ಕೋವಿಡ್‌ 19 ಸೋಂಕಿಗೆ ಎಎಸ್‌ಐ ಬಲಿ


Team Udayavani, Jun 17, 2020, 6:14 AM IST

death inspectr

ಬೆಂಗಳೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್‌ 19 ಮಹಾಮಾರಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದು, ಇದು ಇತರೆ ಅಧಿಕಾರಿ-ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ವಿಶ್ವೇಶ್ವರಪುರ (ವಿವಿಪುರ) ಸಂಚಾರ ಠಾಣೆ  ಎಎಸ್‌ಐ (60) ಭಾನುವಾರ ಮೃತಪಟ್ಟಿದ್ದರು. ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್‌ 19 ಇರುವುದು ಸೋಮವಾರ ದೃಢಪಟ್ಟಿದೆ.

ಸುಂಕದಕಟ್ಟೆ ನಿವಾಸಿಯಾದ ಎಎಸ್‌ಐ ಈ ತಿಂಗಳು ನಿವೃತ್ತರಾಗಬೇಕಿತ್ತು. ಎಎಸ್‌ಐ ಹೃದಯರೋಗ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ರಜೆ ಮೇಲೆ ಕಳುಹಿಸಲಾಗಿತ್ತು. ಆದರೆ, ಭಾನುವಾರ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ  ದಾಖಲಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದರು. ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ಮೃತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು ಬಳಿಕ ಸೋಂಕು ತಗುಲಿರುವುದು ಪತ್ತೆಯಾಗಿದೆ  ಎಂದು ಪೊಲೀಸರು ಮಾಹಿತಿ ನೀಡಿದರು.

ಮತ್ತೂಬ್ಬ ಎಎಸ್‌ಐಗೂ ಸೋಂಕು: ಇದೇ ವೇಳೆ ಅದೇ ಪೊಲೀಸ್‌ ಠಾಣೆಯ ಮತ್ತೂಬ್ಬ ಎಎಸ್‌ಐಗೂ ಸೋಂಕು ದೃಢಪಟ್ಟಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಪ್ರಾಥಮಿಕ  ಸಂಪರ್ಕದಲ್ಲಿದ್ದ ಸುಮಾರು 50ಕ್ಕೂ ಅಧಿಕ ಮಂದಿ ಪೊಲೀಸ್‌ ಅಧಿಕಾರಿ-ಸಿಬ್ಬಂದಿಯನ್ನು ಖಾಸಗಿ ಹೋಟೆಲ್‌ ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ.

ಪೊಲೀಸ್‌ ಠಾಣೆ ಸೀಲ್‌ಡೌನ್‌: ಮತ್ತೂಬ್ಬ ಎಎಸ್‌ಐಗೂ ಕೋವಿಡ್‌ 19 ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಪೊಲೀಸ್‌ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಪೊಲೀಸ್‌ ಠಾಣೆಗೆ ಸ್ಯಾನಿಟೈಸರ್‌ ಸಿಂಪಡಣೆ ಮಾಡಲು ಸೂಚಿಸಲಾಗಿದ್ದು,  ಯಾವುದೇ ಕಡತ ಮುಟ್ಟದ್ದಂತೆ ಸಿಬ್ಬಂದಿಗೆ ಸೂಚಿಸಲಾಗಿ ದೆ. ಹೀಗಾಗಿ ತಾತ್ಕಾಲಿಕವಾಗಿ ಠಾಣೆಯ ಕಾರ್ಯಾಚರಣೆಯನ್ನು ಹೊರಭಾಗದಲ್ಲಿ ಎಲ್ಲ ಆರೋಗ್ಯ ಸುರಕ್ಷತಾ ಕ್ರಮಗಳ ಜತೆ ನಿರ್ವಹಿಸಲಾಗುತ್ತಿ ದೆ. ಅಗತ್ಯಬಿದ್ದಲ್ಲಿ ಜಯನಗರ  ಅಥವಾ ಬಸವನಗುಡಿ ಸಂಚಾರ ಠಾಣೆಗೆ ಕಾರ್ಯವನ್ನು ವರ್ಗಾವಣೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

