Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

ಪಾರಂಪರಿಕ ಕಟ್ಟಡ ಉಳಿಸಿ, ಇಲ್ಲವೇ ಶೈಕ್ಷಣಿಕ ವರ್ಷಾಂತ್ಯದವರೆಗೆ ಸಮಯ ಕೊಡಿ: ಗ್ರಾಮಸ್ಥರ ಆಗ್ರಹ

Team Udayavani, Oct 24, 2024, 5:10 PM IST

7

ತೆಕ್ಕಟ್ಟೆ: ಶತಮಾನೋತ್ತರ ಬೆಳ್ಳಿಹಬ್ಬ ಆಚರಿಸಿದ ತೆಕ್ಕಟ್ಟೆ ಪಿಎಂಶ್ರೀ ಕುವೆಂಪು ಶತಮಾನೊತ್ಸವ ಸರಕಾರಿ ಮಾದರಿ ಶಾಲೆಯ ಕಟ್ಟಡವನ್ನು ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಹೊಡೆತದಿಂದ ರಕ್ಷಿಸಿ ಎಂಬ ಕೂಗು ಜೋರಾಗಿದೆ.

ಶಾಲಾ ಶತಮಾನೋತ್ಸವ ಸಂದರ್ಭದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣವಾಗಿರುವ ಶಾಲಾ ಕಟ್ಟಡವನ್ನು ಶೇ.70 ರಷ್ಟು ತೆರವುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಆದರೆ, ಇದನ್ನು ತೆರವುಗೊಳಿಸಿದರೆ 130ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಗತಿ ಕೋಣೆಯ ಕೊರತೆ ಎದುರಾಗಲಿದೆ.

1892ರಲ್ಲಿ ಸ್ಥಾಪಿತಗೊಂಡ ತೆಕ್ಕಟ್ಟೆ ಪಿಎಂಶ್ರೀ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆಯು ಗುಣಾತ್ಮಕ ಶಿಕ್ಷಣಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿದೆ. ಇಲಾಖೆಯಿಂದ ಎ ಗ್ರೇಡ್‌ ಪಡೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ. ಇಲ್ಲಿ ಸುಮಾರು 672 ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದು, ಇಂಥ ಶಾಲೆಯ ಕಟ್ಟಡಕ್ಕೆ ಈಗ ಗ್ರಹಣ ಬಡಿದಿದೆ.

ಏನಿದು ಸಮಸ್ಯೆ?
1996ರಲ್ಲಿ ಶತಮಾನೋತ್ಸವ ಕಟ್ಟಡ ನಿರ್ಮಾಣವಾಗಿದ್ದು, ಅದರಲ್ಲಿನ 5 ತರಗತಿ ಕೋಣೆಗಳಲ್ಲಿ 2,4,5, ಹಾಗೂ 7ನೇ ತರಗತಿಯ ಸುಮಾರು 130ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕುಂದಾಪುರ – ಸುರತ್ಕಲ್‌ ರಾ.ಹೆ.66 ಚತುಷ್ಪಥ ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸರ್ವಿಸ್‌ ರಸ್ತೆ ನಿರ್ಮಾಣಕ್ಕಾಗಿ ಈ ಕಟ್ಟಡವನ್ನು ತೆರವು ಮಾಡಬೇಕು ಎಂದು ಸೂಚಿಸಿದೆ. ಅ.18ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್‌ ಅಬ್ದುಲ್‌ ಜಾವಿದ್‌ ಅವರ ತಂಡ ಸ್ಥಳಕ್ಕೆ ಧಾವಿಸಿ ಕಟ್ಟಡ ತೆರವಿಗೆ ಕೊನೆಯ ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗೆ ತೊಂದರೆ
ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಈಗಾಗಲೇ ಸಂಬಂಧ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಎರಡನೆಯ ಸ್ಥಾನದಲ್ಲಿರುವ ಸಂಸ್ಥೆಯ ಕಟ್ಟಡ ತೆರವಿಗೆ ಏಕಾಏಕಿ ಮುಂದಾದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಕುರಿತು ವಿದ್ಯಾಂಗ ಉಪನಿರ್ದೇಶಕರು ಹಾಗೂ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿದೆ.
– ಲಲಿತಾ ಸಖರಾಮ್‌, ಪದವೀಧರೇತರ ಮುಖ್ಯ ಶಿಕ್ಷಕರು

ಕಾಲಾವಕಾಶ ನೀಡಬೇಕು
ಕಟ್ಟಡ ತೆರವಾದರೆ ವಿದ್ಯಾರ್ಥಿಗಳಿಗೆ ತರಗತಿ ಕೋಣೆಗಳಿಲ್ಲದೇ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಲಿದೆ. ಸರಕಾರ ಶಾಲಾ ಕಟ್ಟಡ ನಿರ್ಮಾಣಕ್ಕೆ ತುರ್ತು ಅನುದಾನ ನೀಡಿ ನೂತನ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು. ಹೆದ್ದಾರಿ ಪ್ರಾಧಿಕಾರದವರು ಒಂದು ವರ್ಷವಾದರೂ ಕಾಲಾವಕಾಶ ನೀಡಬೇಕು.
– ರಾಘವೇಂದ್ರ ದೇವಾಡಿಗ, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ

ಪರಿಹಾರ ಹಿಂಪಡೆದಿತ್ತು!
ನಿಜವೆಂದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಶಾಲಾ ಕಟ್ಟಡದ ಪರಿಹಾರದ ಮೊತ್ತ ಸುಮಾರು 20.99 ಲಕ್ಷ ರೂ. ಸಂಸ್ಥೆಗೆ ನೀಡಲಾಗಿತ್ತಾದರೂ ಕೊರೊನಾ ಕಾಲದಲ್ಲಿ ಹೆಚ್ಚುವರಿ ಪರಿಹಾರ ಮೊತ್ತವನ್ನು ವಾಪಸ್‌ ಪಡೆದಿತ್ತು.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

Shirva: ಶಿರ್ವ ಮಹಮ್ಮಾಯಿ ಮಾರಿಗುಡಿ; ನಿಧಿ ಕುಂಭ ಸಮರ್ಪಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.