Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

ದೇಶದಲ್ಲೇ ಮೊದಲ ಬಾರಿಗೆ ಹೊಸ ಯೋಜನೆ‌: ಸಚಿವ ದಿನೇಶ್‌ ; ಫಿನಿಕ್ಸ್‌ ಮಾಲ್‌ ಆಫ್ ಏಷ್ಯಾದಲ್ಲಿ ಆಹಾರ ಪರೀಕ್ಷಾ ಕೇಂದ್ರ ಉದ್ಘಾಟನೆ

Team Udayavani, Oct 26, 2024, 12:33 PM IST

10-

ಬೆಂಗಳೂರು: ತರಕಾರಿ ಹಾಗೂ ಆಹಾರ ಧಾನ್ಯ ಮಾರಾಟ ಮಾಡುವ ಮಾರುಕಟ್ಟೆಗಳಲ್ಲಿನ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲು ಮ್ಯಾಜಿಕ್‌ ಬಾಕ್ಸ್‌ ಆಹಾರ ಪರೀಕ್ಷಾ ಕಿಯಾಸ್ಕ್ಗಳು ಸಹಕಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಪ್ರಯತ್ನವಾಗಿ ನಗರದ ಫಿನಿಕ್ಸ್‌ ಮಾಲ್‌ ಆಫ್ ಏಷ್ಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್‌ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಇನ್ಮುಂದೆ ಸಾರ್ವಜನಿಕರೇ ಫುಡ್‌ ಕೋರ್ಟ್‌ಗಳಲ್ಲಿ ತ್ವರಿತವಾಗಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು ಎಂದು ತಿಳಿಸಿದರು. ‌

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನ ಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಾಘಾತ ಮತ್ತು ಕ್ಯಾನ್ಸರ್‌ಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್‌ಗ‌ಳಲ್ಲಿ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ತರಕಾರಿ ಮತ್ತು ಆಹಾರ ಧಾನ್ಯಗಳನ್ನು ಮಾರಾಟ ಮಾಡುವ ಮೋರ್‌, ರಿಲಿಯನ್ಸ್ ಫ್ರೆಶ್‌ ಸೇರಿದಂತೆ ಸೂಪರ್‌ ಮಾರ್ಕೆಟ್‌ ಗಳಲ್ಲೂ ಫುಡ್‌ ಟೆಸ್ಟಿಂಗ್‌ ಕಿಟ್‌ಗಳನ್ನ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ‌

ಇಲ್ಲಿ ನಿತ್ಯ ಬಳಸುವ ಬೇಳೆ ಕಾಳು, ಸಕ್ಕರೆ, ಅಡುಗೆ ಎಣ್ಣೆ, ಹಾಲಿನ ಉತ್ಪನ್ನ, ತರಕಾರಿ ಇತ್ಯಾದಿಗಳನ್ನು ಪರೀಕ್ಷಿಸಿಕೊಳ್ಳಬಹುದು ಎಂದು ತಿಳಿಸಿದರು. ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತವಾಗಿ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೀಡಾದ ತುಪ್ಪದ ಸ್ಯಾಂಪಲ್‌ಗ‌ಳನ್ನು ಕೂಡ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್‌ಗ‌ಳಲ್ಲಿ 224 ಸ್ಯಾಂಪಲ್‌ಗ‌ಳು ಸೇವನೆಗೆ ಸುರಕ್ಷಿತವಾಗಿದ್ದು, 5 ಸ್ಯಾಂಪಲ್‌ಗ‌ಳು ಅಸುರಕ್ಷಿತ ಎಂದು ಕಂಡುಬಂದಿದೆ. ಒಂದು ಸ್ಯಾಂಪಲ್‌ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಮಾಲ್‌ ಆಫ್‌ ಏಷ್ಯಾದ ಜನರಲ್‌ ಮ್ಯಾನೇಜರ್‌ ಸತೀಶ್‌ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ಆಹಾರ ಪರೀಕ್ಷೆ ಕೇಂದ್ರ ಸ್ಥಾಪನೆ? ನಗರದ ತುಮಕೂರು ರಸ್ತೆಯ ವೈಷ್ಣವಿ ಸಫಾ ಯರ್‌ ಮಾಲ್‌, ಥಣಿಸಂದ್ರದ ಎಲಿಮೆಂಟ್ಸ್‌ ಮಾಲ್‌, ಬನ್ನೇರುಘಟ್ಟ ರಸ್ತೆ ಮೀನಾಕ್ಷಿ ಮಾಲ್‌, ಚರ್ಚ್‌ ಸ್ಟ್ರೀಟ್‌ ಒನ್‌ ಶೋಭಾ ಮಾಲ್‌, ಬೆಳ್ಳಂದೂ ರಿನಲ್ಲಿರುವ ಸೆಂಟ್ರಲ್‌ ಮಾಲ್‌, ಬೆನ್ನಿ ಗಾನಹಳ್ಳಿ ಯಲ್ಲಿರುವ ಗೋಪಾಲನ್‌ ಸಿಗ್ನೇಚರ್‌ ಮಾಲ್‌, ಕೋರಮಂಗಲದಲ್ಲಿರುವ ನೆಕ್ಸಸ್‌ ಫೋರಮ್‌ ಮಾಲ್‌, ಥಣಿಸಂದ್ರದಲ್ಲಿರುವ ಭಾರ ತೀಯ ಮಾಲ್‌ ಆಫ್‌ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್‌ ಮಾಲ್‌ ಸೇರಿ ಒಟ್ಟು 10 ಮಾಲ್‌ಗ‌ಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇಲಾಖೆ ಆಯುಕ್ತ ಕೆ.ಶ್ರೀನಿವಾಸ್‌ ತಿಳಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.