Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

ಸೆಖೆಗೆ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ವರುಣ ; 2 ಕಡೆ ಬೃಹತ್‌ ಮರ ಧರೆಗೆ

Team Udayavani, Oct 4, 2024, 12:39 PM IST

4-bng-rain

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ಬೀಳಲಾರಂಬಿಸಿದ್ದು, ರಸ್ತೆಗಳಲ್ಲಿ ಟ್ರಾμಕ್‌ ಜಾಮ್‌ನಿಂದ ಕೆಲ ಕಾಲ ವಾಹನ ಸವಾರರು ಪರದಾಡಿದರೆ, ಇನ್ನು ಕೆಲವು ಕಡೆ ಮರಗಳ ರೆಂಬೆ ರಸ್ತೆಗೆ ಬಿದ್ದು ಅವಾಂತರ ಉಂಟಾಗಿದೆ.

ಬೆಂಗಳೂರಿನಲ್ಲಿ ಕಳೆದೆರಡು ದಿನಗಳಲ್ಲಿ ಸದಾಶಿವನಗರ, ಆರ್‌.ಟಿ. ನಗರ, ನಾಗರಬಾವಿಯಲ್ಲಿ 2 ಮರಗಳು ಧರೆಗುರುಳಿವೆ. ರಸ್ತೆಗೆ ಬಿದ್ದಿದ್ದ ಮರಗಳನ್ನು ಬಿಬಿಎಂಪಿ ಸಿಬ್ಬಂದಿ ತೆರವುಗೊಳಿಸಿದ್ದಾರೆ.

ಸೆಕೆಗೆ ಕಂಗೆಟ್ಟಿದ್ದ ಬೆಂಗಳೂರಿಗೆ ಒಂದು ತಿಂಗಳ ನಂತರ ಬಹುತೇಕ ಕಡೆ ಮಳೆ ಸುರಿದಿದೆ. ಬುಧವಾರ ಹಾಗೂ ಗುರುವಾರ ಸುರಿದ ಮಳೆಯು ತಂಪೆರೆದಿದೆ. ಅ.4 ಹಾಗೂ 5ರಂದು ಬೆಂಗಳೂರಿನಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

ಗುರುವಾರ ಮಧ್ಯಾಹ್ನ ಆಗುತ್ತಿದ್ದಂತೆ ಸಿಟಿ ಮಂದಿಗೆ ವರುಣನ ದರ್ಶನವಾಗಿತ್ತು. ದಿಢೀರ್‌ ಎಂಟ್ರಿಕೊಟ್ಟ ಮಳೆ ತುಂತುರು ಹನಿ ಸಿಡಿಸಿ ಮರೆಯಾಗಿತ್ತು. ಆದರೆ ಸಣ್ಣ ಮಳೆಗೂ ನಗರದ ಹಲವು ರಸ್ತೆಗಳು ನೀರು ತುಂಬಿಕೊಂಡಿದ್ದವು.

ಕೆ.ಆರ್‌.ಸರ್ಕಲ್ ಹೊಳೆಯಂತೆ ನೀರು ಹರಿಯುತ್ತಿದ್ದರೆ, ಹೆಬ್ಟಾಳದಲ್ಲಿ ರಸ್ತೆಯಲ್ಲಿ ನೀರು ನಿಂತು ಸವಾರರು ಪರದಾಡಿದ್ದಾರೆ. ಕೆ.ಆರ್‌. ಮಾರುಕಟ್ಟೆ ಎಂ.ಜಿ.ರಸ್ತೆ, ಶಾಂತಿನಗರ, ಮೆಜೆಸ್ಟಿಕ್‌, ಯಶವಂತಪುರ, ಮಲ್ಲೇಶ್ವರ, ವೈಟ್‌ಫೀಲ್ಡ್‌, ಕೋರಮಂಗಲ, ಮಾರತ್ತಹಳ್ಳಿ, ಯಲಹಂಕ, ಕೆಂಗೇರಿ, ತುಮಕೂರು ರಸ್ತೆ ಸುತ್ತಮುತ್ತಲೂ ಟ್ರಾಫಿಕ್‌ ಜಾಮ್‌ ಅಧಿಕವಾಗಿತ್ತು.

ಪಾಪಾರೆಡ್ಡಿಪಾಳ್ಯದಲ್ಲಿ ರಸ್ತೆ ಬ್ಲಾಕ್‌: ಇನ್ನು ಪಾಪಾರೆಡ್ಡಿಪಾಳ್ಯದಲ್ಲಿ ಮುಂಜಾನೆ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ರಸ್ತೆ ಸಂಪೂರ್ಣವಾಗಿ ಬ್ಲಾಕ್‌ ಆಗಿತ್ತು. ಗುರುವಾರ ಮುಂಜಾನೆ 5 ಗಂಟೆಗೆ ಮರ ಬಿದ್ದ ಪರಿಣಾಮ ಈ ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನಗಳೆಲ್ಲ ಪರ್ಯಾಯ ರಸ್ತೆ ಅವಲಂಬಿಸಬೇಕಾಯಿತು. ಇನ್ನು ಬೆಂಗಳೂರಿನ ಶೆಟ್ಟಿಹಳ್ಳಿ ಶ್ರೀದೇವಿ ಬಡಾವಣೆಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಮನೆಗಳಲ್ಲಿ ನೀರು, ಕೆಸರು ತುಂಬಿದ್ದು, ಮನೆಗಳನ್ನು ಸ್ವತ್ಛಗೊಳಿಸಲು ಮನೆ ಹರಸಾಹಸ ಪಡಬೇಕಾಯಿತು.

ಕಾರ್ತಿಕ್‌ ನಗರದಲ್ಲಿ ರಸ್ತೆಯ ಒಂದು ಭಾಗ ಕುಸಿತ

ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಮಹದೇವಪುರದ ಕಾರ್ತಿಕ್‌ ನಗರದ ಬಳಿಯ ಹೊರವರ್ತುಲ ರಸ್ತೆಯ ಒಂದು ಭಾಗ ಕುಸಿದು ಗುರುವಾರ ಬೆಳಗ್ಗೆ ಸಂಚಾರ ವ್ಯತ್ಯಯ ಉಂಟಾಯಿತು. ಇದಕ್ಕೆ ಸ್ಪಂದಿಸಿದ ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಸುಗಮ ಸಂಚಾರಕ್ಕೆ ಎಡೆಮಾಡಿಕೊಟ್ಟರು. ಈ ರಸ್ತೆಗಳಲ್ಲಿ ಪೀಕ್‌ ಅವರ್‌ ಸಮಯಗಳಲ್ಲಿ ಭಾರಿ ದಟ್ಟಣೆ ಉಂಟಾಗುತ್ತಿತ್ತು.

ಈ ನಡುವೆ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಅನುಚೇತ್‌ ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, “ಕಾರ್ತಿಕ್‌ ನಗರದಲ್ಲಿ ಓಆರ್‌ಆರ್‌ ಸರ್ವಿಸ್‌ ರಸ್ತೆಯ ಒಂದು ಭಾಗ ಕುಸಿದಿದೆ. ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಬದಲಾಯಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

3-bng

Bengaluru: ಗೋದಾಮಿನ ಕ್ಯಾಮೆರಾ ಒಡೆದು, ಹಲ್ಲೆ: ಮೂವರ ಸೆರೆ

2-bng

Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.