Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

ನಗರದಲ್ಲಿ ಕೊರೆಸಿದ 144 ಬೋರ್‌ವೆಲ್‌ಗ‌ಳ ಪೈಕಿ 130ರಲ್ಲಿ ನೀರು ಲಭ್ಯ ; ತಂತ್ರಜ್ಞಾನ ಬಳಸಿಕೊಂಡು ಜಲಮೂಲ ಪತ್ತೆ ಹಚ್ಚಿದ ಭೂವಿಜ್ಞಾನಿಗಳು

Team Udayavani, May 3, 2024, 1:21 PM IST

9

ಬೆಂಗಳೂರು: ಹೊಸತನದ ತಂತ್ರಜ್ಞಾನ ಅಳವಡಿಸಿ ಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡ ಳಿಯು ಹೊಸದಾಗಿ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ದೊರೆತಿದೆ.

ಇತ್ತೀಚೆಗೆ ಕೊರೆಸಲಾದ 144 ಬೋರ್‌ವೆಲ್‌ಗ‌ಳ ಪೈಕಿ 130 ಬೋರ್‌ವೆಲ್‌ಗ‌ಳಲ್ಲಿ ಉತ್ತಮ ನೀರು ಲಭ್ಯವಾಗುವ ಮೂಲಕ ಶೇ.90ರಷ್ಟು ಸಕ್ಸಸ್‌ ರೇಟ್‌ ಪಡೆದುಕೊಂಡಿದೆ. ಬೆಂಗಳೂರು ನಗರದಲ್ಲಿ ಅಂತರ್ಜಲ ಕೊರತೆ ಯಿಂದಾಗಿ ಆದಂತಹ ನೀರಿನ ಅಭಾವವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೆಂಗಳೂರು ಜಲ ಮಂಡಳಿಯು ಹಲವಾರು ಮುಂಜಾಗ್ರತಾ ಕ್ರಮ ಗಳನ್ನು ಅಳವಡಿಸಿಕೊಳ್ಳಲು ಮುಂದಾಗಿತ್ತು.

ಇದರಲ್ಲಿ ಅವಶ್ಯವಿರುವ ಕಡೆಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸುವುದು ಕೂಡ ಒಂದಾಗಿದೆ. ಹೆಚ್ಚಿನ ತಂತ್ರಜ್ಞಾನ ಬಳಸದೇ ಇದ್ದಂತಹ ಸಂದರ್ಭದಲ್ಲಿ ಬಹಳಷ್ಟು ಕೊಳವೆ ಬಾವಿಗಳು ನೀರು ಸಿಗದೆ ವಿಫ‌ಲವಾಗಿದ್ದವು. ಇದರಿಂದ ಜಲಮಂಡಳಿಗೆ ಕೊಳವೆಬಾವಿ ಕೊರೆಸುವಲ್ಲಿ ಬಹಳಷ್ಟು ಆರ್ಥಿಕ ನಷ್ಟವಾಗುತ್ತಿತ್ತು. ಒಂದು ಕೊಳವೆಬಾವಿ ಕೊರೆಸುವ ಕಡೆಗಳಲ್ಲಿ ಇನ್ನೊಂದು, ಅದೂ ಯಶಸ್ಸು ಕಾಣದೇ ಇದ್ದಲ್ಲಿ ಮತ್ತೂಂದು ಹೀಗೆ ಮುಂದುವರಿಯುತ್ತಲೇ ಇತ್ತು.

130 ಬೋರ್‌ವೆಲ್‌ಗ‌ಳಲ್ಲಿ ನೀರು: ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಗೂ ಜಲಮಂಡಳಿಗೆ ಆರ್ಥಿಕವಾಗಿ ಹಣ ಉಳಿಸುವ ಉದ್ದೇಶದಿಂದ ಮಂಡಳಿಯ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ನೂತನ ತಂತ್ರಜ್ಞಾನ ಹಾಗೂ ತಂತ್ರಜ್ಞರ ಸಹಾಯ ಪಡೆಯಲು ಮುಂದಾದರು. ಮೂರು ಭೂ ವಿಜ್ಞಾನಿಗಳ ಸೇವೆಯನ್ನು ಪಡೆಯುತ್ತಿರುವ ಜಲಮಂಡಳಿಯು ಇದೀಗ 144 ಬೋರ್‌ ವೆಲ್‌ ಗಳನ್ನು ಕೊರೆಯಿಸಿದ್ದು, ಈ ಪೈಕಿ 130 ಬೋರ್‌ವೆಲ್‌ ಗಳಲ್ಲಿ ಉತ್ತಮ ನೀರು ಲಭ್ಯವಾಗುವ ಮೂಲಕ ಶೇ.90ರಷ್ಟು ಸಕ್ಸಸ್‌ ರೇಟ್‌ ಪಡೆದುಕೊಂಡಿವೆ.

