ಅಕಾಲಿಕ ಮಳೆ: ದೊರೆಯದ ಹಳ್ಳಿ ಹಳದ ಮರಳು!

ಕಣ್ಣಂದಾಜಿನ ತೂಕವೇ ಅಳತೆ; ಮರಳು ದೊರೆಯದೇ ಕಾಮಗಾರಿಗಳು ಸ್ಥಗಿತ

Team Udayavani, Oct 20, 2022, 10:35 AM IST

5

ಕುಂದಾಪುರ: ಎಲ್ಲ ಸರಿ ಹೋಗಿದ್ದರೆ ಇಷ್ಟರ ವೇಳೆಗೆ ವಿವಿಧ ಕಾಮಗಾರಿಗಳಿಗೆ, ನರೇಗಾ ಕೆಲಸಗಳಿಗೆ, ಗೃಹ ನಿರ್ಮಾಣಕ್ಕೆ ಹಳ್ಳಿ ಹಳ್ಳದ ಮರಳು ದೊರೆಯಬೇಕಿತ್ತು. ಅದಕ್ಕಾಗಿ ಅ.5 ಎಂಬ ದಿನವನ್ನೂ ಜಿಲ್ಲಾಡಳಿತದಿಂದ ನಿಗದಿ ಮಾಡಲಾಗಿತ್ತು. ಆದರೆ ಅಕಾಲಿಕ ಮಳೆಯ ಪರಿಣಾಮದಿಂದ, ಭತ್ತದ ಕೆಲಸ ಕಾರ್ಯಗಳು ಇನ್ನೂ ಮುಗಿಯದ ಕಾರಣದಿಂದ ಮರಳು ಮತ್ತೂ ತಡವಾಗಲಿದೆ.

ಎಷ್ಟು ಮರಳು

ಹೊಸ ಮರಳು ನೀತಿ 2020-21ರಂತೆ ಮೊದಲನೇ, ಎರಡನೇ, ಮೂರನೇ ಶ್ರೇಣಿಯ ಹಳ್ಳ ಮತ್ತು ತೊರೆಗಳಲ್ಲಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳು ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಾರ್ಕಳ, ಹೆಬ್ರಿ, ಕಾಪು, ಕುಂದಾಪುರ, ಬೈಂದೂರು ತಾ.ಪಂ. ವ್ಯಾಪ್ತಿಯ 35 ಮರಳು ನಿಕ್ಷೇಪಗಳಲ್ಲಿ ಒಟ್ಟು 49,903 ಮೆ. ಟನ್‌ ಪ್ರಮಾಣದ ಮರಳನ್ನು ಗುರುತಿಸಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಕಾಳಾವರದ ವಕ್ವಾಡಿಯ ತೆಂಕಬೆಟ್ಟು ಹಳ್ಳದಲ್ಲಿ 400 ಟನ್‌, ಆಲೂರು ಗ್ರಾ.ಪಂ.ನ ಹಕೂìರಿನಲ್ಲಿ 500 ಟನ್‌ ಮರಳು ನಿಕ್ಷೇಪ ಗುರುತಿಸಲಾಗಿದೆ.

ಶರತ್ತು

ಮರಳು ನಿಕ್ಷೇಪಗಳನ್ನು ತೆರವುಗೊಳಿಸಲು ಈಗಾಗಲೇ ಗ್ರಾಮ ಪಂಚಾಯತ್‌ಗಳಿಗೆ ಆಶಯ ಪತ್ರ ನೀಡಲಾಗಿದ್ದು, ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಹಕರು, ಸರಕಾರಿ ಸ್ಥಳೀಯ ಕಾಮಗಾರಿಗಳ ಗುತ್ತಿಗೆದಾರರು, ಸರಕಾರದಿಂದ ನಿಗದಿಪಡಿಸಿದ ಗರಿಷ್ಠ ಮಾರಾಟ ದರವನ್ನು ಗ್ರಾ.ಪಂ.ಗಳಿಗೆ ಪಾವತಿಸಿ, ರವಾನೆ ಪರವಾನಿಗೆ ಪಡೆದು, ಕಡಿಮೆ ಭಾರ ಸಾಮರ್ಥ್ಯದ ವಾಹನಗಳಲ್ಲಿ ಸ್ವಂತ ಖರ್ಚಿನಲ್ಲಿ ತುಂಬಿಸಿ ಸಾಗಾಟ ಮಾಡಬೇಕು. ಕಾರ್ಮಿಕರೇ ಮರಳು ತೆಗೆಯಬೇಕು ವಿನಾ ಯಂತ್ರಗಳನ್ನು ಬಳಸುವಂತಿಲ್ಲ. ಮೊದಲ ಆದ್ಯತೆ ಗ್ರಾ.ಪಂ. ವ್ಯಾಪ್ತಿಯ ಬಳಕೆಗೆ. ಗ್ರಾ.ಪಂ. ಗಳು ಗ್ರಾಹಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಜಧನ ಹಾಗೂ ಅನ್ವಯವಾಗುವ ಇತರ ಶುಲ್ಕಗಳನ್ನು ಸ್ವೀಕರಿಸಿ, ವಿಶೇಷ ರಕ್ಷಣಾತ್ಮಕವುಳ್ಳ ಸಾಗಾಣಿಕೆ ಪರವಾನಿಗೆಯನ್ನು ಗ್ರಾಹಕರಿಗೆ ನೀಡಬೇಕು. ಈ ಬಗ್ಗೆ ಅಗತ್ಯವಿರುವ ಎಲ್ಲ ರೀತಿಯ ತಾಂತ್ರಿಕ ತರಬೇತಿ, ನೆರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪಡೆಯಬೇಕು.

