Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

| ದಸರಾ ರಜೆಯಲ್ಲಿ ಪ್ರವಾಸಿಗರ ದಂಡು | ಕಲ್ಲು ಬಂಡೆಗಳಲ್ಲಿ ವಿಹರಿಸುವಾಗ ಎಚ್ಚರವಿರಲಿ

Team Udayavani, Oct 16, 2024, 3:33 PM IST

9(1)

ತ್ರಾಸಿಯ ಕಡಲ ತಟದಲ್ಲಿ ಬೋಟಿಂಗ್‌.

ಕುಂದಾಪುರ: ದಸರಾ ರಜೆಯ ಹಿನ್ನೆಲೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಕರಾವಳಿಯ ಪ್ರವಾಸಿ ತಾಣಗಳಿಗೆ ಜನ ಹರಿದು ಬರುತ್ತಿದ್ದು, ಅದೇ ರೀತಿ ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ಗೂ ಬರುವಂತಹ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.

ದಸರಾ ರಜೆಯ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳು, ಪ್ರವಾಸಿ ತಾಣಗಳಿಗೆ ಬರುವವರ ಸಂಖ್ಯೆ ಹೆಚ್ಚಿದ್ದು, ಹಾಗೆಯೇ ತ್ರಾಸಿ – ಮರವಂತೆ ಕಡಲ ಕಿನಾರೆಯಲ್ಲೂ ಪ್ರವಾಸಿಗರ ದಂಡೇ ಕಂಡು ಬರುತ್ತಿದೆ. ನವರಾತ್ರಿಗೂ ಮೊದಲು ಅಷ್ಟೊಂದು ಸಂಖ್ಯೆಯ ಪ್ರವಾಸಿಗರು ಇರಲಿಲ್ಲ. ಈಗ ತುಸು ಹೆಚ್ಚಿನ ಸಂಖ್ಯೆಯ ಜನ ಕಂಡು ಬರುತ್ತಿದ್ದಾರೆ.

ನಿರ್ಲಕ್ಷ್ಯ ಬೇಡ; ಎಚ್ಚರಿಕೆಯಿರಲಿ
ಹೆದ್ದಾರಿಯಲ್ಲಿ ಸಂಚರಿಸುವ ಸಾಕಷ್ಟು ಜನ ಪ್ರವಾಸಿಗರು ಇಲ್ಲಿ ಕೆಲ ಹೊತ್ತು ವಾಹನ ನಿಲ್ಲಿಸಿ, ವಿಹರಿಸಿ ತೆರಳುತ್ತಿದ್ದಾರೆ. ಆದರೆ ನಿರಂತರ ಮಳೆಯಾಗುತ್ತಿರುವುದರಿಂದ ಈಗಲೂ ಕಲ್ಲು ಬಂಡೆಗಳು ಪಾಚಿಗಟ್ಟಿ ಜಾರುತ್ತಿದ್ದು, ಸ್ವಲ್ಪ ಯಾಮಾರಿದರೂ ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಇದಲ್ಲದೆ ಇನ್ನು ಕೆಲವರು ನೀರಿಗಿಳಿದು ಮೋಜಿ, ಮಸ್ತಿಯಲ್ಲಿ ತೊಡಗುತ್ತಿರುವುದು ಕಂಡು ಬಂದಿದ್ದು, ಇಲ್ಲಿನ ಕಡಲ ತೀರದಲ್ಲಿ ಜಾಸ್ತಿ ಆಳ ಇರುವುದರಿಂದ ಅಲೆಗಳು ಅಪ್ಪಳಿಸಿದರೆ ಅಪಾಯ. ಎಚ್ಚರಿಕೆ ಫಲಕ ಹಾಕಿದರೂ, ಅಪಾಯದ ಗಡಿ ದಾಟದಂತೆ ಕೆಂಪು ರಿಬ್ಬನ್‌ ಅಳವಡಿಸಿದ್ದರೂ, ಅದಕ್ಕೆ ಬೆಲೆ ನೀಡುತ್ತಿಲ್ಲ. ಆದ್ದರಿಂದ ಪ್ರವಾಸಿಗರು ನಿರ್ಲಕ್ಷ್ಯ ವಹಿಸದೇ, ಆದಷ್ಟು ಎಚ್ಚರಿಕೆಯಿಂದ ಇರಬೇಕಾದುದು ಅತ್ಯಗತ್ಯ.

ತ್ರಾಸಿ – ಮರವಂತೆ ಕಡಲ ಕಿನಾರೆಯಲ್ಲಿ ಹೆಚ್ಚಿದ ಜನಸಂದಣಿ.

ವಾಟರ್‌ ಗೇಮ್ಸ್‌ ಆರಂಭ
ತ್ರಾಸಿಯ ಕಡಲ ಕಿನಾರೆಯಲ್ಲಿ ಕಳೆದ ವರ್ಷದಿಂದ ವಿವಿಧ ರೀತಿಯ ವಾಟರ್‌ ಗೇಮ್ಸ್‌ ಗಳನ್ನು ಆರಂಭಿಸಲಾಗಿದ್ದು, ಮಳೆಗಾಲದಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಅಕ್ಟೋಬರ್‌ ಮೊದಲ ವಾರದಿಂದ ಮತ್ತೆ ಆರಂಭಗೊಂಡಿದೆ. ಬೋಟಿಂಗ್‌, ಮರಳುಗಾಡಿನ ಬೈಕ್‌ ಸಹಿತ ವಿವಿಧ ಮೋಜು ಮಸ್ತಿಯ ಆಟಗಳು ಇಲ್ಲಿದ್ದು, ಸಂಜೆಯ ವೇಳೆ ಹೆಚ್ಚಿನ ಪ್ರವಾಸಿಗರು ಆಗಮಿಸಿ, ಆಟೋಟಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬರುತ್ತಿದೆ.

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

10

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.