14 ಮಂದಿ, 12 ಠಾಣೆ ಸೀಲ್‌ ಡೌನ್‌: ಕಳೆದ ಒಂದೂವರೆ ತಿಂಗಳಲ್ಲಿ ಸಂಚಾರ ಠಾಣೆ ಸೇರಿ 12 ಪೊಲೀಸ್‌ ಠಾಣೆ ಸೀಲ್‌ಡೌನ್‌ ಮಾಡಲಾಗಿತ್ತು. ಜೀವನ್‌ ಭೀಮಾನಗರ, ಜೆ.ಜೆ.ನಗರ, ವಿವಿಪುರ, ಹೆಣ್ಣೂರು, ಜಯನಗರ, ಚಾಮರಾಜಪೇಟೆ,  ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಸೋಲದೇವನಹಳ್ಳಿ, ಸಿ.ಟಿ.ಮಾರುಕಟ್ಟೆ, ಬೈಯಪ್ಪನಹಳ್ಳಿ, ಪುಲಕೇಶಿ ನಗರ ಸಂಚಾರ ಹಾಗೂ ಬೆಂಗಳೂರು ಗ್ರಾಮಾಂತರ ಹೆಬ್ಬಗೋಡಿ ಠಾಣೆಗಳನ್ನು ಸುಮಾರು 48 ಗಂಟೆಗಳ ಕಾಲ ಸೀಲ್‌ಡೌನ್‌  ಮಾಡಲಾಗಿತ್ತು.

(ಈ ಪೈಕಿ ಜೆ.ಜೆ.ನಗರ, ಹೆಬ್ಬಗೋಡಿ, ಜೆ.ಬಿ.ನಗರ, ಬೈಯಪ್ಪನ ಹಳ್ಳಿ, ಸಿಸಿಬಿ ಸೇರಿ ಕೆಲ ಠಾಣೆಗಳ ಸೀಲ್‌ಡೌನ್‌ ತೆರವುಗೊಳಿಸಲಾಗಿದೆ) ಈ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 14 ಮಂದಿಗೆ ಕೋವಿಡ್‌ 19 ದೃಢಪಟ್ಟಿದೆ.  ಮೂವರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಪೊಲೀಸರಿಗೆ ಅಗತ್ಯ ಸೂಚನೆ: ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್‌, ಕೈಗವಸು ಬಳಸಬೇಕು. ಡಿಸಿಪಿಗಳು ಪೊಲೀಸ್‌ ವಸತಿ ಗೃಹಗಳಿಗೆ ಭೇಟಿ ನೀಡಿ ಸಿಬ್ಬಂದಿ ಹಾಗೂ  ಕುಟುಂಬ ಸದಸ್ಯರಿಗೆ ಧೈರ್ಯ ನೀಡಬೇಕು ಎಂದು ಸೂಚಿಸಲಾಗಿದೆ. ಪೊಲೀಸರು ಬಹಳ ಅಪಾಯದ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೂ ಧೃತಿಗೆಡದೆ ಧೈರ್ಯದಿಂದ ಆರೋಗ್ಯ ಸುರಕ್ಷತಾ ಕ್ರಮಗಳ ಜತೆ ಕರ್ತವ್ಯ  ನಿರ್ವಹಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಭಾಸ್ಕರ್‌ ರಾವ್‌ ಹೇಳಿದರು.

420ಕ್ಕೂ ಅಧಿಕ ಮಂದಿ ಕ್ವಾರಂಟೈನ್‌: ಲಾಕ್‌ಡೌನ್‌ ಸಡಿಲಿಕೆ ಬಳಿಕ ಜನದಟ್ಟಣೆ ಹೆಚ್ಚಾಗಿದೆ. ಅಂತಾರಾಜ್ಯ ಸಂಚಾರ ಕೂಡ ಅಧಿಕವಾಗಿದೆ. ಕಳೆದ ಎರಡೂವರೆ ತಿಂಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ,  ಲಾಕ್‌ಡೌನ್‌ ಸಡಿಲಿಕೆ ಬಳಿಕ ಆರೋಪಿಗಳ ಬಂಧನ, ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಕೆಲಸ, ಬೀಟ್‌ ಹೆಚ್ಚಳ ಮಾಡುತ್ತಿರುವುದರಿಂದ ಸೋಂಕು ತಗುಲುತ್ತಿದೆ. ಇದುವರೆಗೂ 13 ಮಂದಿಗೆ ಸೋಂಕು ದೃಢಪಟ್ಟಿದೆ. ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 420ಕ್ಕೂ ಅಧಿಕ ಮಂದಿ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.