Anekal: ನಗರದಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ
ನಕಲಿ ದಾಖಲೆ ತಯಾರಿಸಿ ಹಿಂದೂ ಹೆಸರಲ್ಲಿ ಪೀಣ್ಯದಲ್ಲಿ ವಾಸ
Team Udayavani, Oct 4, 2024, 12:04 PM IST
ಆನೇಕಲ್: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಜಿಗಣಿ ಪೊಲೀಸರು ಗುರುವಾರ ಮತ್ತೆ ಮೂವರು ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ. ಇವರೂ ಸಹ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಪಾಕ್ ಮೂಲದ ತಾರಿಖ್ ಸಯೀದ್, ಈತನ ಪತ್ನಿ ಅನಿಲ ಸಯೀದ್, ಇಶ್ರತ್ ಸಯೀದ್ (ಅಪ್ರಾಪ್ತ ಬಾಲಕಿ) ಬಂಧಿತ ಕುಟುಂಬ. ಇವರು ಸಹ ನಕಲಿ ದಾಖಲೆ ಸೃಷ್ಟಿಸಿಕೊಂಡು ಅಕ್ರಮವಾಗಿ ಬೆಂಗಳೂರಿನ ಪೀಣ್ಯದಲ್ಲಿ ವಾಸವಾಗಿದ್ದರು.
ಜಿಗಣಿಯಲ್ಲಿ ವಾಸವಾಗಿದ್ದ ಪಾಕ್ ಕುಟುಂಬವನ್ನು 4 ದಿನಗಳ ಹಿಂದೆ ಬಂಧನ ಮಾಡಲಾಗಿತ್ತು. ಈ ಬಂಧಿತರು ನೀಡಿದ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮೂವರನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನಂತರ ಜಿಗಣಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಿ ತನಿಖೆ ನಡೆಸಬೇಕಿದ್ದರಿಂದ ಆನೇಕಲ್ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.
10 ವರ್ಷಗಳಿಂದ ಪಾಕ್ ಪ್ರಜೆಗಳು ಭಾರತದಲ್ಲಿ ನೆಲೆಸಿದ್ದವರನ್ನು ಬಂಧಿಸಿದ ಕೂಡಲೇ ಕೇಂದ್ರೀಯ ಗುಪ್ತಚರ ಸಂಸ್ಥೆ, ಎನ್ಐಎ ಆಗಮಿಸಿ ಮಾಹಿತಿ ಕಲೆ ಹಾಕಿದೆ. ಹಾಗೆಯೇ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಜಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಸಲಹೆ ಸೂಚನೆ ನೀಡಿದ್ದಾರೆ.
15 ಮಂದಿ ಅಕ್ರಮ ಪ್ರವೇಶ: ಪಾಕ್ನಿಂದ ಒಟ್ಟು 15 ಮಂದಿ ಭಾರತಕ್ಕೆ ಬಂದಿದ್ದರು. ಅವರಲ್ಲಿ 7 ಮಂದಿ ಕರ್ನಾಟಕಕ್ಕೆ ಬಂದರೆ, ಉಳಿದವರು ಅಸ್ಸಾಂ, ಒಡಿಶಾ ಮತ್ತು ಹೈದರಾಬಾದ್ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಜಿಗಣಿಯಲ್ಲಿ ಪಾಕ್ ಕುಟುಂಬವನ್ನು ಬಂಧಿಸಿದ ಬಳಿಕ ಹಲವು ಸ್ಫೋಟಕ ಮಾಹಿತಿ ಹೊರ ಬಂದಿದೆ.
ಬೆಳಕಿಗೆ ಬಂದಿದ್ದು ಹೇಗೆ? ಬಂಧನದಲ್ಲಿದ್ದ ಪಾಕಿಸ್ತಾನದ ರಶೀದ್ ಅಲಿ ಸಿದ್ಧಕಿ ಕುಟುಂಬವನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ತಮ್ಮಂತೆಯೇ ಪೀಣ್ಯದಲ್ಲಿ ನೆಲೆಸಿರುವುದಾಗಿ ಹೇಳಿದ್ದಾರೆ. ಬಳಿಕ ಜಿಗಣಿ ಪೊಲೀಸರು ಬೆಂಗಳೂರಿನ ಪೀಣ್ಯಕ್ಕೆ ತೆರಳಿ ಒಂದೇ ಕುಟುಂಬದ ಮೂವರನ್ನು ಬಂಧಿಸಿದ್ದಾರೆ.
ರಶೀದ್ ಸಿದ್ದಕಿ ಕುಟುಂಬದೊಂದಿಗೆ ಈ ಕುಟುಂಬವು ಭಾರತಕ್ಕೆ ಅಕ್ರಮವಾಗಿ ನುಸುಳಿದ್ದರು. ಪಶ್ಚಿಮ ಬೆಂಗಾಲ್ ನಿಂದ ದೆಹಲಿಗೆ ಬಂದವರೇ ನಕಲಿ ದಾಖಲೆ ಮಾಡಿಸಿಕೊಂಡಿದ್ದಾರೆ. ತಾರಿಕ್ ಸಯೀದ್ ಬದಲಾಗಿ ಸನ್ನಿ ಚೌಹಾಣ್, ಅನಿಲ್ ಸಯೀದ್ ಬದಲಾಗಿ ದೂಪಾ ಚೌಹಾಣ್ಎಂದು ಹೆಸರು ಬದಲಾಯಿಸಿಕೊಂಡು ನಕಲಿ ದಾಖಲೆ ಮಾಡಿಸಿಕೊಳ್ಳಲಾಗಿತ್ತು. ಸಿದ್ದಕಿ ಕುಟುಂಬ ಜಿಗಣಿಗೆ ಬಂದರೆ ಇವರು ಕೇರಳಕ್ಕೆ ಹೋಗಿದ್ದರು. ಇದೇ ಸಮಯದಲ್ಲಿ ರಶೀದ್ ಅಲಿ ಸಿದ್ದಕಿ ಹೆಂಡತಿಯ ತಂಗಿ ಗಂಡನ ಸಹಾಯದಿಂದ ದಾವಣಗೆರೆಯಲ್ಲಿ ಆಶ್ರಯ ಪಡೆದಿದ್ದ. ಅಲ್ಲಿಂದ ಪೀಣ್ಯಕ್ಕೆ ಬಂದು ಕುಟುಂಬದೊಂದಿಗೆ ವಾಸವಾಗಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ
Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!
Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್ ಕೋಚ್ ಮಾರ್ಕೆಲ್
India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ
Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.