Actor Darshan: ಜೈಲ್ ಬೆಡ್ನಲ್ಲಿ ಹರಟೆ: ದರ್ಶನ್ ವಿರುದ್ದ ಮತ್ತೊಂದು ದೂರು
Team Udayavani, Aug 30, 2024, 10:35 AM IST
ಬೆಂಗಳೂರು: ನಟ ದರ್ಶನ್ಗೆ ಮತ್ತೂಂದು ಸಂಕಷ್ಟ ಎದುರಾಗಿದ್ದು, ಜೈಲಿನ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಜೈಲಿನ ಅಧಿಕಾರಿಯೊಬ್ಬರು ದರ್ಶನ್ ವಿರುದ್ಧ ಮತ್ತೂಂದು ದೂರು ದಾಖಲಿಸಿದ್ದಾರೆ.
ಜೈಲಿನಲ್ಲಿ ರೌಡಿಶೀಟರ್ ಬೇಕರಿ ರಘು ಜತೆ ದರ್ಶನ್ ಬೆಡ್ ಮೇಲೆ ಕುಳಿತು ಮೊಬೈಲ್ ನೋಡುತ್ತಾ ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತು.
ಈ ಸಂಬಂಧ ಜೈಲಿನ ಅಧಿಕಾರಿಯೊಬ್ಬರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಎಫ್ಐಆರ್ ದಾಖಲಿಸುವುದಿಲ್ಲ. ಈಗಾಗಲೇ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲೇ ಈ ದೂರನ್ನು ಹೆಚ್ಚುವರಿಯಾಗಿ ಸೇರಿಕೊಂಡು ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.
ಪ್ರತಿಕ್ರಿಯಿಸಬೇಡಿ: ಅಭಿಮಾನಿಗಳಿಗೆ ಮನವಿ
ಬೆಂಗಳೂರು: ದರ್ಶನ್ ಕೊಲೆ ಆರೋಪದ ಮೇಲೆ ಸದ್ಯ ಜೈಲಿನಲ್ಲಿರುವ ಹಿನ್ನೆಲೆ, ಅವರ ಅಭಿಮಾನಿಗಳು ಹಲವೆಡೆ ಹೇಳಿಕೆ, ಪ್ರತಿಕ್ರಿಯೆ ನೀಡುವುದು ಹೆಚ್ಚಾಗುತ್ತಿದೆ. ಇದರಿಂದ ವಿವಾದ, ಗೊಂದ ಲಗಳೂ ಸೃಷ್ಟಿಯಾಗುತ್ತಿವೆ. ಇದಕ್ಕೆ ತಡೆಯೊಡ್ಡಲು ದರ್ಶನ್ ಅಭಿಮಾನಿ ಸಂಘದ ಅಧಿಕೃತ ಡಿ ಕಂಪನಿ ಟ್ವಿಟರ್ ಪೇಜ್ನಲ್ಲಿ ಮನವಿ ಮಾಡಲಾಗಿದೆ.
“ನಮ್ಮ ಪ್ರೀತಿಯ ಡಿ ಬಾಸ್ ಆರೋಪ ಮುಕ್ತರಾಗಿ ಬರು ವವರೆಗೂ ಮಾಧ್ಯಮ ಹಾಗೂ ಬೇರೆ ನಟರ ಅಭಿಮಾನಿಗಳ ಕ್ರಿಯೆಗಳಿಗೆ ಪ್ರತಿ ಕ್ರಿಯೆ ಬೇಡ.ು. ನಮ್ಮಿಂದ ಬಾಸ್ಗೆ ತೊಂದರೆಯಾಗದಿರಲಿ’ ಎಂಬ ಮನವಿ ಮಾಡಿರುವ ಪೋಸ್ಟ್ ಸದ್ಯ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.