Anekal: ನಗರದಲ್ಲಿ ಮತ್ತೆ ಮೂವರು ಪಾಕ್‌ ಪ್ರಜೆಗಳ ಬಂಧನ

ನಕಲಿ ದಾಖಲೆ ತಯಾರಿಸಿ ಹಿಂದೂ ಹೆಸರಲ್ಲಿ ಪೀಣ್ಯದಲ್ಲಿ ವಾಸ

Team Udayavani, Oct 4, 2024, 12:04 PM IST

2-bng

ಆನೇಕಲ್‌: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಜಿಗಣಿ ಪೊಲೀಸರು ಗುರುವಾರ ಮತ್ತೆ ಮೂವರು ಪಾಕ್‌ ಪ್ರಜೆಗಳನ್ನು ಬಂಧಿಸಿದ್ದಾರೆ. ಇವರೂ ಸಹ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಪಾಕ್‌ ಮೂಲದ ತಾರಿಖ್‌ ಸಯೀದ್‌, ಈತನ ಪತ್ನಿ ಅನಿಲ ಸಯೀದ್‌, ಇಶ್ರತ್‌ ಸಯೀದ್‌ (ಅಪ್ರಾಪ್ತ ಬಾಲಕಿ) ಬಂಧಿತ ಕುಟುಂಬ. ಇವರು ಸಹ ನಕಲಿ ದಾಖಲೆ ಸೃಷ್ಟಿಸಿಕೊಂಡು ಅಕ್ರಮವಾಗಿ ಬೆಂಗಳೂರಿನ ಪೀಣ್ಯದಲ್ಲಿ ವಾಸವಾಗಿದ್ದರು.

ಜಿಗಣಿಯಲ್ಲಿ ವಾಸವಾಗಿದ್ದ ಪಾಕ್‌ ಕುಟುಂಬವನ್ನು 4 ದಿನಗಳ ಹಿಂದೆ ಬಂಧನ ಮಾಡಲಾಗಿತ್ತು. ಈ ಬಂಧಿತರು ನೀಡಿದ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮೂವರನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ನಂತರ ಜಿಗಣಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಿ‌ ತನಿಖೆ ನಡೆಸಬೇಕಿದ್ದರಿಂದ ಆನೇಕಲ್‌ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನ ಪೊಲೀಸ್‌ ಕಸ್ಟಡಿಗೆ ಪಡೆದಿದ್ದಾರೆ.

10 ವರ್ಷಗಳಿಂದ ಪಾಕ್‌ ಪ್ರಜೆಗಳು ಭಾರತದಲ್ಲಿ ನೆಲೆಸಿದ್ದವರನ್ನು ಬಂಧಿಸಿದ ಕೂಡಲೇ ಕೇಂದ್ರೀಯ ಗುಪ್ತಚರ ಸಂಸ್ಥೆ, ಎನ್‌ಐಎ ಆಗಮಿಸಿ ಮಾಹಿತಿ ಕಲೆ ಹಾಕಿದೆ. ಹಾಗೆಯೇ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್‌.ಜಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಸಲಹೆ ಸೂಚನೆ ನೀಡಿದ್ದಾರೆ.

15 ಮಂದಿ ಅಕ್ರಮ ಪ್ರವೇಶ: ಪಾಕ್‌ನಿಂದ ಒಟ್ಟು 15 ಮಂದಿ ಭಾರತಕ್ಕೆ ಬಂದಿದ್ದರು. ಅವರಲ್ಲಿ 7 ಮಂದಿ ಕರ್ನಾಟಕಕ್ಕೆ ಬಂದರೆ, ಉಳಿದವರು ಅಸ್ಸಾಂ, ಒಡಿಶಾ ಮತ್ತು ಹೈದರಾಬಾದ್‌ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಜಿಗಣಿಯಲ್ಲಿ ಪಾಕ್‌ ಕುಟುಂಬವನ್ನು ಬಂಧಿಸಿದ ಬಳಿಕ ಹಲವು ಸ್ಫೋಟಕ ಮಾಹಿತಿ ಹೊರ ಬಂದಿದೆ.

ಬೆಳಕಿಗೆ ಬಂದಿದ್ದು ಹೇಗೆ? ಬಂಧನದಲ್ಲಿದ್ದ ಪಾಕಿಸ್ತಾನದ ರಶೀದ್‌ ಅಲಿ ಸಿದ್ಧಕಿ ಕುಟುಂಬವನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ತಮ್ಮಂತೆಯೇ ಪೀಣ್ಯದಲ್ಲಿ ನೆಲೆಸಿರುವುದಾಗಿ ಹೇಳಿದ್ದಾರೆ. ಬಳಿಕ ಜಿಗಣಿ ಪೊಲೀಸರು ಬೆಂಗಳೂರಿನ ಪೀಣ್ಯಕ್ಕೆ ತೆರಳಿ ಒಂದೇ ಕುಟುಂಬದ ಮೂವರನ್ನು ಬಂಧಿಸಿದ್ದಾರೆ.

