![1-simha](https://www.udayavani.com/wp-content/uploads/2025/02/1-simha-415x277.jpg)
![1-simha](https://www.udayavani.com/wp-content/uploads/2025/02/1-simha-415x277.jpg)
Team Udayavani, Sep 14, 2024, 11:53 AM IST
ಬೆಂಗಳೂರು: ಸಾರ್ವಜನಿಕ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾರೋಹಳ್ಳಿ ನಿವಾಸಿ ಚೇತನ್ ಅಲಿಯಾಸ್ ಚಿಟ್ಟೆ (23) ಮತ್ತು ಸುಂಕದಕಟ್ಟೆ ನಿವಾಸಿ ನವೀನ್ ಕುಮಾರ್ ಅಲಿಯಾಸ್ ಅಪ್ಪು (20) ಬಂಧಿತರು. ಆರೋಪಿಗಳಿಂದ 1.70 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 12 ಮೊಬೈಲ್ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ರಾಜಾಜಿನಗರ ಪಿ.ಜಿ. ನಿವಾಸಿ ವಿಷ್ಣುವರ್ಧನ್ ಎಂಬುವರು ಸೆ.4ರಂದು ಸಂಜೆ ಕೆಲಸ ಮುಗಿಸಿಕೊಂಡು ಸುಂಕದಕಟ್ಟೆ ಸಮೀಪದ ಕಂಪನಿ ಎದುರು ಮೊಬೈಲ್ನಲ್ಲಿ ಮಾತನಾಡಿಕೊಂಡು ಬರುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಏಕಾಏಕಿ ವಿಷ್ಣುವರ್ಧನ್ ಅವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.