ಶ್ರಮದಾನದಡಿ ಮಳೆಕೊಯ್ಲು ಅಳವಡಿಸಿ ಮಾದರಿಯಾದ ಸಿಎಸ್‌ಐ ಚರ್ಚ್‌

ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Aug 10, 2019, 12:45 PM IST

10-Naveen-3

ಕಮಲಾಕ್ಷ ಶೆಟ್ಟಿ ಅವರ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಲಾಗಿದೆ.

ಮಹಾನಗರ: ‘ಉದಯವಾಣಿ’ಯ ‘ಮನೆಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಣೆಗೊಂಡ ಇನ್ನಷ್ಟು ಮಂದಿ ತಮ್ಮ ಮನೆಗಳಲ್ಲಿ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ. ಮನೆ, ಸಂಘ ಸಂಸ್ಥೆಗಳು ಮಾತ್ರವಲ್ಲದೆ, ಧಾರ್ಮಿಕ ಕೇಂದ್ರಗಳಲ್ಲಿಯೂ ಮಳೆಕೊಯ್ಲು ಮೂಲಕ ನೀರುಳಿತಾಯಕ್ಕೆ ಧನಾತ್ಮಕ ಹೆಜ್ಜೆ ಇಡುತ್ತಿರುವುದು ಜೀವಜಲದ ಉಳಿತಾಯಕ್ಕೆ ಹೊಸ ಮುನ್ನುಡಿಯಾಗಿದೆ.

ಎಂಆರ್‌ಪಿಎಲ್ ಉದ್ಯೋಗಿ ಅಶೋಕ್‌ಕುಮಾರ್‌ ಹೆಗ್ಡೆ ಅವರು ಕಾರ್ಕಳ ಕಡ್ತಲ ಗ್ರಾಮದಲ್ಲಿರುವ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.

ಛಾವಣಿ ನೀರು ಬಾವಿಗೆ
ಮೂಡುಬಿದಿರೆಯ ಬಡಗ ಮಿಜಾರ್‌ ಮರಕಡ ಕ್ರಾಸ್‌ ನಿವಾಸಿ ಕಮಲಾಕ್ಷ ಶೆಟ್ಟಿ ಅವರ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಲಾಗಿದೆ.

ಅಂದಾಜು 12 ಸಾವಿರ ರೂ. ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಛಾವಣಿ ನೀರನ್ನು ಪೈಪ್‌ ಮುಖಾಂತರ ಟ್ಯಾಂಕ್‌ಗೆಬಿಟ್ಟು ಶುದ್ಧೀಕೃತ ನೀರನ್ನು ಬಾವಿಗೆ ಬೀಳುವಂತೆ ನೋಡಿಕೊಳ್ಳಲಾಗಿದೆ. ಕಮಲಾಕ್ಷ ಅವರಿಂದ ಪ್ರೇರಣೆಗೊಂಡು ಪಕ್ಕದ ಮನೆಯವರೂ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.

‘ಉದಯವಾಣಿ’ ಮಳೆಕೊಯ್ಲು ಬಗ್ಗೆ ಪ್ರಕಟಿಸುತ್ತಿರುವ ಮಾಹಿತಿಯುಕ್ತ ಲೇಖನಗಳಿಂದ ಪ್ರೇರಿತನಾಗಿ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆ ಮಾಡಿಕೊಂಡಿದ್ದೇನೆ. ಭವಿಷ್ಯದಲ್ಲಿ ನೀರಿನ ಸಮಸ್ಯೆ ಉಂಟಾಗದು ಎಂಬ ಭರವಸೆ ಇದೆ ಎನ್ನುತ್ತಾರೆ ಕಮಲಾಕ್ಷ ಶೆಟ್ಟಿ.

ಸಿಎಸ್‌ಐ ಚರ್ಚ್‌ನಲ್ಲಿ ಜಲ ಸಂರಕ್ಷಣೆ

ಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್‌ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್‌ ಲೀ ಕರ್ಕಡ, ಜೋಶಿ ಜನಾಸ್‌, ಜೋಯಲ್ ಕರ್ಕಡ, ಸಂದೀಪ್‌ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್‌, ಗೊಡ್ವಿನ್‌ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್‌ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.

ಸಿಎಸ್‌ಐ ಚರ್ಚ್‌ನಲ್ಲಿ ಜಲ ಸಂರಕ್ಷಣೆ
ಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್‌ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್‌ ಲೀ ಕರ್ಕಡ, ಜೋಶಿ ಜನಾಸ್‌, ಜೋಯಲ್ ಕರ್ಕಡ, ಸಂದೀಪ್‌ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್‌, ಗೊಡ್ವಿನ್‌ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್‌ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.

ಅಭಿಯಾನವೇ ಪ್ರೇರಣೆ

ಉದಯವಾಣಿ ಸುದಿನದ ಮನೆ ಮನೆಗೆ ಮಳೆಕೊಯ್ಲು ಅಭಿಯಾನ ಯಶಸ್ಸು ಕಂಡಿದ್ದು, ಇದರಿಂದ ಪ್ರೇರಿತರಾಗಿ ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದಾರೆ.ಇದಕ್ಕೆ ಸರಕಾರ ಕೂಡ ಪ್ರೋತ್ಸಾಹ ನೀಡಬೇಕಿದೆ. ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬಾವಿಗೂ ಮಳೆಕೊಯ್ಲು ಅಳವಡಿಸಬೇಕು. ನಾವು ಕೂಡ ಮಳೆಕೊಯ್ಲು ಅಳವಡಿಸಿದ್ದು ನಮಗೆ ‘ಉದಯವಾಣಿ’ ಅಭಿಯಾನವೇ ಪ್ರೇರಣೆ.
ಮೇಘನಾ ಆಚಾರ್ಯ,ವಾಮಂಜೂರು 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.