Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ
ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಇಂದಿನಿಂದ ನ.29ರವರೆಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿ ಜೋಡಣೆ
Team Udayavani, Oct 25, 2024, 2:33 PM IST
ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿರ್ವ ಹಿಸಲು, 14 ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ಅ.25ರಿಂದ ನ.24ರ ವರೆಗೆ ಕೆಎಸ್ಆರ್ ಬೆಂಗಳೂರು- ಸಾಂಗ್ಲಿ ರಾಣಿ ಚನ್ನಮ್ಮ ಡೈಲಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ, ಕೆಎಸ್ಆರ್ ಬೆಂಗಳೂರು-ಬೆಳಗಾವಿ ಡೈಲಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾ ನಮಿ ಬೋಗಿ, ಯಶವಂತಪುರ-ಹಜರತ್ ನಿಜಾ ಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚು ವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಜೋಡಿಸಲಾಗಿದೆ.
ಅ.26 ರಿಂದ ನ.25ರ ವರೆಗೆ ಸಾಂಗ್ಲಿ-ಕೆಎಸ್ ಆರ್ ಬೆಂಗಳೂರು ರಾಣಿ ಚೆನ್ನಮ್ಮ ಡೈಲಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ, ಬೆಳಗಾವಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ. ಅ.27ರಿಂದ ನ.28ರ ವರೆಗೆ ಹಜರತ್ ನಿಜಾಮುದ್ದೀನ್-ಯಶವಂತಪುರ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಜೋಡಿಸಲಾಗಿದೆ.
ಅ.24 ರಿಂದ ನ.26ರ ವರೆಗೆ ಯಶವಂತಪುರ- ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾ ನಮಿ ಬೋಗಿ, ಅ.30ರಿಂದ ನ.29ರ ವರೆಗೆ ಹಜರತ್ ನಿಜಾಮುದ್ದೀನ್-ಯಶವಂತಪುರ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಎಕಾನಮಿ ಬೋಗಿ ಅ.25 ರಿಂದ ನ. 22.ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಬೋಗಿ, ಅ.27 ರಿಂದ ನ.24ರ ವರೆಗೆ ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಎಸಿ 3-ಟೈರ್ ಬೋಗಿ, ಅ.26 ರಿಂದ ನ.23 ರವರೆಗೆ ಯಶವಂತಪುರ-ಚಂಡೀಗಢ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ, ಅ. 29 ರಿಂದ ನ.26ರ ವರೆಗೆ ಚಂಡೀ ಗಢ-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ, ನ.1ರಿಂದ ನ. 29ರವರೆಗೆ ಪಂಢರಪುರ-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರಸ್ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್
BMTC ಬಸ್ ಕಂಡಕ್ಟರ್ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್ ದಾಖಲು
Bengaluru: ನಗರದಲ್ಲಿ ಶಂಕಿತ ನಕ್ಸಲ್ ಬಂಧನ ಪ್ರಕರಣ: ಎನ್ಐಎಗೆ ವರ್ಗಾವಣೆ
Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ
Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್ ಠಾಣೆ
One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.