ರಶೀದ್‌ ಸಿದ್ದಕಿ ಕುಟುಂಬದೊಂದಿಗೆ ಈ ಕುಟುಂಬವು ಭಾರತಕ್ಕೆ ಅಕ್ರಮವಾಗಿ ನುಸುಳಿದ್ದರು. ಪಶ್ಚಿಮ ಬೆಂಗಾಲ್‌ ನಿಂದ ದೆಹಲಿಗೆ ಬಂದವರೇ ನಕಲಿ ದಾಖಲೆ ಮಾಡಿಸಿಕೊಂಡಿದ್ದಾರೆ. ತಾರಿಕ್‌ ಸಯೀದ್‌ ಬದಲಾಗಿ ಸನ್ನಿ ಚೌಹಾಣ್‌, ಅನಿಲ್‌ ಸಯೀದ್‌ ಬದಲಾಗಿ ದೂಪಾ ಚೌಹಾಣ್‌ಎಂದು ಹೆಸರು ಬದಲಾಯಿಸಿಕೊಂಡು ನಕಲಿ ದಾಖಲೆ ಮಾಡಿಸಿಕೊಳ್ಳಲಾಗಿತ್ತು. ಸಿದ್ದಕಿ ಕುಟುಂಬ ಜಿಗಣಿಗೆ ಬಂದರೆ ಇವರು ಕೇರಳಕ್ಕೆ ಹೋಗಿದ್ದರು. ಇದೇ ಸಮಯದಲ್ಲಿ ರಶೀದ್‌ ಅಲಿ ಸಿದ್ದಕಿ ಹೆಂಡತಿಯ ತಂಗಿ ಗಂಡನ ಸಹಾಯದಿಂದ ದಾವಣಗೆರೆಯಲ್ಲಿ ಆಶ್ರಯ ಪಡೆದಿದ್ದ. ಅಲ್ಲಿಂದ ಪೀಣ್ಯಕ್ಕೆ ಬಂದು ಕುಟುಂಬದೊಂದಿಗೆ ವಾಸವಾಗಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

vaibhavi shandilya

Vaibhavi Shandilya: ಮಾರ್ಟಿನ್‌ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

Delhi: ಬೃಹತ್ ಡ್ರಗ್ಸ್ ಜಾಲ-17 ವರ್ಷ ಬ್ರಿಟನ್‌ ನಲ್ಲಿದ್ದ ವ್ಯಕ್ತಿ ಪಂಜಾಬ್‌ ನಲ್ಲಿ ಬಂಧನ!

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು

FIR: ಚನ್ನಪಟ್ಟಣ ಉಪಚುನಾವಣೆ ಖರ್ಚಿಗೆ ‘ಎಚ್‌ ಡಿಕೆ’ 50 ಕೋಟಿ ರೂ ಬೇಡಿಕೆ; ಉದ್ಯಮಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

4-bng-rain

Bengaluru: ರಾಜಧಾನಿಯಲ್ಲಿ ತಿಂಗಳ ಬಳಿಕ ಮಳೆ

3-bng

Bengaluru: ಗೋದಾಮಿನ ಕ್ಯಾಮೆರಾ ಒಡೆದು, ಹಲ್ಲೆ: ಮೂವರ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Success Story:ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Success: ಬಡತನವನ್ನೇ ಸೋಲಿಸಿದಾಕೆಯ ಯಶೋಗಾಥೆ-ಭಿಕ್ಷೆ ಬೇಡುತ್ತಿದ್ದ ಬಾಲಕಿ ಈಗ ಡಾಕ್ಟರ್!

Team India; Morkel, the bowling coach, is upset with Hardik Pandya

Team India; ಹಾರ್ದಿಕ್ ಪಾಂಡ್ಯ ಬಗ್ಗೆ ಅಸಮಾಧಾನಗೊಂಡ ಬೌಲಿಂಗ್‌ ಕೋಚ್‌ ಮಾರ್ಕೆಲ್‌

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Patiala: ಐತಿಹಾಸಿಕ ದೇಗುಲಕ್ಕೆ ರಾಷ್ಟ್ರೀಯ ಸ್ಮಾರಕದ ಸ್ಥಾನಮಾನ ಶ್ರೀ ಕಾಳಿ ದೇವಿ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.