ಪ್ರತಿ ನೂರರಲ್ಲಿ 10 ಪಾಸಿಟಿವ್‌ ಪ್ರಕರಣ


Team Udayavani, Jun 30, 2020, 6:23 AM IST

problem 100

ಬೆಂಗಳೂರು: ನಗರದಲ್ಲಿ ಕಳೆದ ಸುಮಾರು ನಾಲ್ಕು ತಿಂಗಳಲ್ಲಾದ ಒಟ್ಟಾರೆ ಪ್ರಕರಣಗಳಿಗಿಂತ ಹೆಚ್ಚು ಸೋಂಕು ಪ್ರಕರಣಗಳು ಕಳೆದ ಕೇವಲ ಮೂರು ದಿನಗಳಲ್ಲಿ ದಾಖಲಾಗಿದ್ದು, ಅಕ್ಷರಶಃ ತಲ್ಲಣ ಸೃಷ್ಟಿಸಿದೆ. ಸೋಮವಾರ 738  ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜೂ.27, 28ರಂದು ಕ್ರಮವಾಗಿ 596 ಹಾಗೂ 783 ಪ್ರಕರಣ ದಾಖಲಾಗಿವೆ. ಅಂದರೆ ಒಟ್ಟಾರೆ ಕಳೆದ 3 ದಿನಗಳಲ್ಲಿ ನಗರದಲ್ಲಿ 2,117 ಜನ ಸೋಂಕಿತರಾಗಿದ್ದಾರೆ.

ಆದರೆ, ಮಾ.1ರಿಂದ ಜೂ. 26ರವರೆಗೆ  1,935 ಪಾಸಿಟಿವ್‌ ಪ್ರಕರಣ ಕಂಡು ಬಂದಿವೆ. ಈ ಮಧ್ಯೆ ಕಳೆದೆರಡು ದಿನಗಳಿಂದ ಗುಣಮುಖರಾಗಿರುವ ಸಂಖ್ಯೆಯೂ ಶೂನ್ಯ. ಇದು ಸೋಂಕಿನ ತೀವ್ರತೆ ಬಿಂಬಿಸುತ್ತದೆ ಎಂದು ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಒಂದೇ ದಿನದಲ್ಲಿ ಮತ್ತೆ ನಾಲ್ವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. 3,427 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಇಡೀ ದಿನ 7,910 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಅಂದರೆ ಪ್ರತಿ ನೂರರಲ್ಲಿ  ಹತ್ತು ಜನರಿಗೆ ಸೋಂಕು ಕಂಡುಬಂದಿದೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,052 ಕೋವಿಡ್‌ 19 ಪ್ರಕರಣ ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು  17,148 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಇನ್ನು ದಿನದ ಅಂತ್ಯಕ್ಕೆ 178 ಐಸಿಯುನಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 ವರ್ಷ ಕೆಳಗಿನ 25 ಮಕ್ಕಳಿಗೆ ಸೋಂಕು: ವಯಸ್ಕರು, ವೃದ್ಧರು ಮಾತ್ರವಲ್ಲ, ಮಕ್ಕಳಿಗೂ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸೋಮವಾರ 10 ವರ್ಷದ ಒಳಗಿನ 25 ಮಕ್ಕಳಿಗೆ ವೈರಸ್‌ ತಗುಲಿದೆ. ಈ ಮೂಲಕ ಕಳೆದ 3  ದಿನದಲ್ಲಿ ನೂರಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

ಚಿಕಿತ್ಸೆ ಸಿಗದೆ ಅಲೆದಾಟ: ಗೊಟ್ಟಿಗೆರೆಯ 45 ವರ್ಷದ ಕೋವಿಡ್‌ 19 ಸೋಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಸಿಗದೆ ಅಲೆದಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಂಕು ದೃಢಪಟ್ಟ ವ್ಯಕ್ತಿಗೆ ಕಳೆದ ಶುಕ್ರವಾರ ತೀವ್ರ ಉಸಿರಾಟ  ತೊಂದರೆ ಕಾಣಿಸಿಕೊಂಡ ಹಿನ್ನಲೆ ಅವರನ್ನು ಮೊದಲು ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಹಾಸಿಗೆ ಅಲಭ್ಯತೆ ಕಾರಣ ನೀಡಿ ವಾಪಸ್‌ ಕಳುಹಿಸಲಾಗಿದೆ. ನಂತರ ರೋಗಿಯನ್ನು ದಾಖಲಿಸಲು  ವಿಕ್ಟೋರಿಯಾ, ಬನ್ನೇರುಘಟ್ಟ ರಸ್ತೆ ಆಸ್ಪತ್ರೆ, ಕೆಂಗೇರಿ ಬಳಿಯ ಆಸ್ಪತ್ರೆಗಳಲ್ಲೂ ದಾಖಲು ಮಾಡಿಕೊಂಡಿಲ್ಲ.

ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲೂ ಹಾಸಿಗೆ ಸಿಗದೆ ರೋಗಿ ಪರದಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಕೊನೆಗೆ ಪ್ರಕ್ರಿಯಾ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ತುಮಕೂರು ರಸ್ತೆ ಮೇಲ್ಸೇತುವೆ ಮೇಲೆ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಬಿದ್ದಿದ್ದು, ಪೀಣ್ಯ ಪೊಲೀಸರು ಆ್ಯಂಬುಲನ್ಸ್‌ಗೆ ಫೋನ್‌ ಮಾಡಿ ಗಂಟೆಗಳೇ ಕಳೆದರೂ ಬರಲಿಲ್ಲ.  ವ್ಯಕ್ತಿ ಜ್ವರದಿಂದ ಬಳಲುತ್ತಿದ್ದರಿಂದ ಯಾರೂ ಹತ್ತಿರ ಸುಳಿಯಲಿಲ್ಲ. ಹೊಯ್ಸಳ ವಾಹನ ಅಡ್ಡಲಾಗಿ ನಿಲ್ಲಿಸಿ ಕಾವಲು ನೀಡಲಾಗಿದೆ. 4 ತಾಸಿನ ನಂತರ ಆ್ಯಂಬುಲನ್ಸ್‌ ಬಂದಿದ್ದು, ವ್ಯಕ್ತಿಯನ್ನು ಕರೆದುಕೊಂಡು ಹೋಗಿದ್ದಾರೆ  ಎನ್ನಲಾಗಿದೆ.

5.99ಲಕ್ಷ ರೂ. ಸಂಗ್ರಹ: ಕೋವಿಡ್‌-19 ಸೋಂಕು ನಿಯಂತ್ರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ , ಮುಖಗವಸು (ಮಾÓR…) ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ಮಾರ್ಷಲ್‌ಗ‌ಳು ದಂಡ  ಸಂಗ್ರಹಿಸುತ್ತಿದ್ದು, ಸೋಮವಾರ ಮಾಸ್ಕ್‌ ಧರಿಸದ 2,733 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 264 ಮಂದಿ ಸೇರಿ 2,997 ಮಂದಿಯಿಂದ ಒಟ್ಟು 5.99 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. ಬೆಂಗಳೂರು ಪೂರ್ವ 438,  ಪಶ್ಚಿಮ 508, ದಕ್ಷಿಣ 885, ಮಹದೇವಪುರ 283, ರಾಜರಾಜೇಶ್ವರಿ ನಗರ 317, ಯಲಹಂಕ 113, ದಾಸರಹಳ್ಳಿ 40, ಬೊಮ್ಮನಹಳ್ಳಿ ವಲಯದಲ್ಲಿ 411 ಮಂದಿಗೆ ದಂಡ ಹಾಕಲಾಗಿದೆ.

ಒಂದೇ ಕುಟುಂಬದ 9 ಮಂದಿಗೆ ಸೋಂಕು: ಕೋವಿಡ್‌ 19 ಸೊಂಕು ಸಮುದಾಯಕ್ಕೂ ಹರಡುತ್ತಿದ್ದು, ಚಾಮರಾಜಪೇಟೆಯ ಜ್ಯುವೆಲ್ಲರಿ ಅಂಗಡಿ ಮಾಲೀಕರ ಒಂದೇ ಕುಟುಂಬದ 9 ಮಂದಿಗೆ ಸೋಮವಾರ ಸೋಂಕು ದೃಢಪಟ್ಟಿದೆ.  60 ವರ್ಷದ ವೃದ್ಧ, 53 ವರ್ಷದ ಪುರುಷ, 49  ವರ್ಷದ ಮಹಿಳೆ, 16 ವರ್ಷದ ಬಾಲಕಿ, 23 ವರ್ಷದ ಯುವಕ, 21 ವರ್ಷದ ಯುವತಿ ಸೇರಿ 9 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇವರ ಸಂಪರ್ಕದಲ್ಲಿರುವವರನ್ನು  ಆರೋಗ್ಯಾ ಧಿಕಾರಿಗಳು ಕ್ವಾರಂಟೈನ್‌ ಮಾಡಲಾಗಿದೆ. ಸೋಮವಾರ ದೃಢಪಟ್ಟ ಸೋಂಕಿತರಲ್ಲಿ ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯ ದವರೇ ಹೆಚ್ಚಿದ್ದಾರೆ. ಈ ವಲಯಗಳಲ್ಲಿಯೇ ಕೋವಿಡ್‌ 19 ಚಿಕಿತ್ಸೆಗೆ ಕೋರ ಮಂಗಲ  ಒಳಾಂಗಣ ಕ್ರೀಡಾಂಗ ಣ ದ ಲ್ಲಿ ಸಿದ್ಧತೆ ಕೈಗೊಂಡಿರುವುದು. ಕಂಟೈನ್ಮೆಂಟ್‌ ವಲಯಗಳು ಅಧಿಕವಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.