Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
ಜೈಲಿಗೆ ಕರೆದೊಯ್ಯುವಾಗ ಭದ್ರತಾ ಸಿಬ್ಬಂದಿಯಿಂದ ಪತ್ತೆ
Team Udayavani, Jul 5, 2024, 12:49 PM IST
ಬೆಂಗಳೂರು: ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿ ಜೈಲಿಗೆ ಕರೆದೊಯ್ಯುವಾಗ ತನ್ನ ಗುದದ್ವಾರದಲ್ಲಿ ಮೊಬೈಲ್ಗಳನ್ನು ಇಟ್ಟುಕೊಂಡು ಹೋಗುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಕಾರಾಗೃಹ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾನೆ. ರಘುವೀರ್ ಸಿಕ್ಕಿ ಬಿದ್ದ ಕೈದಿ.
ಆರೋಪಿಯ ಗುದದ್ವಾರದಲ್ಲಿದ್ದ 2 ಮೊಬೈಲ್ ಜಪ್ತಿ ಮಾಡಲಾಗಿದೆ. ಆತನ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಹಿಂದೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ರಘುವೀರ್ನನ್ನು ಜು.2ರಂದು ಕಾನ್ಸ್ಟೇಬಲ್ ಶ್ರೀಕೃಷ್ಣ ಕೋರ್ಟ್ಗೆ ಹಾಜರು ಪಡಿಸಿ ವಾಪಸ್ ಜೈಲಿಗೆ ಕರೆದೊಯ್ಯುತ್ತಿದ್ದರು. ಮಾರ್ಗ ಮಧ್ಯೆ ಹೊಟ್ಟೆ ನೋವು ಎಂದು ಗೋಳಾಡಿದ್ದಾನೆ. ನಂತರ ಜೈಲಿನ ಬಳಿ ಹೋದಾಗ, ಕಾನ್ಸ್ಟೇಬಲ್ ಶ್ರೀಕೃಷ್ಣ, ಜೈಲಿನ ಅಧಿಕಾರಿಗಳಿಗೆ ಕೈದಿ ಹೊಟ್ಟೆ ನೋವು ಎಂದು ಹೇಳುತ್ತಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ಒಳಗೆ ಕರೆದೊಯ್ಯುವಾಗ ಲೋಹ ಪರಿಶೋಧಕ ಯಂತ್ರದಲ್ಲಿ ಶಬ್ಧ ಬಂದಿದ್ದು, ಅನುಮಾನಗೊಂಡು ಬೇರೆ ಉಪಕರಣದಿಂದ ಸ್ಕ್ಯಾನ್ ಮಾಡಿದಾಗ, ಆತನ ಗುದದ್ವಾರದಲ್ಲಿ ಶಬ್ಧ ಬಂದಿದೆ.
ಬಳಿಕ ಆರೋಪಿಯನ್ನು ಕೂಡಲೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಎಕ್ಸ್ರೇ ಮಾಡಿದಾಗ, ಆತನ ಗುದದ್ವಾರದಲ್ಲಿ ಮೊಬೈಲ್ಗಳು ಇರುವುದು ಪತ್ತೆಯಾಗಿದೆ. ಬಳಿಕ ಶಸ್ತ್ರ ಚಿಕಿತ್ಸೆ ಮಾಡಿ ಮೊಬೈಲ್ಗಳನ್ನು ಹೊರಗಡೆ ತೆಗೆಯಲಾಗಿದೆ. ಈತನ ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ, ಜೈಲಿನಲ್ಲಿರುವ ಕೆಲ ವ್ಯಕ್ತಿಗಳಿಗೆ ಲಕ್ಷಾಂತರ ರೂ.ಗೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಎಂಬುದು ಗೊತ್ತಾಗಿದೆ.
ಆ ಕೈದಿಗಳು ಯಾರೆಂದು ಪತ್ತೆ ಹಚ್ಚಬೇಕಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
Dengue: ಜನರ ಪ್ರಾಣ ಹೋಗುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಲಿ: ಶೋಭಾ ಕರಂದ್ಲಾಜೆ
Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್
BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್ಗೆ ಪಾಲಿಕೆ ಬೀಗ
MUST WATCH
ಹೊಸ ಸೇರ್ಪಡೆ
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.