Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ

10 ನಿಮಿಷಗಳ ಅಂತರದಲ್ಲಿ ಮೆಟ್ರೋ ಕಾರ್ಯಾಚರಣೆ

Team Udayavani, Nov 8, 2024, 2:26 PM IST

18-metro

ಬೆಂಗಳೂರು: “ನಮ್ಮ ಮೆಟ್ರೋ’ ವಿಸ್ತರಿತ ಹೊಸ ಮಾರ್ಗದಲ್ಲಿ ಮೊದಲ ದಿನ ಉತ್ತಮ ಸ್ಪಂದನೆ ದೊರಕಿದ್ದು, ನಾಗಸಂದ್ರ-ಮಾದಾವರ ನಡುವೆ ಗುರುವಾರ ಇಡೀ ದಿನ 16000 ಜನ ಪ್ರಯಾಣಿಸಿದ್ದಾರೆ. ಬೆಳಗ್ಗೆ 5ರಿಂದ ಶುರುವಾದ ಉದ್ದೇಶಿತ ಮಾರ್ಗದ ವಾಣಿಜ್ಯ ಸಂಚಾರ ರಾತ್ರಿ 11ರವರೆಗೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಕಾರ್ಯಾಚರಣೆ ಮಾಡಿತು.

ಬೆಳಗ್ಗೆ 5ರಿಂದ ರಾತ್ರಿ 9ರವರೆಗೆ 15,594 ಜನ ಪ್ರಯಾಣಿಸಿದ್ದು, ರಾತ್ರಿ 11ರ ವೇಳೆಗೆ ಈ ಸಂಖ್ಯೆ 16000ದ ಗಡಿ ದಾಟಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ದ ಅಧಿಕಾರಿಗಳು ತಿಳಿಸಿದರು.

3.14 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ಮೂರು ನಿಲ್ದಾಣಗಳಿದ್ದು, ಅವುಗಳಿಂದ ನಗರದ ವಿವಿಧೆಡೆ ಮೆಟ್ರೋ ಪ್ರಯಾಣ ಬೆಳೆಸಿದವರ ಸಂಖ್ಯೆ 7,400 ಇದ್ದರೆ, ಬೇರೆ ಬೇರೆ ನಿಲ್ದಾಣಗಳಿಂದ ಈ ಮೂರು ನಿಲ್ದಾಣಗಳಿಗೆ ಬಂದಿಳಿದವರ ಸಂಖ್ಯೆ 8,194 ಆಗಿದೆ. ಎರಡು ಕಡೆ ನೈಸ್‌ ರಸ್ತೆಯನ್ನು ಸಂಧಿಸುವ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗುವ ಈ ಅತಿ ಚಿಕ್ಕ ಮಾರ್ಗದಲ್ಲಿ ನಿತ್ಯ 44 ಸಾವಿರ ಜನ ಪ್ರಯಾಣಿ ಸಲಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಅಂದಾಜಿಸಿದ್ದಾರೆ.

ಮೊದಲ ದಿನ ತಾವು ಇರುವ ಪ್ರದೇಶಗಳಿಗೆ ಮತ್ತಷ್ಟು ಹತ್ತಿರವಾದ ಮೆಟ್ರೋದಲ್ಲಿ ಜನ ಸಂಚರಿಸಿ ಖುಷಿಪಟ್ಟರು.ಕೆಲವರು ಜಾಲಿ ರೈಡ್‌ ಮಾಡಿ ಸೆಲ್ಫಿà ತೆಗೆದುಕೊಂಡರು. ಆ ಫೋಟೋಗಳೆಲ್ಲ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.