ದಸರಾಕ್ಕೆ 500 ಟನ್‌ ಹೆಚ್ಚು ತ್ಯಾಜ್ಯ ಸೃಷ್ಠಿ

ವಸತಿ ಪ್ರದೇಶಗಳಲ್ಲಿ ರಾಶಿ ರಾಶಿ ಕಸ ; ಮಾರಾಟವಾಗದ ವಸ್ತುಗಳು ರಸ್ತೆ ಬದಿಗೆ

Team Udayavani, Oct 6, 2022, 12:37 PM IST

13

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಕಳೆದೆರಡು ದಿನಗಳಿಂದ ಮಾಮೂಲಿಗಿಂತ 500 ಟನ್‌ ಹಸಿ ತ್ಯಾಜ್ಯ ಹೆಚ್ಚಾಗಿ ಸೃಷ್ಟಿಯಾಗಿದೆ.

ಆಯುಧ ಪೂಜೆ ಮತ್ತು ವಿಜಯದಶಮಿ ಅಂಗವಾಗಿ 2 ದಿನಗಳಿಂದ ಕೆ.ಆರ್‌.ಮಾರುಕಟ್ಟೆ, ಮಲ್ಲೇಶ್ವರ, ಕಲಾಸಿಪಾಳ್ಯ, ಯಶವಂತಪುರ, ಕೆಂಗೇರಿ, ಮಡಿವಾಳ, ಯಲಹಂಕ ಹಾಗೂ ಬಸವನಗುಡಿ ಸೇರಿ ವಿವಿಧೆಡೆ ಪೂಜೆ ಮತ್ತು ಅಲಂಕಾರಿಕ ಸಾಮಗ್ರಿಗಳ ಮಾರಾಟ ಹೆಚ್ಚಾಗಿತ್ತು. ಬಾಳೆಕಂದು, ಮಾವಿನ ಎಲೆ, ಕುಂಬಳಕಾಯಿ, ಹಣ್ಣು ಮತ್ತು ತರಕಾರಿಗಳ ಮಾರಾಟವಾಗದೆ ಉಳಿದ ತ್ಯಾಜ್ಯ ಹಾಗೂ ಆಯುಧಪೂಜೆ ಹಿನ್ನೆಲೆ ವಾಹನಗಳ ಪೂಜೆ ಮಾಡಿದ ನಂತರದ ತ್ಯಾಜ್ಯ ವಸತಿ ಪ್ರದೇಶಗಳಲ್ಲಿ ರಾಶಿಯಾಗಿ ಬಿದ್ದಿತ್ತು.

ಈ ಕಾರಣಗಳಿಂದಾಗಿ ಮಂಗಳವಾರ ಮತ್ತು ಬುಧವಾರ ಸಾಮಾನ್ಯ ದಿನಗಳಿಗಿಂತ 500 ಮೆಟ್ರಿಕ್‌ ಟನ್‌ ಹಸಿತ್ಯಾಜ್ಯ ಹೆಚ್ಚಿಗೆ ಉತ್ಪಾದನೆಯಾಗಿದೆ. ಎಲ್ಲ ಮಾರುಕಟ್ಟೆಗಳಲ್ಲಿ ತ್ಯಾಜ್ಯವನ್ನು ಬೆಳಗ್ಗೆ 8 ಗಂಟೆಯೊಳಗೆ ಸ್ವಚ್ಛಗೊಳಿಸಲಾಗಿದೆ. ಆದರೆ ವಸತಿ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹ ಸಮರ್ಪಕವಾಗಿ ಆಗಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 5 ಸಾವಿರ ಮೆಟ್ರಿಕ್‌ ಟನ್‌ ಘನತ್ಯಾಜ್ಯ ಉತ್ಪಾದನೆ ಆಗುತ್ತಿದೆ. ಈ ತ್ಯಾಜ್ಯವನ್ನು ಸಂಸ್ಕರಣೆ ಮಾಡಲು 7 ಸಂಸ್ಕರಣಾ ಘಟಕಗಳನ್ನು ಬಿಬಿಎಂಪಿ ಹೊಂದಿದೆ. ಆದರೆ ಅದರಲ್ಲಿ 5 ಘಟಕಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಒಂದು ಘಟಕದ ಕಾರ್ಯ ನಿರ್ವಹಣೆ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದ್ದು ಸ್ಥಗಿತಗೊಂಡಿದೆ.

ಉಳಿದ ಒಂದು ಘಟಕದ ಕೆಲಸಕ್ಕೆ ಸ್ಥಳೀಯರಿಂದ ವಿರೋಧವಿದ್ದು, ಘಟಕ ಮುಚ್ಚಲಾಗಿದೆ. ಹೀಗಾಗಿ, ಪ್ರತಿನಿತ್ಯ ಉತ್ಪಾದನೆ ಆಗುವ ಹಸಿ ಕಸದಲ್ಲಿ ಶೇ. 30ರಿಂದ 40 ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ. ಉಳಿದ ಶೇ. 60ರಷ್ಟು ತ್ಯಾಜ್ಯವನ್ನು ಭೂ ಭರ್ತಿ ಕೇಂದ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಈಗ ಹಬ್ಬದ ಹಿನ್ನೆಲೆಯಲ್ಲಿ 500 ಟನ್‌ ಹಸಿಕಸ ಹೆಚ್ಚಾಗಿ ಉತ್ಪಾದನೆ ಆಗಿದೆ. ಹೀಗಾಗಿ ಹಸಿ ತ್ಯಾಜ್ಯ ಸಂಸ್ಕರಣೆಯಲ್ಲಿ ವ್ಯತ್ಯವಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳಿಗಿಂತ ಕಳೆದೆರಡು ದಿನಗಳಲ್ಲಿ 500 ಟನ್‌ ಹೆಚ್ಚಿಗೆ ತ್ಯಾಜ್ಯ ಉತ್ಪಾದನೆಯಾಗಿದೆ. ಆ ತ್ಯಾಜ್ಯವನ್ನು ಭೂಭರ್ತಿ ಕೇಂದ್ರದಲ್ಲಿ ವಿಲೇವಾರಿ ಮಾಡಲಾಗಿದೆ. ಹೀಗಾಗಿ ಬುಧವಾರ ಭೂಭರ್ತಿ ಕೇಂದ್ರದಲ್ಲಿ ತ್ಯಾಜ್ಯ ವಿಲೇವಾರಿಗೆ ಬರುವ ಕಾಂಪ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಾಗಿತ್ತು. ●ಕರ್ನಲ್‌ ರಾಜಬೀರ್‌ ಸಿಂಗ್‌, ಬಿಬಿಎಂಪಿ ಚೀಫ್‌ ಮಾರ್ಷಲ್‌

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.