Gangolli: ರಥಬೀದಿಯಲ್ಲಿ ಅನಧಿಕೃತ ವಾಹನ ನಿಲುಗಡೆ

ವಾಹನ ನಿಲ್ಲಿಸುವುದನ್ನು ನಿಷೇಧಿಸಿ ಗ್ರಾಮ ಪಂಚಾಯತ್‌ ನಾಮಫಲಕ ಅಳವಡಿಕೆ

Team Udayavani, Aug 15, 2024, 1:15 PM IST

Unauthorized parking on Rathbeedi

ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ರಥಬೀದಿಯಲ್ಲಿ ರಥೋತ್ಸವದ ಜಾತ್ರೆಗಾಗಿ ಕಾದಿರಿಸ ಲಾಗಿದ್ದ ಜಾಗ ವಾಹನ ನಿಲುಗಡೆಯ ತಾಣವಾಗಿ ಮಾರ್ಪಡುತ್ತಿದ್ದು, ಪಂಚಾಯತ್‌ ಆದೇಶ ಧಿಕ್ಕರಿಸಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ರಥಬೀದಿ ಜಾತ್ರೆಗೆ ಮೀಸಲು

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಸುಮಾರು 350 ವರ್ಷಗಳ ಇತಿಹಾಸವಿದ್ದು, ವಿವಿಧ ಪಂಚಪರ್ವಗಳ ಆಚರಣೆ, ಉತ್ಸವಗಳು, ರಥೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಈ ಉದ್ದೇಶದಿಂದ ರಥಬೀದಿಯಲ್ಲಿ ಸರ್ವೇ ನಂ. 93-5ಂ ದಲ್ಲಿ 0.89 ಎಕರೆ ವಿಸ್ತೀರ್ಣದ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಇನ್ನಿತರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇರುವುದರಿಂದ ರಥಬೀದಿಯ ಪಾವಿತ್ರ್ಯತೆ ಕಾಪಾಡಿಕೊಳ್ಳುವ ಉದ್ದೇಶದಿಂದ 1998ರಲ್ಲೇ ಗ್ರಾಮ ಪಂಚಾಯತ್‌ ವಿಶೇಷ ಸಭೆಯಲ್ಲಿ ರಥಬೀದಿಯನ್ನು ರಥೋತ್ಸವದ ಜಾತ್ರೆಗಾಗಿಯೇ ಕಾದಿರಿಸಲಾಗಿದೆ ಎಂಬ ನಿರ್ಣಯ ಕೈಗೊಳ್ಳಲಾಗಿತ್ತು.

ನಿಲುಗಡೆ ನಿಷೇಧಿಸಿ ನಿರ್ಣಯ

ಆ ಬಳಿಕ ಮತ್ತೂಮ್ಮೆ 2021 ಮತ್ತೂ 2024ರಲ್ಲಿ ನಡೆದ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆ ಹಾಗೂ ಗ್ರಾಮ ಸಭೆಯಲ್ಲಿ ರಥಬೀದಿ ವಠಾರದಲ್ಲಿ ರಿಕ್ಷಾ ಮತ್ತಿತರ ವಾಹನ ನಿಲುಗಡೆಯನ್ನು ನಿಷೇಧಿಸಿ ನಿರ್ಣಯ ಕೈಗೊಳ್ಳಲಾಗಿತ್ತು.

ಆದೇಶ ಧಿಕ್ಕರಿಸಿ ನಿಲುಗಡೆ

ರಥಬೀದಿ ಪರಿಸರದಲ್ಲಿ ವಾಹನ ನಿಲುಗಡೆ ನಿಷೇಧಿಸಿ ಗ್ರಾಮ ಪಂಚಾಯತ್‌ ನಾಮಫಲಕ ಅಳವಡಿಸಿದ್ದು, ಗ್ರಾಮ ಪಂಚಾಯತ್‌ ಆದೇಶ ಧಿಕ್ಕರಿಸಿ, ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ ಕಳೆದ ಕೆಲವು ತಿಂಗಳುಗಳಿಂದ ರಥಬೀದಿ ಸಮೀಪ ಅನಧಿಕೃತವಾಗಿ ರಿಕ್ಷಾಮತ್ತಿತರ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ರಾತ್ರಿ ವೇಳೆ ಉದ್ದೇಶಪೂರ್ವಕವಾಗಿ ಬಸ್ಸುಗಳನ್ನು, ಮೀನು ಲಾರಿಗಳನ್ನು ಹಾಗೂ ಗೂಡ್ಸ್‌ ವಾಹನಗಳನ್ನು ನಿಲ್ಲಿಸಿ, ರಥಬೀದಿ ಪರಿಸರದಲ್ಲಿ ವಾಹನಗಳನ್ನು ತೊಳೆದು ತ್ಯಾಜ್ಯಗಳನ್ನು ರಥಬೀದಿ ಪರಿಸರದಲ್ಲಿ ಹಾಕಿ ಮಲಿನ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ರಿಕ್ಷಾ ನಿಲ್ದಾಣ

