ಮುಸುಕುಧಾರಿ ತಂಡದಿಂದ ಕಳವು ಯತ್ನ: 3 ತಿಂಗಳ ಬಳಿಕ ಮೂವರು ಆರೋಪಿಗಳ ಬಂಧನ


Team Udayavani, Apr 5, 2024, 7:11 AM IST

ಮುಸುಕುಧಾರಿ ತಂಡದಿಂದ ಕಳವು ಯತ್ನ: 3 ತಿಂಗಳ ಬಳಿಕ ಮೂವರು ಆರೋಪಿಗಳ ಬಂಧನ

ತೆಕ್ಕಟ್ಟೆ: ಇಲ್ಲಿನ ರಾ.ಹೆ. 66ರ ಸಮೀಪ ಶಾನುಭಾಗ್‌ ಕಾಂಪ್ಲೆಕ್ಸ್‌ನಲ್ಲಿರುವ ಚಿನ್ನದ ಅಂಗಡಿಗೆ ಮುಸುಕುಧಾರಿ ಕಳ್ಳರ ತಂಡವೊಂದು ಕಳವಿಗೆ ಯತ್ನ ನಡೆಸಿದ ಘಟನೆ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ನಡೆದಿತ್ತು.

ಈ ಕುರಿತು ಯಾವುದೇ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಜ. 1ರಂದು “ಉದಯವಾಣಿ’ಯಲ್ಲಿ ಸಿಸಿ ಟಿವಿ ದೃಶ್ಯಾವಳಿಯ ಆಧಾರದಲ್ಲಿ ವರದಿ ಪ್ರಕಟಿಸಲಾಗಿತ್ತು. ಅನಂತರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರ ಆದೇಶದಂತೆ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ ಕೋಟ ಪೊಲೀಸರು ಸುಮಾರು 3 ತಿಂಗಳ ಬಳಿಕ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ನಂತೂರಿನ ಅರ್ಷಿತ್‌ ಅವಿನಾಶ್‌ ದೋಡ್ರೆ ಯಾನೆ ಮಹಮ್ಮದ್‌ ಅರ್ಷದ್‌ (23), ಬೈಂದೂರು ಪಡುವರಿಯ ರಿಝಾÌನ್‌ (24) ಹಾಗೂ ಮಹಮ್ಮದ್‌ ಅರ್ಬಾಝ್ (23) ಬಂಧಿತರು.

ಘಟನೆಯ ವಿವರ :

ಇಲ್ಲಿನ ರಾ.ಹೆ. 66ರ ಸಮೀಪ ತೆಕ್ಕಟ್ಟೆ ಕೆನರಾ ಬ್ಯಾಂಕ್‌ನ ಹತ್ತಿರದಲ್ಲಿದ್ದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿರುವ ಮೀನಾಕ್ಷಿ ಫರ್ನಿಚರ್‌ ಶೋ ರೂಮ್‌, ಗೋದಾಮು, ಟೈಲರ್‌ ಶಾಪ್‌ನ ಶಟರ್‌ ಬೀಗ ಮುರಿದು ಒಳ ಪ್ರವೇಶಿಸಿದ್ದ ಕಳ್ಳರು ಡಿ. 21ರಂದು ಕಳವಿಗೆ ವಿಫಲ ಯತ್ನ ನಡೆಸಿದ್ದರು. ಅನಂತರ ಡಿ. 29ರಂದು ಇಬ್ಬರು ಮುಸುಕುಧಾರಿ ಕಳ್ಳರು ಮಾರಕಾಸ್ತ್ರಗಳನ್ನು ಹಿಡಿದು ಪ್ರಮುಖ ಭಾಗದ ಶಾನುಭಾಗ್‌ ಕಾಂಪ್ಲೆಕ್ಸ್‌ನಲ್ಲಿರುವ ಚಿನ್ನದ ಅಂಗಡಿಯ ಬೀಗ ಮುರಿಯಲು ಪ್ರಯತ್ನಿಸಿ ಇನ್ನುಳಿದ ಅಂಗಡಿಗಳನ್ನು ವೀಕ್ಷಿಸಿ ಕಳವಿಗೆ ಯತ್ನ ನಡೆಸಿದ್ದರು. ಕಾಂಪ್ಲೆಕ್ಸ್‌ನಲ್ಲಿ ಅಳವಡಿಸಿದ್ದ ಸಿಸಿ ಕೆಮರಾದಲ್ಲಿ ಕಳ್ಳರ ಚಲನವಲನ ಸೆರೆಯಾಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೂ ಅಂಗಡಿ ಮಾಲಕರು ಪೊಲೀಸರ ಗಮನಕ್ಕೆ ತರಲು ಹಿಂದೇಟು ಹಾಕಿದ್ದರು.

ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ತೆಕ್ಕಟ್ಟೆಯ ಚಿನ್ನದ ಅಂಗಡಿ, ಹಳ್ಳಾಡಿಯ ತಲ್ಲೂರು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಬೇಕರಿ, ಕೋಟ ಮೂರುಕೈಯ ವಿವೇಕ ಮೆಡಿಕಲ್‌ ಶಾಪ್‌, ಸಾೖಬ್ರಕಟ್ಟೆ ನಂದಿಕೇಶ್ವರ ಹೊಟೇಲ್‌ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದರು. ಎ. 4ರಂದು ಘಟನ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಮಹಜರು ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಕೋಟ ಪೊಲೀಸ್‌ ಠಾಣೆಯ ಪಿಎಸ್‌ಐ ಸುಧಾ ಪ್ರಭು, ಎಎಸ್‌ಐ ರವಿ ಕುಮಾರ್‌, ಸಿಬಂದಿ ಪ್ರಸನ್ನ ಮಾಲಾಡಿ, ವಿಜೇಂದ್ರ, ರಾಘವೇಂದ್ರ, ಗಣೇಶ್‌, ರೇವತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

1-kotaaaaaa

Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

train-track

Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

1–a-KNDp[

Kundapura; ಕಂಚುಗೋಡಲ್ಲಿ ಕಡಲ್ಕೊರೆತ: ಮನೆಗಳು ಅಪಾಯದಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.