Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

ದೇಶದಲ್ಲೇ ಮೊದಲ ಬಾರಿಗೆ ಹೊಸ ಯೋಜನೆ‌: ಸಚಿವ ದಿನೇಶ್‌ ; ಫಿನಿಕ್ಸ್‌ ಮಾಲ್‌ ಆಫ್ ಏಷ್ಯಾದಲ್ಲಿ ಆಹಾರ ಪರೀಕ್ಷಾ ಕೇಂದ್ರ ಉದ್ಘಾಟನೆ

Team Udayavani, Oct 26, 2024, 12:33 PM IST

10-

ಬೆಂಗಳೂರು: ತರಕಾರಿ ಹಾಗೂ ಆಹಾರ ಧಾನ್ಯ ಮಾರಾಟ ಮಾಡುವ ಮಾರುಕಟ್ಟೆಗಳಲ್ಲಿನ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲು ಮ್ಯಾಜಿಕ್‌ ಬಾಕ್ಸ್‌ ಆಹಾರ ಪರೀಕ್ಷಾ ಕಿಯಾಸ್ಕ್ಗಳು ಸಹಕಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಪ್ರಯತ್ನವಾಗಿ ನಗರದ ಫಿನಿಕ್ಸ್‌ ಮಾಲ್‌ ಆಫ್ ಏಷ್ಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್‌ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಇನ್ಮುಂದೆ ಸಾರ್ವಜನಿಕರೇ ಫುಡ್‌ ಕೋರ್ಟ್‌ಗಳಲ್ಲಿ ತ್ವರಿತವಾಗಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು ಎಂದು ತಿಳಿಸಿದರು. ‌

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನ ಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಾಘಾತ ಮತ್ತು ಕ್ಯಾನ್ಸರ್‌ಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್‌ಗ‌ಳಲ್ಲಿ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ತರಕಾರಿ ಮತ್ತು ಆಹಾರ ಧಾನ್ಯಗಳನ್ನು ಮಾರಾಟ ಮಾಡುವ ಮೋರ್‌, ರಿಲಿಯನ್ಸ್ ಫ್ರೆಶ್‌ ಸೇರಿದಂತೆ ಸೂಪರ್‌ ಮಾರ್ಕೆಟ್‌ ಗಳಲ್ಲೂ ಫುಡ್‌ ಟೆಸ್ಟಿಂಗ್‌ ಕಿಟ್‌ಗಳನ್ನ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ‌

ಇಲ್ಲಿ ನಿತ್ಯ ಬಳಸುವ ಬೇಳೆ ಕಾಳು, ಸಕ್ಕರೆ, ಅಡುಗೆ ಎಣ್ಣೆ, ಹಾಲಿನ ಉತ್ಪನ್ನ, ತರಕಾರಿ ಇತ್ಯಾದಿಗಳನ್ನು ಪರೀಕ್ಷಿಸಿಕೊಳ್ಳಬಹುದು ಎಂದು ತಿಳಿಸಿದರು. ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತವಾಗಿ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೀಡಾದ ತುಪ್ಪದ ಸ್ಯಾಂಪಲ್‌ಗ‌ಳನ್ನು ಕೂಡ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್‌ಗ‌ಳಲ್ಲಿ 224 ಸ್ಯಾಂಪಲ್‌ಗ‌ಳು ಸೇವನೆಗೆ ಸುರಕ್ಷಿತವಾಗಿದ್ದು, 5 ಸ್ಯಾಂಪಲ್‌ಗ‌ಳು ಅಸುರಕ್ಷಿತ ಎಂದು ಕಂಡುಬಂದಿದೆ. ಒಂದು ಸ್ಯಾಂಪಲ್‌ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಮಾಲ್‌ ಆಫ್‌ ಏಷ್ಯಾದ ಜನರಲ್‌ ಮ್ಯಾನೇಜರ್‌ ಸತೀಶ್‌ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ಆಹಾರ ಪರೀಕ್ಷೆ ಕೇಂದ್ರ ಸ್ಥಾಪನೆ? ನಗರದ ತುಮಕೂರು ರಸ್ತೆಯ ವೈಷ್ಣವಿ ಸಫಾ ಯರ್‌ ಮಾಲ್‌, ಥಣಿಸಂದ್ರದ ಎಲಿಮೆಂಟ್ಸ್‌ ಮಾಲ್‌, ಬನ್ನೇರುಘಟ್ಟ ರಸ್ತೆ ಮೀನಾಕ್ಷಿ ಮಾಲ್‌, ಚರ್ಚ್‌ ಸ್ಟ್ರೀಟ್‌ ಒನ್‌ ಶೋಭಾ ಮಾಲ್‌, ಬೆಳ್ಳಂದೂ ರಿನಲ್ಲಿರುವ ಸೆಂಟ್ರಲ್‌ ಮಾಲ್‌, ಬೆನ್ನಿ ಗಾನಹಳ್ಳಿ ಯಲ್ಲಿರುವ ಗೋಪಾಲನ್‌ ಸಿಗ್ನೇಚರ್‌ ಮಾಲ್‌, ಕೋರಮಂಗಲದಲ್ಲಿರುವ ನೆಕ್ಸಸ್‌ ಫೋರಮ್‌ ಮಾಲ್‌, ಥಣಿಸಂದ್ರದಲ್ಲಿರುವ ಭಾರ ತೀಯ ಮಾಲ್‌ ಆಫ್‌ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್‌ ಮಾಲ್‌ ಸೇರಿ ಒಟ್ಟು 10 ಮಾಲ್‌ಗ‌ಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಇಲಾಖೆ ಆಯುಕ್ತ ಕೆ.ಶ್ರೀನಿವಾಸ್‌ ತಿಳಿಸಿದರು.

ಟಾಪ್ ನ್ಯೂಸ್

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

9-hc

Bengaluru: ಗ್ರ್ಯಾಚುಟಿ ಮೊತ್ತಕ್ಕೆ ವಿಮೆ ಕಡ್ಡಾಯ ಆದೇಶ ರ‌ದ್ದತಿಗೆ ಮನವಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

7-bng

Bengaluru: ಎಚ್‌ಎಂಟಿ ವಶದಲ್ಲಿದ್ದ 5 ಎಕರೆಯನ್ನು ಮರು ವಶಕ್ಕೆ ಪಡೆದ ಅರಣ್ಯ ಇಲಾಖೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.