Bengaluru: ಕಾರಿನಲ್ಲಿದ್ದ 13 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಆರೋಪಿ ಬಂಧನ
ಸ್ಕೇಲ್ನಿಂದ ಕಾರಿನ ಬಾಗಿಲು ತೆರೆದು ಕೃತ್ಯ ; ಆರೋಪಿ ರಿಯಲ್ ಎಸ್ಟೇಟ್ ಏಜೆಂಟ್
Team Udayavani, Oct 26, 2024, 10:34 AM IST
ಬೆಂಗಳೂರು: ಕಾರಿನ ಬಾಗಿಲನ್ನು ಸ್ಕೇಲ್ನಿಂದ ಮೀಟಿ ಹಣ, ಚಿನ್ನಾಭರಣಗಳಿದ್ದ ಬ್ಯಾಗ್ ಲಪಟಾಯಿಸಿದ್ದ ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ವಾಸಿಫ್ ಬಂಧಿತ ಆರೋಪಿ. ಈತನಿಂದ 144 ಗ್ರಾಂ ಚಿನ್ನಾಭರಣ, 2 ಲಕ್ಷ ರೂ. ನಗದು ಹಾಗೂ 1 ಕಾರು ಸೇರಿದಂತೆ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಹೆಣ್ಣೂರು ಪೊಲೀಸ್ ಠಾಣಾ ಸರಹದ್ದಿನ, ಕೊಕನೆಟ್ ಬೂಟ್ಲೇಔಟ್ನಲ್ಲಿ ವಾಸವಿರುವ ಮಹಿಳೆಯೊಬ್ಬರು ತನ್ನ ಪತಿಯ ಚಿಕಿತ್ಸೆಗಾಗಿ ತಂಗಿಯ ಮಗನ ಜೊತೆಯಲ್ಲಿ ಸೆ.19ರಂದು ಆಸ್ಪತ್ರೆಗೆ ಹೋಗಬೇಕಾಗಿತ್ತು. ಆಸ್ಪತ್ರೆಯ ಹತ್ತಿರದ ಒಂದು ಕಿರಿದಾದ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ತಂಗಿಯ ಮಗನ ಜೊತೆ ತುರ್ತಾಗಿ ಆಸ್ಪತ್ರೆಯ ಒಳಗೆ ಹೋಗಿದ್ದರು. ಹಣ, ಚಿನ್ನದ ಒಡವೆಗಳಿದ್ದ ಬ್ಯಾಗ್ ಅನ್ನು ಕಾರಿನಲ್ಲಿಯೇ ಬಿಟ್ಟು ಹೋಗಿದ್ದರು. ಆಸ್ಪತ್ರೆಯ ಒಳಗೆ ಹೋಗಿ ಬಂದು ನೋಡಿದಾಗ ಕಾರಿನಲ್ಲಿದ್ದ ಹಣ, ಒಡವೆ ಕಳವು ಆಗಿರುವುದು ಕಂಡು ಬಂದಿತ್ತು.
ಮಹಿಳೆಯು ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸ್ಕೇಲ್ನಿಂದ ಕಾರಿನ ಬಾಗಿಲು ತೆರೆದು ಕಳವು: ವಿಚಾರಣೆ ವೇಳೆ ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ತನ್ನ ಕಾರಿನಲ್ಲಿಟ್ಟಿರುವುದಾಗಿ ಆರೋಪಿ ತಿಳಿಸಿದ್ದ. ಈಜೀಪುರ ಮುಖ್ಯರಸ್ತೆಯಲ್ಲಿ ಆರೋಪಿಗೆ ಸಂಬಂಧಿಸಿದ ಕಾರಿನಿಂದ ಪೊಲೀಸರು 144 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಹಣ ಹಾಗೂ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿಯು ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಸ್ಕೇಲ್ ಬಳಸಿ ಕಾರಿನ ಲಾಕ್ ಓಪನ್ ಮಾಡಿ ಕಾರಿನ ಬಾಗಿಲು ತೆರೆದು ಅದರಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ತುಪ್ಪದ 5 ಸ್ಯಾಂಪಲ್ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್
Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್ ಬಾಕ್ಸ್ ಅಳವಡಿಕೆ
Bengaluru: ಗ್ರ್ಯಾಚುಟಿ ಮೊತ್ತಕ್ಕೆ ವಿಮೆ ಕಡ್ಡಾಯ ಆದೇಶ ರದ್ದತಿಗೆ ಮನವಿ
Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
Bengaluru: ಎಚ್ಎಂಟಿ ವಶದಲ್ಲಿದ್ದ 5 ಎಕರೆಯನ್ನು ಮರು ವಶಕ್ಕೆ ಪಡೆದ ಅರಣ್ಯ ಇಲಾಖೆ
MUST WATCH
ಹೊಸ ಸೇರ್ಪಡೆ
Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ
ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!
Bengaluru: ತುಪ್ಪದ 5 ಸ್ಯಾಂಪಲ್ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್
Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್ ಬಾಕ್ಸ್ ಅಳವಡಿಕೆ
Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.