500 ನಕಲಿ ನೋಟುಗಳ ನೀಡಿ ಬಟ್ಟೆ ವ್ಯಾಪಾರಿಗೆ 25 ಲಕ್ಷ ವಂಚನೆ

ಸಿಸಿಬಿಗೆ ವಿಶ್ವೇಶರಪುರದ ಸಗಟು ಸಿದ್ದ ಉಡುಪು ವ್ಯಾಪಾರಿಯಿಂದ ದೂರು

Team Udayavani, Aug 2, 2024, 3:51 PM IST

7-bng

ಬೆಂಗಳೂರು: 500 ರೂ. ಮುಖಬೆಲೆಯ ನಕಲಿ ನೋಟುಗಳ ಬಂಡಲ್‌ಗ‌ಳ ಮೇಲೆ ಅಸಲಿ ನೋಟು ಇರಿಸಿ ನಗರದ ಸಗಟು ಸಿದ್ಧ ಉಡುಪು ವ್ಯಾಪಾರಿಯೊಬ್ಬರಿಗೆ 25 ಲಕ್ಷ ರೂ. ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಕೇಂದ್ರ ಅಪರಾಧ ವಿಭಾಗದಲ್ಲಿ (ಸಿಸಿಬಿ) ದೂರು ದಾಖಲಾಗಿದೆ.

ವಂಚನೆಗೊಳ ಗಾದ ವಿಶ್ವೇಶ್ವರಪುರದ ಸಗಟು ಸಿದ್ಧ ಉಡುಪು ವ್ಯಾಪಾರಿ ಪ್ರೇಮ್‌ ಕುಮಾರ್‌ ಜೈನ್‌ ನೀಡಿದ ದೂರಿನ ಮೇರೆಗೆ ಜಯೇಶ್‌, ಅಪರಿಚಿತ ವ್ಯಕ್ತಿಯ ವಿರುದ್ಧ ವಂಚನೆ, ನಂಬಿಕೆ ದ್ರೋಹದಡಿ ಎಫ್ಐಆರ್‌ ದಾಖಲಾಗಿದೆ.

ಪ್ರಕರಣದ ವಿವರ: ಚಿಕ್ಕಪೇಟೆಯಲ್ಲಿ ಸಗಟು ಸಿದ್ಧ ಉಡುಪುಗಳ ವ್ಯಾಪಾರಿಯಾಗಿರುವ ಪ್ರೇಮ್‌ ಕುಮಾರ್‌, ಇತ್ತೀಚೆಗೆ ಹೊಸ ಬಟ್ಟೆ ಖರೀದಿಸಲು 25 ಲಕ್ಷ ರೂ. ಅಗತ್ಯವಿದ್ದ ಹಿನ್ನೆಲೆಯಲ್ಲಿ ಸ್ನೇಹಿತ ಬಿಪಿನ್‌ ಬಳಿ ಕೇಳಿದ್ದಾರೆ. ಆಗ ಬಿಪಿನ್‌ ದೆಹಲಿಯಲ್ಲಿ ನನ್ನ ಸ್ನೇಹಿತ ಮಹಿ ಎಂಬುವವರ ಬಳಿ ಹಣವಿದೆ. ದೆಹಲಿಯಲ್ಲಿ ಯಾರಾದರೂ ನಿನಗೆ ಪರಿಚಯವಿದ್ದಲ್ಲಿ ಅವರಿಂದ ಹಣ ತರಿಸಿಕೋ ಎಂದು ಸಲಹೆ ನೀಡಿದ್ದಾರೆ.

