
ಬಿಬಿಎಂಪಿ: ಕಸ ಗುಡಿಸುವ ಯಂತ್ರ ಟೆಂಡರ್ ರದ್ದು
Team Udayavani, May 19, 2020, 6:43 AM IST

ಬೆಂಗಳೂರು: ನಗರದಲ್ಲಿ ಕಸಗುಡಿಸಲು ಯಾಂತ್ರಿಕ ವಾಹನ ಖರೀದಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕೌನ್ಸಿಲ್ನಲ್ಲಿ ಅನುಮೋದನೆ ನೀಡಿದ್ದ ಟೆಂಡರ್ಗೆ ರಾಜ್ಯ ಸರ್ಕಾರ ತಡೆ ನೀಡಿದ್ದು, ಮರು ಟೆಂಡರ್ ಕರೆಯಲು ಸೂಚಿಸಿದೆ. ಕಸ ಗುಡಿಸುವ ಯಂತ್ರ ಖರೀದಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್ಗೆ ಜನವರಿಯಲ್ಲಿ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿತ್ತು.
ಆದರೆ, ಇದರಲ್ಲಿನ ಲೋಪದ ಬಗ್ಗೆ ನಗರಾಭಿವೃದಿಟಛಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೌನ್ಸಿಲ್ ನಿರ್ಣಯವನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯಲು ಸೂಚನೆ ನೀಡಿದೆ. ನಗರದಲ್ಲಿನ ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳಲ್ಲಿ ಕಸ ಗುಡಿಸಲು 17 ಹೊಸ ಯಂತ್ರಗಳನ್ನು ಖರೀದಿಸಲಾಗಿತ್ತು. ಆ ವಾಹನಗಳನ್ನು ಪೂರೈಸಿರುವ ಗುತ್ತಿಗೆದಾರರೇ ಅದನ್ನು ನಿರ್ವಹಣೆ ಮಾಡಬೇಕು ಮತ್ತು ರಸ್ತೆ ಗುಡಿಸಲು ಸಿಬ್ಬಂದಿ ನಿಯೋಜಿಸಬೇಕು ಎಂದು ನಿಗದಿ ಮಾಡಲಾಗಿತ್ತು. ಇದಕ್ಕೆ ಬದಲಾಗಿ ಬಿಬಿಎಂಪಿ ಪ್ರತಿ ಕಿ.ಮೀ. ಕಸಗುಡಿಸಲು 600 ರೂ. ನೀಡುವ ಬಗ್ಗೆಯೂ ಕೌನ್ಸಿಲ್ ನಲ್ಲಿ ಅನುಮೋದನೆ ಪಡೆಯಲಾಗಿದೆ.
ಈ ಪ್ರಕ್ರಿಯೆ ಕಾನೂನು ಬಾಹಿರ ಎಂದು ನಗರಾಭಿವೃದಿ ಇಲಾಖೆ ಅಭಿಪ್ರಾಯಪಟ್ಟಿದೆ. ಪ್ರತಿದಿನ 65 ಕಿ.ಮೀ. ರಸ್ತೆ ಗುಡಿಸಬೇಕು ಎಂಬ ದೂರವನ್ನು 40 ಕಿ.ಮೀ.ಗೆ ಇಳಿಸಲಾಗಿದೆ. ಅಲ್ಲದೆ, ರಸ್ತೆ ಗುಡಿಸಲು ನಿಗದಿ ಮಾಡಿರುವ ದರದಲ್ಲೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದಂತಹ ದರಕ್ಕಿಂತ ಹೆಚ್ಚಿಸಲಾಗಿದೆ. ಇದರಿಂದ ಕೆಟಿಟಿಪಿ ಕಾಯ್ದೆ ಸ್ಪಷ್ಟ ಉಲ್ಲಂಘನೆ ಎಂದು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.