ಕಣ್ಗಾವಲು

ಮರಳು ತೆಗೆಯುವಲ್ಲಿ ಗ್ರಾ.ಪಂ. ಸಿಬಂದಿ ಕಣ್ಗಾವಲು ಹಾಕಬೇಕು. ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಮಾತ್ರ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆ ಮಾಡಬೇಕು. ಟನ್‌ ಅಳತೆಗೆ ಲಾರಿ ಹಾಗೂ ಅದರಲ್ಲಿ ಹಿಡಿಯುವ ಮರಳಿನ ಪ್ರಮಾಣವನ್ನು ಅಂದಾಜಿಸಿ ನಿಗದಿಪಡಿಸಲಾಗಿದೆ. ಆದ್ದರಿಂದ ಮರಳು ಗಣಿಯಲ್ಲಿ ತೂಗುಯಂತ್ರಗಳು ಇರುವುದಿಲ್ಲ. ಕಣ್ಣಂದಾಜಿನ ತೂಕವೇ ಅಳತೆ!

ಟ್ರಿಪ್‌ಶೀಪ್‌

ಇಂಟಿಗ್ರೇಟೆಡ್‌ ಲೀಸ್‌ ಮ್ಯಾನೇಜ್‌ಮೆಂಟ್‌ ಸಾಫ್ಟ್ವೇರ್‌ ಮೂಲಕ ಟ್ರಿಪ್‌ಶೀಟ್‌ ತೆಗೆದು ಪಂಚಾಯತ್‌ಗೆ ನೀಡಲಾಗುತ್ತದೆ. ಇದರ ಆಧಾರದಲ್ಲಿ ಇಂತಿಷ್ಟು ಲೋಡ್‌, ಇಂತಿಷ್ಟು ಟನ್‌ ಎಂದು ಸರಕಾರಕ್ಕೆ ಮರಳಿನ ಲೆಕ್ಕ ಸಿಗುತ್ತದೆ.

ಕೊರತೆ

ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದ್ದು, ಅಕ್ಟೋಬರ್‌ವರೆಗೆ ಮರಳುಗಾರಿಕೆಗೆ ಅವಕಾಶವಿಲ್ಲ. ಮುಖ್ಯವಾಗಿ ನಗರ ಭಾಗದಲ್ಲಿ ಶೇ.50ರಷ್ಟು ಕಟ್ಟಡ ನಿರ್ಮಾಣ ಕಾರ್ಯ ಮರಳಿನ ಕೊರತೆಯಿಂದ ಸ್ಥಗಿತಗೊಂಡಿದೆ. ಪರಿಸರ ಇಲಾಖೆ ಮಾರ್ಗಸೂಚಿಯಂತೆ ನಾನ್‌ ಸಿಆರ್‌ಝಡ್‌ನ‌ಲ್ಲಿ ಮರಳುಗಾರಿಕೆ ನಿಷೇಧ ಅವಧಿ ಅ.15ರವರೆಗೂ ಇರುವುದರಿಂದ ಮರಳು ಕೊರತೆಗೆ ಕಾರಣವಾಗಿದೆ. 1 ಲೋಡ್‌ ಅಥವಾ 3 ಯುನಿಟ್‌ ಮರಳಿಗೆ 8 ಸಾವಿರದಿಂದ 8,500 ರೂ. ಇದೆ. ಆದರೆ ಬ್ಲ್ಯಾಕ್‌ ನಿಂದ ಖರೀದಿ ಮಾಡಿದಲ್ಲಿ ದುಪ್ಪಟ್ಟು ದರ. ಈ ವರ್ಷ ಬ್ಲ್ಯಾಕ್‌ನಲ್ಲಿಯೂ ಮರಳು ಸಿಗುತ್ತಿಲ್ಲ.

