Uchila ದಸರಾ: ಪಾರ್ಕಿಂಗ್‌, ಟ್ರಾಫಿಕ್‌ ವ್ಯವಸ್ಥೆ ಸಿದ್ಧತೆ ಪೂರ್ಣ

ಶೋಭಾಯಾತ್ರೆ ರಂಗು ಹೆಚ್ಚಿಸಲಿರುವ ಟ್ಯಾಬ್ಲೋಗಳು

Team Udayavani, Oct 11, 2024, 5:35 PM IST

17(1)

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗು ತ್ತಿರುವ ಉಡುಪಿ ಉಚ್ಚಿಲ ದಸರಾ- 2024ರ ವೈಭವದ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಯಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆ ಗಳನ್ನು ನಡೆಸಲಾಗುತ್ತಿದೆ. ರಾ.ಹೆ. ಹೆದ್ದಾರಿ 66 ಮತ್ತು ಕಾಪು ಬೀಚ್‌ ರಸ್ತೆಯಲ್ಲಿ 18-20 ಕಿ. ಮೀ. ಉದ್ದದವರೆಗೆ ಸಾಗ ಲಿರುವ ಶೋಭಾ ಯಾತ್ರೆಯಲ್ಲಿ ನೂರಾರು ಟ್ಯಾಬ್ಲೋ, ಭಜನಾ ತಂಡಗಳು, ವಾದ್ಯ ಮೇಳಗಳು ಭಾಗವಹಿಸಿ ವಿಶೇಷ ರಂಗು ತರಲಿವೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಮರಳಿ ದೇವಸ್ಥಾನ ಅಥವಾ ಪಾರ್ಕಿಂಗ್‌ ಪ್ರದೇಶಗಳಿಗೆ ತೆರಳಲು ವಿಶೇಷ ಸಾರಿಗೆ ವ್ಯವಸ್ಥೆ ಇದೆ. ಎಲ್ಲಿಯೂ ಲೋಪದೋಷಗಳಾಗದಂತೆ ತಡೆಯಲು ಮತ್ತು ಟ್ರಾಫಿಕ್‌ ನಿಯಮ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಲು ಪೊಲೀಸ್‌ ಇಲಾಖೆಯ ಜತೆಗೆ ನೂರಾರು ಮಂದಿ ಸ್ವಯಂ ಸೇವಕರು ಇರುತ್ತಾರೆ. ಮೊಗವೀರ ಯುವ ಸಂಘಟನೆ, ವಿವಿಧ ಜವಾಬ್ದಾರಿ ಹೊತ್ತುಕೊಂಡಿರುವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮೆರವಣಿಗೆ ಯುದ್ದಕ್ಕೂ ಮಾನವ ಸರಪಳಿ ರಚಿಸಿ ಶೋಭಾಯಾತ್ರೆಗೆ ವಿಶೇಷ ಭದ್ರತೆ ನೀಡಲಿದ್ದಾರೆ ಎಂದು ಉಚ್ಚಿಲ ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್‌ ತಿಳಿಸಿದ್ದಾರೆ.

ಹೆದ್ದಾರಿಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ವೈಯಕ್ತಿಕ ಕಾರ್‌, ಬೈಕ್‌ಗಳ ಬದಲು ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಸರಕಾರಿ ಬಸ್‌, ರಿಕ್ಷಾಗಳನ್ನು ಆಶ್ರಯಿಸಿದರೆ ಉತ್ತಮ ಎಂದು ಎಸ್‌ಐ ಪ್ರಸನ್ನ ಕುಮಾರ್‌ ತಿಳಿಸಿದ್ದಾರೆ.

ಪಾರ್ಕಿಂಗ್‌ ವ್ಯವಸ್ಥೆ ಹೀಗಿರಲಿದೆ

  • ಮಂಗಳೂರು ಕಡೆಯಿಂದ ಬರುವವರಿಗೆ ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ
  • ಉಡುಪಿ ಕಡೆಯಿಂದ ಬರುವವರಿಗೆ ಮಹಾಲಕ್ಮೀ ಶಾಲಾ ಮೈದಾನ, ಮೊಗವೀರ ಭವನ ಬಳಿ, ದೇವಸ್ಥಾನದ ಪರಿಸರ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ
  • ಕಾಪು ಬೀಚ್‌ನಲ್ಲಿ ನಡೆಯುವ ಜಲಸ್ತಂಭನದಲ್ಲಿ ಪಾಲ್ಗೊಳಲು ಮಂಗಳೂರು ಕಡೆಯಿಂದ ಬರುವವರಿಗೆ ಮೂಳೂರು ಸಾಯಿರಾಧಾ ರೆಸಾರ್ಟ್‌ ಬಳಿ, ಉಡುಪಿ – ಮಲ್ಪೆ – ಪಡುಕೆರೆಯಿಂದ ಬರುವವರಿಗೆ ಪೊಲಿಪು ಶಾಲಾ ಮೈದಾನ, ಕೈಪುಂಜಾಲು ಶಾಲಾ ಮೈದಾನ, ಕಾಪು ಬೀಚ್‌ ಪಾರ್ಕಿಂಗ್‌, ಕೋಟ್ಯಾನ್‌ಕಾರ್‌ ಮೂಲಸ್ಥಾನದ ಬಳಿ ವಾಹನ ಪಾರ್ಕಿಂಗ್‌ಗೆ ಅವಕಾಶ.

ಶೋಭಾಯಾತ್ರೆ ಸಾಗುವ ಮಾರ್ಗ ಇದು
ದೇವಸ್ಥಾನದಿಂದ 3 ಗಂಟೆಗೆ ಹೊರಡುವ ಶೋಭಾಯಾತ್ರೆಯು ಉಡುಪಿ – ಮಂಗಳೂರು ರಸ್ತೆಯಲ್ಲಿ ಎರ್ಮಾಳಿನವರೆಗೆ ಸಾಗಿ, ಅಲ್ಲಿಂದ ತಿರುಗಿ ಮಂಗಳೂರು – ಉಡುಪಿ ರಸ್ತೆ ಮೂಲಕ ಉಚ್ಚಿಲ – ಮೂಳೂರು ಮಾರ್ಗವಾಗಿ ಕೊಪ್ಪಲಂಗಡಿಗೆ ಬರಲಿದೆ. ಅಲ್ಲಿಂದ ಕಾಪು ಬೀಚ್‌ ರಸ್ತೆಯಲ್ಲಿ ಸಂಚರಿಸಿ ರಾತ್ರಿ 10.30ಕ್ಕೆ ಕಾಪು ಲೈಟ್‌ ಹೌಸ್‌ ಬಳಿಯ ಜಲಸ್ತಂಭನ ಪ್ರದೇಶಕ್ಕೆ ತಲುಪಲಿದೆ. ಸಾಮೂಹಿಕ ಮಂಗಳಾರತಿ, ಗಂಗಾರತಿಯ ಬಳಿಕ ಸಮುದ್ರ ಮಧ್ಯಕ್ಕೆ ಕೊಂಡೊಯ್ದು 11 ಗಂಟೆಯ ವೇಳೆಗೆ ಜಲಸ್ತಂಭನ.

ಟಾಪ್ ನ್ಯೂಸ್

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

11-kemmannu

ಕೆಮ್ಮಣ್ಣು: ಗಣಪತಿ ಸಹಕಾರಿ ವ್ಯವಸ್ಥಾಪಕ ಸಂಘ ʼನಿʼ -ಶತಾಭಿವಂದನಂʼ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.