Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ಉಪನಗರ ರೈಲು ಯೋಜನೆ, ರಸ್ತೆ, ಮೂಲ ಸೌಕರ್ಯಕ್ಕಾಗಿ ಮರಗಳಿಗೆ ಕೊಡಲಿ ಪೆಟ್ಟು; ನಮ್ಮ ಮೆಟ್ರೋ ಯೋಜನೆಗೆ 4078 ಮರ ಕಡಿತ

Team Udayavani, Sep 20, 2024, 11:05 AM IST

3-bng

ಬೆಂಗಳೂರು: ಉಪನಗರ ರೈಲು, ಮೆಟ್ರೋ ಸೇರಿದಂತೆ ಉದ್ಯಾನನಗರಿಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಲ್ಲಿ 9 ಸಾವಿರಕ್ಕೂ ಅಧಿಕ ಮರಗಿಡಗಳಿಗೆ ಕೊಡಲಿ ಪೆಟ್ಟು ಬಿದ್ದಿದ್ದು, ಸಿಲಿಕಾನ್‌ ಸಿಟಿಯ ಹಸಿರು ಹೊದಿಕೆಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಪರಿಸರಪ್ರೇಮಿಗಳು ಆತಂಕ ಹೊರಹಾಕಿದ್ದಾರೆ.

ಬಿಬಿಎಂಪಿಯ ಅಂಕಿ-ಅಂಶದ ಪ್ರಕಾರ, ಬೆಂಗಳೂರು ಉಪನಗರಗಳನ್ನು ಸಂಪರ್ಕಿಸುವ ರೈಲ್ವೆ ಯೋಜನೆ, ರಸ್ತೆ, ನಮ್ಮ ಮೆಟ್ರೋ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಲುವಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಿಂದ ಸುಮಾರು 9,703 ಕ್ಕೂ ಅಧಿಕ ಮರಗಳಿಗೆ ಕೊಡಲಿ ಪೆಟ್ಟು ನೀಡಲಾಗಿದೆ.

ನಮ್ಮ ಮೆಟ್ರೋ ಯೋಜನೆಯೊಂದರಿಂದಲೇ ಸುಮಾರು 4,078 ಮರಗಳ ಮಾರಣ ಹೋಮ ಆಗಿದ್ದು, ರೈಲ್ವೆ ಸವಲತ್ತು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರೈಲ್ವೆ ಮೂಲ ಸೌಕರ್ಯ ಅಭಿವೃದ್ದಿ ಸಂಸ್ಥೆ (ಕೆಆರ್‌ಐಡಿಇ) ಸುಮಾರು 4,926 ಮರಗಳನ್ನು ಕಡಿದು ಹಾಕಿದೆ.

ಬಿಬಿಎಂಪಿಯಿಂದ 699 ಮರಗಳಿಗೆ ಕೊಡಲಿ: ಬಿಬಿಎಂಪಿ ಕೂಡ ಕಳೆದ 3 ವರ್ಷಗಳಲ್ಲಿ ವಿವಿಧ ಅಭಿವೃದ್ದಿ ಯೋಜನೆಗಳ ಕಾರ್ಯಗತದ ಉದ್ದೇಶ ದಿಂದ ಸುಮಾರು 699 ಮರಗಳನ್ನು ಬುಡ ಸಮೇತ ತೆಗೆದಿದೆ. ಇದರ ಹೊರತಾಗಿ ಎಚ್‌ಎಎಲ್‌, ಜಲ ಮಂಡಳಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಸೇರಿದಂತೆ ಮತ್ತತಿರರ ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನು ಕಡಿದು ಹಾಕಲಾಗಿದೆ ಎಂದು ಪಾಲಿಕೆ ಅರಣ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಡಿದ ಮರಗಳ ಬದಲಿಗೆ ಹೆಚ್ಚುವರಿ ಗಿಡ: ಈಗಾಗಲೇ ಬೆಂಗಳೂರಿನಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ನಡೆದಿವೆ. ಅವುಗಳಿಗಾಗಿ ಕೆಲವು ಕಡೆಗಳಲ್ಲಿ ಮರವನ್ನು ಕಡಿಯಲಾಗಿದೆ. ಆ ಮರಗಳಿಗೆ ಬದಲಾಗಿ ಹೆಚ್ಚುವರಿ ಗಿಡಗಳನ್ನು ನಡೆಯುವ ಪ್ರಕ್ರಿಯೆ ಕೂಡ ನಡೆದಿದೆ. ವಿವಿಧ ಸಂಸ್ಥೆಗಳು ಮರಗಿಡಗಳನ್ನು ನೆಟ್ಟಿರುವ ಬಗ್ಗೆ ಖಾತರಿ ದೊರೆತ ನಂತರ ಮರಗಿಡಗಳಿಗೆ ಕತ್ತರಿ ಹಾಕಲು ಅನುವು ಮಾಡಿ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

