆಗೆ ಬೇಡಿಕೆ
ಕಳೆದ ಸಾಲಿನಲ್ಲಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಕೇಂದ್ರಗಳ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿತ್ತು. ಈ ರೀತಿ ಜಿಲ್ಲೆಯಲ್ಲಿ ಎರಡು- ಮೂರು ಕೇಂದ್ರಗಳನ್ನು ಸ್ಥಾಪಿಸಿದರೆ ಸಾಗಾಟ ಮುಂತಾದವುಗಳಿಗೆ ಸಮಸ್ಯೆ ಯಾಗಲಿದೆ. ಆದ್ದರಿಂದ ಪ್ರತಿ ತಾಲೂಕಿಗೊಂದರಂತೆ ಖರೀದಿ ಕೇಂದ್ರ ಆರಂಭಿಸಬೇಕು ಮತ್ತು ಪ್ರತಿ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿ ಖರೀದಿ ಕೇಂದ್ರ ತೆರೆಯುವ ವ್ಯವ
ಸ್ಥೆಯ ಬದಲು ರೈತರ ಎಲ್ಲ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಸುವಂತೆ ಕೇಂದ್ರಗಳು ಯಾವತ್ತೂ ತೆರೆದಿರಬೇಕು ಎನ್ನುವ ಬೇಡಿಕೆಯೂ ಇದೆ.

ರೈತರ ಜವಾಬ್ದಾರಿಯೂ ಇದೆ
ಹೆಚ್ಚಿನ ರೈತರು ಕಟಾವು ಮಾಡಿದ ಕೂಡಲೇ ಮಾರಾಟ ಮಾಡುವುದರಿಂದ ಮಳೆಯಲ್ಲಿ ನೆನೆದ ಭತ್ತವಾಗಿದ್ದಲ್ಲಿ ಗುಣಮಟ್ಟ ಕುಸಿಯುತ್ತದೆ ಹಾಗೂ ಉತ್ತಮ ಧಾರಣೆಯೂ ಸಿಗುವುದಿಲ್ಲ. ಬಿಸಿಲಲ್ಲಿ ಒಣಗಿಸಿ ಗುಣಮಟ್ಟ ಕಾಯ್ದು ಮಾರಾಟ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎನ್ನುವ ಅಭಿಪ್ರಾಯವಿದೆ.

ದ.ಕ.ದಲ್ಲಿ ಬೇಡಿಕೆ ಇಲ್ಲ
ಈ ಬಾರಿ ಉಡುಪಿ ಜಿಲ್ಲೆಯಲ್ಲಿ 35,754 ಹೆಕ್ಟೇರ್‌ ಹಾಗೂ ದ.ಕ. ಜಿಲ್ಲೆಯಲ್ಲಿ 11,260 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಉಡುಪಿ ಜಿಲ್ಲೆಗೆ ಹೋಲಿಸಿದರೆ ದ.ಕ.ದಲ್ಲಿ ಭತ್ತದ ಬೆಳೆಯ ಪ್ರಮಾಣ ಕಡಿಮೆ ಹಾಗೂ ಅಲ್ಲಿ ಸ್ಥಳೀಯ ಮಾರುಟಕ್ಟೆಯಲ್ಲೇ ವಿಲೇವಾರಿ ನಡೆಯುವುದರಿಂದ ಹಲವು ವರ್ಷಗಳಿಂದ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತರಿಂದ ಬೇಡಿಕೆ ಇಲ್ಲ ಎಂದು ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಡಾ| ಸೀತಾ ತಿಳಿಸಿದ್ದಾರೆ.

ತತ್‌ಕ್ಷಣ ಕ್ರಮಕ್ಕೆ ಸೂಚನೆ
ಜಿಲ್ಲೆಯಲ್ಲಿ ಬೆಂಬಲ ಬೆಲೆಯ ಭತ್ತ ಖರೀದಿ ಕೇಂದ್ರ ತೆರೆಯುವ ಕುರಿತು ಸರಕಾರಕ್ಕೆ ಬೇಡಿಕೆ ಸಲ್ಲಿಸಬೇಕಿದ್ದು, ತತ್‌ಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಈ ಕುರಿತು ಕ್ರಮ ಜರಗಿಸಲಾಗುವುದು.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.