ರಥೋತ್ಸವ ಜಾತ್ರೆಗಾಗಿ ಮೀಸಲಿಟ್ಟ ಜಾಗದಲ್ಲಿ ರಿಕ್ಷಾನಿಲ್ದಾಣ ನಿರ್ಮಿಸುವ ಮತ್ತು ವಾಹನ ಪಾರ್ಕಿಂಗ್‌ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಥಬೀದಿಯಲ್ಲಿ ಬಸ್‌ ನಿಲುಗಡೆ ಮಾಡದಂತೆ ಅನೇಕ ಬಾರಿ ಮೌಖೀಕವಾಗಿ ತಿಳಿಸಿದ್ದರೂ ಗ್ರಾಮ ಪಂಚಾಯತ್‌ ಆದೇಶವನ್ನು ಉಲ್ಲಂಘಿಸಿ, ಗ್ರಾಮ ಸಭೆಯ ನಿರ್ಣಯವನ್ನು ಧಿಕ್ಕರಿಸಿ ಉದ್ದೇಶಪೂರ್ವಕವಾಗಿ ರಥಬೀದಿಯಲ್ಲಿ ಬಸ್‌ ಹಾಗೂ ಇನ್ನಿತರ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ರಥೋತ್ಸವಕ್ಕೆ ಜಾಗದ ಕೊರತೆಯಾಗುವ ಸಾಧ್ಯತೆ ಇದೆ ಎಂದು ದೇವಸ್ಥಾನದ ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ.

ಆಗ್ರಹ

ರಥಬೀದಿ ವಠಾರದಲ್ಲಿ ಯಾವುದೇ ಬಸ್‌, ಲಾರಿ ಹಾಗೂ ಇನ್ನಿತರ ವಾಹನಗಳಿಗೆ ನಿಲುಗಡೆಗೆ ಅನುಮತಿ ನೀಡಬಾರದಾಗಿ ಮತ್ತು ಪಂಚಾಯತ್‌ ಆದೇಶ ಉಲ್ಲಂಘಿಸಿ ಮತ್ತು ಪೊಲೀಸರ ಸೂಚನೆಯನ್ನು ದಿಕ್ಕರಿಸಿ ನಿಲುಗಡೆ ಮಾಡುತ್ತಿರುವ ಬಸ್‌, ಲಾರಿ ಹಾಗೂ ಆಟೋ ರಿಕ್ಷಾಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.

ಗೋವುಗಳ ಕಳ್ಳತನ

ರಥಬೀದಿ ಪರಿಸರದಲ್ಲಿ ರಾತ್ರಿ ಹೊತ್ತು ಸುಮಾರು 20-25 ಬೀಡಾಡಿ ಗೋವುಗಳು ವಿಶ್ರಾಂತಿ ಪಡೆಯುತ್ತಿದ್ದು, ಎರಡು ಬಾರಿ ಗೋ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಗೋ ಕಳ್ಳರ ಈ ಕೃತ್ಯ ಸಿಸಿ ಟಿವಿಯಲ್ಲಿ ಕಂಡು ಬಂದಿದೆ. ರಾತ್ರಿ ವೇಳೆ ವಾಹನಗಳನ್ನು ನಿಲ್ಲಿಸಿ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುವ ಶಂಕೆ ಕೂಡ ವ್ಯಕ್ತವಾಗಿದೆ. ರಥಬೀದಿ ಪರಿಸರದಲ್ಲಿ ಬೆರಳಣಿಕೆಯಷ್ಟು ಮನೆಗಳಿದ್ದು, ರಾತ್ರಿ ವೇಳೆ ಜನರ ಸಂಚಾರ ವಿರಳವಾಗಿದೆ. ಇದರ ಲಾಭ ಪಡೆಯಲು ಹವಣಿಸುತ್ತಿರುವ ಗೋ ಕಳ್ಳರು ರಥಬೀದಿ ಪರಿಸರದಿಂದ ಜಾನುವಾರು ಕಳವು ಮಾಡಲು ಯತ್ನಿಸುತ್ತಿದ್ದಾರೆ ಎಂಬ ಗುಮಾನಿ ಹೆಚ್ಚುತ್ತಿದೆ.

ಸೂಕ್ತ ಕಾನೂನು ಕ್ರಮ ಕೈಗೊಳ್ಳಿ

ಗ್ರಾಮ ಪಂಚಾಯತ್‌ ವಿಶೇಷ ಸಭೆಯಲ್ಲಿ ರಥಬೀದಿಯನ್ನು ರಥೋತ್ಸವದ ಜಾತ್ರೆಗಾಗಿಯೇ ಕಾದಿರಿಸಲಾಗಿದೆ ಎಂಬ ನಿರ್ಣಯ ಕೈಗೊಂಡು ರಥಬೀದಿಯಲ್ಲಿ ಈ ಬಗ್ಗೆ ನಾಮಫಲಕ ಅಳವಡಿಸಲಾಗಿದೆ. ಪಂಚಾಯತ್‌ ಆದೇಶವನ್ನು ಉಲ್ಲಂಘಿಸಿ, ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಉದ್ದೇಶಪೂರ್ವಕವಾಗಿ ರಥಬೀದಿಯಲ್ಲಿ ವಾಹನ ನಿಲುಗಡೆ ಮಾಡಿ ರಥಬೀದಿಯ ಪಾವಿತ್ರ್ಯ ಹಾಳು ಮಾಡುವ ಮತ್ತು ರಥಬೀದಿಯಲ್ಲಿ ಅನಧಿಕೃತ ರಿಕ್ಷಾ ನಿಲ್ದಾಣ ಮಾಡುವ ಸಂಚು ನಡೆಯುತ್ತಿದೆ. ಸಂಬಂಧಪಟ್ಟ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.-ರಾಘವೇಂದ್ರ ಪೈ, ಗ್ರಾ.ಪಂ. ಮಾಜಿ ಸದಸ್ಯ, ಗಂಗೊಳ್ಳಿ

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.