“ಬಿಬಿಎಂಪಿಗೆ ಮರ ಸಂರಕ್ಷಣೆ ಬಗ್ಗೆ ಕಾಳಜಿಯಿಲ್ಲ

ಹವಾಮಾನ ವೈಪರೀತ್ಯವನ್ನು ತಡೆಯುವ ನಿಟ್ಟಿನಲ್ಲಿ ಮರಗಿಡಗಳು ಪ್ರಮುಖ ಪಾತ್ರ ವಹಿಸುತ್ತವೆ. ಭವಿಷ್ಯತ್ತಿನ ಹವಾಮಾನ ಬದಲಾವಣೆ ಕೇಂದ್ರೀ ಕರಿಸಿ ಪ್ಯಾರೀಸ್‌ ಒಪ್ಪಂದ ಜಾರಿಗೆ ತರಲಾಗಿದೆ. ಪ್ಯಾರೀಸ್‌ ಒಪ್ಪಂದಕ್ಕೆ ಸಹಿ ಹಾಕಿ ಜಾಗತಿಕ ತಾಪಮಾನ ತಡೆಗಟ್ಟಲು ಕೈ ಜೋಡಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ, ಸರ್ಕಾರದ ಆಡಳಿತ ಯಂತ್ರದ ಭಾಗವಾಗಿರುವ ಬಿಬಿಎಂಪಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಕೇವಲ ಮೂರೇ ವರ್ಷದಲ್ಲಿ 9 ಸಾವಿರ ಮರಗಳನ್ನು ನೆಲಸಮ ಮಾಡಲು ಅವಕಾಶ ಕೊಟ್ಟಿರುವುದನ್ನು ನೋಡಿದರೆ ನಿಜವಾದ ಪರಿಸರ ಉಳಿಸುವ ಕಾಳಜಿ ಇಲ್ಲದಂತೆ ತೋರುತ್ತದೆ ಎಂದು ಪರಿಸರವಾದಿ ಭಾರ್ಗವಿ ರಾವ್‌ ದೂರುತ್ತಾರೆ. ಜಾಗತಿಕ ತಾಪ ಮಾನದ ಬದಲಾವಣೆಯಿಂದಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ವಿಪತ್ತುಗಳು ಸಂಭವಿಸುತ್ತಿವೆ. ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಂತಹ ಸಂಸ್ಥೆಗಳು ನಗರದ ಹಸಿರು ಹೊದಿಕೆಯನ್ನು ಸುಧಾರಿಸಲು ಮತ್ತು ಉಳಿಸಿಕೊಳ್ಳಲು ಯೋಜನೆಯನ್ನು ಸಿದ್ಧಪಡಿಸ ಬೇಕಾಗಿದೆ ಎನ್ನುತ್ತಾರೆ.

ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸಾವಿರಾರು ಮರಗಳನ್ನು ಕಡಿಯುತ್ತಿದ್ದು, ಮುಂದಿನ ದಿನಗಳಲ್ಲಿ ನಾವೆಲ್ಲರೂ ದೊಡ್ಡ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ ತಲುಪಿದೆ. ಬಿಬಿಎಂಪಿ ಮರ ಸಮಿತಿಯು ಕಡಿದ ಮರಗಳಿಗೆ ಪರ್ಯಾಯವಾಗಿ ಎಷ್ಟು ಗಿಡಗಳನು ನೆಟ್ಟು ಬೆಳೆಸಿದೆ ಎಂಬುದರ ಪರಿಶೀಲನೆ ನಡೆಸಲು ಮುಂದಾಗಬೇಕು. ●ವಿಜಯ್‌ ನಿಶಾಂತ್‌, ಸಸ್ಯ ವೈದ್ಯ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.