Kundapur: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅಂಬೇಡ್ಕರ್ ಶಾಲೆ ಕಟ್ಟಡ ಸಮೀಪ ಗುಡ್ಡ ಜರಿತ ಭೀತಿ
Team Udayavani, Aug 19, 2024, 4:32 PM IST
ಕುಂದಾಪುರ: ಶಂಕರನಾರಾಯಣದ ಸೌಡ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಡಾ| ಬಿ.ಆರ್. ಅಂಬೇಡ್ಕರ್ ಮಾದರಿ ವಸತಿ ಶಾಲೆ ಕಟ್ಟಡಗಳ ಸಮೀಪ ಗುಡ್ಡ ಜರಿತವಾಗುತ್ತಿರುವ ಬಗ್ಗೆ ಉದಯವಾಣಿ ಸುದಿನ ವರದಿ ಪ್ರಕಟಿಸಿತ್ತು.
ಇದರ ಬಳಿಕ ವಂಡ್ಸೆ ಬ್ಲಾಕ್ ಕಾಂಗ್ರೆಸ್ ನಿಯೋಗ ಹಾಗೂ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ತಂಡ ಶಾಲಾ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿತ್ತು. ಅಪಾಯಕಾರಿ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ವಸತಿ ಶಾಲೆಯ ಸ್ಥಳಕ್ಕೆ ಕುಂದಾಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಕಚೇರಿ ಅಧೀಕ್ಷಕ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕಾಮಗಾರಿ ನಿರ್ವಹಿಸುತ್ತಿರುವ ಕ್ರೈಸ್ ಸಂಸ್ಥೆಯ ಎಂಜಿನಿಯರ್ ಅಕ್ಷಯ್, ಸೈಟ್ ಎಂಜಿನಿಯರ್ ಉಪಸ್ಥಿತರಿದ್ದರು.
ವರದಿ ನೀಡಲಾಗುವುದು
ರಾಘವೇಂದ್ರ ವರ್ಣೇಕರ್ ಮಾತನಾಡಿ, ಕಳೆದ ತಿಂಗಳು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಅವರೊಂದಿಗೆ ವಸತಿ ಶಾಲೆ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿದ್ದು ಆಗಲೇ ಇಲ್ಲಿನ ವಿಚಾರದ ಬಗ್ಗೆ ಕಾಮಗಾರಿ ನಿರ್ವಹಿಸುತ್ತಿರುವ ಕ್ರೈಸ್ ಸಂಸ್ಥೆಯವರಲ್ಲಿ ತಾಂತ್ರಿಕ ಗುಣಮಟ್ಟ ಹಾಗೂ ತಡೆಗೋಡೆ ನಿರ್ಮಾಣ ವಿಚಾರದ ಬಗ್ಗೆ ಪತ್ರ ಬರೆಯಲಾಗಿತ್ತು. ಈಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ಇನ್ನೊಂದು ವರದಿಯನ್ನು ಮೇಲಧಿಕಾರಿಗಳು ಮತ್ತು ಸಂಬಂಧಪಟ್ಟವರಿಗೆ ನೀಡುತ್ತೇವೆ. ಅಲ್ಲದೆ ಸೋಮವಾರ ಕ್ರೈಸ್ ಸಂಸ್ಥೆ ಮುಖ್ಯ ಎಂಜಿನಿಯರ್, ತಾಂತ್ರಿಕ ವಿಭಾಗದವರು ಭೇಟಿ ನೀಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.