ನಾನ್‌ಸಿಆರ್‌ಝಡ್‌

ನಾನ್‌ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಕುಂದಾಪುರ ತಾಲೂಕಿನ ಬಳ್ಕೂರು, ಹಳ್ನಾಡಿನಲ್ಲಿ ಲೀಸ್‌ ನೀಡಲಾಗಿದೆ. ಇದರಲ್ಲಿ 75 ಸಾವಿರ ಮೆಟ್ರಿಕ್‌ ಟನ್‌ ವರೆಗೂ ಲಭ್ಯವಿದ್ದು, ಸರಕಾರಿ ಕಾಮಗಾರಿಗಳಿಗೆ, ಸಾರ್ವಜನಿಕ ಮತ್ತು ಖಾಸಗಿ ಉದ್ದೇಶಕ್ಕೆ ನೀಡಲಾಗುತ್ತದೆ. ಆದರೆ ಆರಂಭ ಮಾತ್ರ ಆಗಿಲ್ಲ.

ಮಳೆ, ಬೆಳೆ

ಅ.5ರಿಂದ ಹಳ್ಳಿ ಹಳ್ಳದ ಮರಳು ತೆಗೆಯಲು ಪ್ರಾರಂಭಿಸಬಹುದು ಎಂದು ಅನುಮತಿ ನೀಡ ಲಾಗಿದ್ದರೂ ಅಕಾಲಿಕ ಮಳೆಯಿಂದಾಗಿ ಹಳ್ಳದ ನೀರು ಇಳಿದಿಲ್ಲ. ಹರಿವು ಕಡಿಮೆಯಾಗಿಲ್ಲ. ಜತೆಗೆ ಹಳ್ಳದ ಪಕ್ಕದಲ್ಲಿನ ಭತ್ತದ ಬೇಸಾಯ ಮುಗಿದಿಲ್ಲ. ಕಟಾವು ಆಗಿಲ್ಲ. ಮರಳು ತೆಗೆದು ಹಾಕಲು, ಲಾರಿ ಓಡಾಟ ನಡೆಸಲು ಸ್ಥಳವಿಲ್ಲ ಎಂದಾಗಿದೆ. ಇದೆಲ್ಲದರಿಂದಾಗಿ ಗ್ರಾ.ಪಂ.ಗಳ ಮರಳು ಲಭ್ಯವಾಗಲು ಇನ್ನೂ ಕಾಲಾವಕಾಶ ಅಗತ್ಯವಿದೆ.

ಬರೀ 300 ರೂ.

1 ಟನ್‌ಗೆ 80 ರೂ. ರಾಯಧನ, 40 ರೂ. ಎಎಪಿಪಿ ಶುಲ್ಕ, 2 ರೂ. ಐಟಿ-ಟಿಸಿಎಸ್‌ ಶುಲ್ಕ, 8 ರೂ. ಡಿಎಂಎಫ್ಟಿ ಶುಲ್ಕ ಎಂದು 130 ರೂ.ಗಳು, 170 ರೂ. ಪಂಚಾಯತ್‌ ಗೆಂದು ಒಟ್ಟು 300 ರೂ. ಪಡೆಯಲಾಗುತ್ತದೆ. ಉಳಿದಂತೆ ಸಾಗಾಟ ವೆಚ್ಚ, ಕೂಲಿ. ಸಾಗಾಟದ ಲಾರಿ ಗಣಿ ಇಲಾಖೆಯಲ್ಲಿ ನೋಂದಣಿಯಾಗಿರಬೇಕು.

ಆರಂಭ ಆಗಿಲ್ಲ: ಮಳೆ ನೀರು ಹರಿವಿನ ಪ್ರಮಾಣ ಇನ್ನೂ ನದಿಗಳಲ್ಲಿ ತಗ್ಗಿಲ್ಲದ ಕಾರಣ ಗ್ರಾ.ಪಂ.ಗಳಲ್ಲಿ ಮರಳುಗಾರಿಕೆ ಆರಂಭವಾಗಿಲ್ಲ. –ಮಹೇಶ್‌ ಕುಮಾರ್‌ ಹೊಳ್ಳ ಕಾರ್ಯನಿರ್ವಹಣಾಧಿಕಾರಿ, ತಾ.ಪಂ. ಕುಂದಾಪುರ

 ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

Accident-logo

Kundapura: ಕಾರು ಢಿಕ್ಕಿಯಾಗಿ ಕೆರ್ಗಾಲು ಗ್ರಾಮದ ಪಾದಚಾರಿ ಸಾವು

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

7

Kundapura: ತಲ್ಲೂರು ಪೇಟೆಗೆ ಶೌಚಾಲಯ ಬೇಕು

2

Kundapura: ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.