Bengaluru: ಲೈಸೆನ್ಸ್‌ ಪಡೆಯಲು ಪಿಜಿಗಳಿಗೆ 15 ದಿನ ಗಡುವು

ಪರವಾನಗಿ, ಮಾರ್ಗಸೂಚಿ ಅಳವಡಿಸಿಕೊಳ್ಳದಿದ್ದರೆ ಪಾಲಿಕೆಯಿಂದ ಬೀಗ ಮುದ್ರೆ ; 25 ಸಾವಿರ ಪೈಕಿ 2 ಸಾವಿರ ಪಿಜಿಗಳಿಗೆ ಮಾತ್ರ ಲೈಸೆನ್ಸ್‌

Team Udayavani, Aug 31, 2024, 2:40 PM IST

12-bbmp

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪೇಯಿಂಗ್‌ ಗೆಸ್ಟ್‌ಗಳ (ಪಿಜಿ) ಸುರಕ್ಷತಾ ದೃಷ್ಟಿಯಿಂದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೆ.15ರ ಒಳಗೆ ಮಾರ್ಗಸೂಚಿಗಳನ್ನು ಅಳವಡಿಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ಜತೆಗೆ ಬಿಬಿಎಂಪಿಯಿಂದ ಪರವಾನಗಿ ಪಡೆಯದ ಪಿಜಿಗಳಿಗೆ ಬೀಗ ಮುದ್ರೆ ಹಾಕುವ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 25 ಸಾವಿ ರಕ್ಕೂ ಅಧಿಕ ಪಿಜಿಗಳ ಕಾರ್ಯಾಚರಣೆ ನಡೆಸುತ್ತಿ ರುವ ಮಾಹಿತಿ ಇದೆ. ಇದುವರೆಗೂ ಕೇವಲ 2 ಸಾವಿರ ಪಿಜಿಗಳಿಗೆ ಮಾತ್ರ ಪರವಾನಗಿ ವಿತರಿಸಲಾ ಗಿದೆ. ಆದರೆ ನಗರದಲ್ಲಿ ಸಾವಿರಾರು ಪಿಜಿಗಳಿವೆ. ಹೀಗಾಗಿ, ಅನಧಿಕೃತ ಪಿಜಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೂ ಅಧಿಕಾರಿಗಳು ಮುಂದಾಗಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಧಿಕೃತ ಪಿಜಿಗಳಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ.

ಯಾವುದೇ ಪಿಜಿಗಳಾಗಿದ್ದರೂ ಸೆಪ್ಟೆಂಬರ್‌ 15ರ ಒಳಗೆ ಬಿಬಿಎಂಪಿ ರೂಪಿಸಿರುವ ಮಾರ್ಗ ಸೂಚಿಗಳನ್ನು ಅಳವಡಿಕೆ ಮಾಡಿಕೊಳ್ಳಲೇಬೇಕು. ಜತೆಗೆ ಪಿಜಿ ನಡೆಸುವ ಬಗ್ಗೆ ಪರವಾನಗಿ ಪಡೆದುಕೊಳ್ಳಲೇಬೇಕು. ಪರವಾನಗಿ ಪಡೆಯದೇ ಅನಧಿಕೃತವಾಗಿ ನಡೆಸುವ ಪೇಯಿಂಗ್‌ ಗೆಸ್ಟ್‌ಗಳನ್ನು ಬಂದ್‌ ಮಾಡುವುದಾಗಿ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಎಷ್ಟೆ ಪಿಜಿಗಳಿದ್ದರೂ ಸೆ.15ರೊಳಗೆ ಲೈಸೆನ್ಸ್‌ ಪಡೆದುಕೊಳ್ಳಬೇಕು. ಇಲ್ಲದೆ ಹೋದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಹೆಲ್ಪ್ಲೈನ್‌ ಫ‌ಲಕ ಪ್ರದರ್ಶಿಸಬೇಕು: ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ ಪೇಯಿಂಗ್‌ ಗೆಸ್ಟ್‌ ಕಟ್ಟಡದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಉದ್ದಿಮೆದಾರರು, ಮಾಲೀಕರು ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಒಬ್ಬ ನೌಕರನ್ನಾದರೂ ಕಡ್ಡಾಯವಾಗಿ 24×7 ಸೇವೆಯಡಿಯಲ್ಲಿ ನಿಯೋಜಿಸಿರತಕ್ಕದ್ದು ಎಂಬುವುದು ಸೇರಿದಂತೆ ಹಲವು ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದೆ.

ಪಿಜಿಯಲ್ಲಿ ಪ್ರತಿ ನಿವಾಸಿಗೆ 70 ಚದರ ಅಡಿ ಜಾಗ ಕಡ್ಡಾಯ

 ಪೇಯಿಂಗ್‌ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿರಬೇಕು.

 ಪ್ರತಿ ಕ್ಯಾಮರಾದ ವಿಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್‌ ವೇರ್‌ -ಸಾಫ್ಟ್‌ವೇರ್‌ ಬ್ಯಾಕಪ್‌ ಸ್ಟೋರೆಜ್‌ ಮಾಡಬೇಕು.

 ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು.

 ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಬೇಕು.

ರಾಜಧಾನಿಯ ಪಿಜಿ ಮಾಲಿಕರು ಪರವಾನಗಿ ಜತೆಗೆ ಪಾಲಿಕೆಯ ಹೊಸ ಮಾರ್ಗಸೂಚಿಗಳ ಅಳವಡಿಸಿಕೊಳ್ಳಬೇಕು. ಒಂದು ಪಿಜಿಯಿಂದ ಕೆಟ್ಟ ಹೆಸರು ಬಂದರೆ ಎಲ್ಲ ಪಿಜಿಗಳಿಗೂ ಬರುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಅನಧಿಕೃತವಾಗಿ ಪಿಜಿ ನಡೆಸಲು ಮುಂದಾದರೆ ಅಂತವರ ವಿರುದ್ಧ ಪಾಲಿಕೆ ಕ್ರಮ ಕೈಗೊಳ್ಳಲಿ. ●ಅರುಣ್‌ ಕುಮಾರ್‌, ಪಿಜಿ ಮಾಲಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.