5 ತಿಂಗಳ ಹಿಂದೆ ಜಯೇಶ್‌ ಹೆಸರಿನ ವ್ಯಕ್ತಿ ಪ್ರೇಮ್‌ ಕುಮಾರ್‌ ಜೈನ್‌ ಅವರ ಮೊಬೈಲ್‌ಗೆ ವಾಟ್ಸ್‌ಆ್ಯಪ್‌ ಮೂಲಕ ದೇಶದ ಯಾವುದೇ ನಗರಗಳಿಂದ ನಗದು ರೂಪದಲ್ಲಿ ಹಣ ತರಿಸುವುದಿದ್ದಲ್ಲಿ ತನಗೆ ತಿಳಿಸುವಂತೆ ಹೇಳಿದ್ದಾನೆ. ಹೀಗಾಗಿ ವ್ಯವಹಾರಕ್ಕೆ ತುರ್ತಾಗಿ ಹಣ ಬೇಕಿದ್ದ ಹಿನ್ನೆಲೆಯಲ್ಲಿ ಪ್ರೇಮ್‌ ಕುಮಾರ್‌ ಜೈನ್‌, ಜಯೇಶ್‌ಗೆ ಕರೆ ಮಾಡಿ, ದೆಹಲಿಯಲ್ಲಿ ಮಹಿ ಎಂಬುವವರು 25 ಲಕ್ಷ ರೂ. ನೀಡುತ್ತಾರೆ. ಅದನ್ನು ಬೆಂಗಳೂರಿಗೆ ತಲುಪಿಸಬೇಕು ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿಯ ಮಹಿ ಎಂಬುವವರ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆಯನ್ನು ಜಯೇಶ್‌ ಪಡೆದುಕೊಂಡಿದ್ದಾನೆ. ಜೂ.14ರಂದು ದೂರುದಾರಿಗೆ ಕರೆ ಮಾಡಿರುವ ಜಯೇಶ್‌, ನಗರ್ತ ಪೇಟೆ ಜೈನ್‌ ಟೆಂಪಲ್‌ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಪ್ರೇಮ್‌ ಕುಮಾರ್‌ ಅಲ್ಲಿಗೆ ಬಂದಾಗ, ವ್ಯಕ್ತಿಯೊಬ್ಬ ತನ್ನ ಹೆಸರು ಜಯೇಶ್‌ ಎಂದು ಪರಿಚಯಿಸಿಕೊಂಡಿದ್ದಾನೆ.

ಬಳಿಕ ತನ್ನಲ್ಲಿದ್ದ ಬ್ಯಾಗ್‌ ತೆರೆದು, 500 ರೂ. ಮುಖಬೆಲೆಯ ನೋಟು ಗಳ 10 ಬಂಡಲ್‌ ತೋರಿಸಿ ಇದರಲ್ಲಿ 25 ಲಕ್ಷ ರೂ. ಇದೆ ಎಂದಿದ್ದಾನೆ. ಮನೆಯಲ್ಲಿ ಹಣದ ಬ್ಯಾಗ್‌ ತೆರೆದು ಪರಿಶೀಲಿಸಿದಾಗ, ಬಂಡಲ್‌ನ ಮೊದಲ ನೋಟು ಮಾತ್ರ 500 ಮುಖ ಬೆಲೆಯ ಅಸಲಿ ನೋಟಾಗಿದ್ದು, ಅದರ ಕೆಳಗೆ ನಕಲಿ ನೋಟುಗಳನ್ನು ಜೋಡಿಸಿರುವುದು ಕಂಡು ಬಂದಿದೆ.

ತಕ್ಷಣ ಜಯೇಶ್‌ಗೆ ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್‌ ಆಫ್ ಬಂದಿದೆ. ದೆಹಲಿಯಲ್ಲಿ ಮಹಿ ಅವರಿಂದ 25 ಲಕ್ಷ ರೂ. ಪಡೆದ ಅಪರಿಚಿತ ವ್ಯಕ್ತಿಯ ಮೊಬೈಲ್‌ ಗೆ ಕರೆ ಮಾಡಿದಾಗ ಆತ ಕೂಡ ಮೊಬೈಲ್‌ ಸಹ ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ. ಬಳಿಕ ತಾನು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದ ಪ್ರೇಮ್‌ ಕುಮಾರ್‌ ಜೈನ್‌ ಸಿಸಿಬಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.