Bengaluru: ಬಸ್ಗಳಲ್ಲಿ ಮೊಬೈಲ್ ಕದಿಯುತ್ತಿದ್ದ ಆರೋಪಿ ಸೆರೆ
Team Udayavani, Oct 18, 2024, 12:49 PM IST
ಬೆಂಗಳೂರು: ಬಿಎಂಟಿಸಿ ಹಾಗೂ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಆರೋಪಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸಗುಡ್ಡದಹಳ್ಳಿ ನಿವಾಸಿ ಅಲೀವ್(34) ಬಂಧಿತ. ಆರೋಪಿಯಿಂದ 4 ಲಕ್ಷ ರೂ. ಮೌಲ್ಯದ 11 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಕುಂದಲಹಳ್ಳಿ ಗೇಟ್ ಬಳಿಯ ಪಿಜಿಯೊಂದರಲ್ಲಿ ವಾಸವಿರುವ ದೂರುದಾರರು, ಅ.8ರಂದು ಬಿಎಂಟಿಸಿ ಬಸ್ನಲ್ಲಿ ಕುಂದಲ ಹಳ್ಳಿಯಿಂದ ಗ್ರಾಪೈಟ್ ಇಂಡಿಯಾ ಕಡೆಗೆ ಪ್ರಯಾಣಿಸುತ್ತಿದ್ದು, ಈ ವೇಳೆ ಆರೋಪಿ ದೂರುದಾರರ ಗಮನ ಬೇರೆಡೆ ಸೆಳೆದು ಅವರ ಜೇಬಿನಲ್ಲಿದ್ದ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯ ಬಂಧನದಿಂದ ಎಚ್ ಎಎಲ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಇತರೆ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ಹೇಳಿದರು. ಎಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ
Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ
Kundapura: ಮರವಂತೆ ಮಾರಸ್ವಾಮಿ ಸ್ಟಾಪ್ನಲ್ಲಿ ನಿಲ್ಲದ ಸರಕಾರಿ ಬಸ್!
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.