ಶೇ.90ರಷ್ಟು ಯಶಸ್ಸು ಬಹಳ ಕಷ್ಟ: ಜಲಮಂಡಳಿಯ ಕೊಳವೆಬಾವಿಗಳ ಇತಿಹಾಸದಲ್ಲಿ ಇದೊಂದು ಹೊಸ ಮೈಲುಗಲ್ಲಾಗಿದೆ. ಕೊರೆಸಿರುವ ಬೋರ್‌ವೆಲ್‌ಗ‌ಳಲ್ಲಿ ಶೇ.90ರಷ್ಟು ಸಕ್ಸಸ್‌ ಆಗುವುದು ಬಹಳ ಕಷ್ಟ. ಈ ಸಾಧನೆಗೆ ಭೂವಿಜ್ಞಾನಿಗಳ ಕೊಡುಗೆ ಅಪಾರ. ಅವರು ನಗರದ ಭೂಮಿಯನ್ನು ಅಧ್ಯಯನ ಮಾಡಿ ಅಕ್ವಾಫೈರ್‌ ಇರುವ ಸ್ಥಳಗಳನ್ನು ಗುರುತಿಸುವ ಕಾರ್ಯ ಮಾಡಿದ್ದರು. ಸಂಕಷ್ಟದ ಸಮಯದಲ್ಲಿ ಇಂತಹ ಉತ್ತಮ ಫ‌ಲಿತಾಂಶ ದೊರಕುವುದರಿಂದ ಬಹಳ ಸಂತಸವಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬತ್ತುತ್ತಲೇ ಇವೆ ಕೊಳವೆ ಬಾವಿಗಳು

ಬೆಂಗಳೂರಿನಲ್ಲಿ ಶೇ.56ರಷ್ಟು ಕೊಳವೆ ಬಾವಿಗಳು ಬತ್ತಿ ಹೋದರೆ, ಇನ್ನುಳಿದ ಶೇ.20ರಷ್ಟು ಕೊಳವೆ ಬಾವಿಗಳಲ್ಲಿ ಕಡಿಮೆ ನೀರು ಬರುತ್ತಿದ್ದು, ಶೀಘ್ರದಲ್ಲೇ ಬತ್ತುವ ಲಕ್ಷಣ ಗೋಚರಿಸಿದೆ. ಬೆಂಗಳೂರಿನ ಶೇ.60ರಷ್ಟು ಮಂದಿ ಕೊಳವೆ ಬಾವಿಗಳನ್ನೇ ಆಶ್ರಯಿಸಿರುವ ಹಿನ್ನೆಲೆಯಲ್ಲಿ ನೀರಿಗಾಗಿ ಭಾರಿ ಬೆಲೆ ತೆತ್ತಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಚಾಲ್ತಿಯಲ್ಲಿರುವ ಶೇ.50ರಷ್ಟು ಕುಡಿಯುವ ಶುದ್ಧ ನೀರಿನ ಘಟಕಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದು, ದಿನದ ಕೆಲವು ಗಂಟೆ ಮಾತ್ರ ಸೇವೆ ನೀಡುತ್ತಿವೆ. ಈ ಘಟಕಗಳ ಮುಂದೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಲ್ಲುತ್ತಿರುವ ದೃಶ್ಯ ಅಲ್ಲಲ್ಲಿ ಕಾಣ ಸಿಗುತ್ತವೆ. ವೈಟ್‌ ಫೀಲ್ಡ್‌, ಯಲಹಂಕ, ರಾಜ ರಾಜೇಶ್ವರಿನಗರ, ಮಹದೇವಪುರ, ಮಾರತ್ತಳ್ಳಿ, ಸರ್ಜಾಪುರ ರಸ್ತೆ ಪ್ರಮುಖ ಭಾಗಗಳಲ್ಲಿ ನೀರಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಪೂರೈಸುವ ನಿಟ್ಟಿನಲ್ಲಿ ಜಲಮಂಡಳಿಯಿಂದ ಕೊಳವೆ ಬಾವಿ ಕೊರೆಸಲಾಗಿದೆ. ಸಾರ್ವಜನಿಕರು ಈ ಕೊಳವೆ ಬಾವಿ ಗಳನ್ನು ಸದ್ಬಳಕೆ ಮಾಡಿಕೊಳ್ಳಬಹುದು. ಬೆಂಗಳೂರಿಗರ ನೀರಿನ ಸಮಸ್ಯೆ ಪರಿಹರಿಸಲು ಜಲಮಂಡಳಿಯು ಸಿದ್ಧವಾಗಿದೆ. ●ಡಾ|ವಿ.ರಾಮ್‌ ಪ್ರಸಾತ್‌ ಮನೋಹರ್‌, ಅಧ್ಯಕ್ಷ, ಜಲಮಂಡಳಿ

■ ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.