Bengaluru: ಎಸ್ಪಿ, ಐಜಿಪಿ ಕಚೇರಿಯನ್ನೇ ಮಾರಲು ಯತ್ನ!

ಕಚೇರಿಗೆ ಪ್ರವೇಶಿಸಿ ವಿಡಿಯೋ ಮಾಡುತ್ತಿದ್ದ ಆರೋಪಿಗಳು

Team Udayavani, Jun 7, 2024, 11:52 AM IST

5-bng-sp-office

ಬೆಂಗಳೂರು: ಅಪರಿಚಿತ ವ್ಯಕ್ತಿ ತಮ್ಮ ಜಾಗವನ್ನು ಮಾರಾಟ ಮಾಡಿದ್ದಾನೆ ಎಂದು ದೂರು ನೀಡಲು ಪೊಲೀಸ್‌ ಠಾಣೆಗೆ ಬರುವುದು ಸಾಮಾನ್ಯ. ಆದರೆ, ಕೆಲ ಕಿಡಿಗೇಡಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ.

ಅಚ್ಚರಿಯಾದರೂ ನಿಜ. ಕೆಲ ದಿನಗಳ ಹಿಂದೆ ಎಸ್ಪಿ ಕಚೇರಿ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಕ್ರಮವಾಗಿ ವಿಡಿಯೋ ಸೆರೆ ಹಿಡಿಯುವಾಗ ಪ್ರಶ್ನೆ ಮಾಡಿದ ಪೊಲೀಸ್‌ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಜಿಲ್ಲೆ ನಿಸ್ತಂತು ಜಿಲ್ಲಾ ನಿಯಂತ್ರಣ ಕೊಠಡಿ ಇನ್‌ಸ್ಪೆಕ್ಟರ್‌ ಹಾಗೂ ಎಸ್ಟೇಟ್‌ ಅಧಿಕಾರಿ ಸಂತೋಷ್‌ ಗೌಡ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರದ ಎಂ.ಡಿ.ಹನೀಫ್, ವಿಜಯನಗರದ ರಾಜಶೇಖರ್‌, ಉಲ್ಲಾಳದ ಮೊಹಮ್ಮದ್‌ ನದೀಮ್, ಸಂಜಯನಗರದ ಮೋಹನ್‌ ಶೆಟ್ಟಿ, ಗಣಪತಿ ಹಾಗೂ ಜಹೀರ್‌ ಅಹಮದ್‌ ಎಂಬುವರ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದಾರೆ. ‌ಈ ಸಂಬಂಧ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ದೂರಿನಲ್ಲಿ ಏನಿದೆ?: ಜೂ.3ರಂದು ಮಧ್ಯಾಹ್ನ 1 ಗಂಟೆಗೆ ಕೆಲ ಅಪರಿಚಿತರು ವಸಂತನಗರದ ಮಿಲ್ಲರ್ಸ್‌ ರಸ್ತೆಯ ಕೇಂದ್ರ ವಲಯ ಐಜಿಪಿ ಕಚೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಕಚೇರಿ ಆವರಣವನ್ನು ಅತಿಕ್ರಮ ಪ್ರವೇಶಿಸಿದ್ದಾರೆ. ತಮ್ಮ ಮೊಬೈಲ್‌ನಿಂದ ಕಚೇರಿಯ ಕಟ್ಟಡ ಹಾಗೂ ಆವರಣವನ್ನು ಚಿತ್ರೀಕರಿಸಿ, ಫೋಟೋ ಸೆರೆ ಹಿಡಿಯಲು ಮುಂದಾಗಿದ್ದಾರೆ.

ಅದನ್ನು ಗಮನಿಸಿದ ಎಸ್ಟೇಟ್‌ ಆಫೀಸರ್‌ ಸಂತೋಷ್‌ ಗೌಡ, ಏಕೆ ಕಚೇರಿಯ ಕಟ್ಟಡ ಚಿತ್ರೀಕರಿಸುತ್ತಿರುವಿರಿ’ ಎಂದು ಪ್ರಶ್ನಿಸಿದ್ದಾರೆ. ಆಗ ಅಪರಿಚಿತರು, “ನಮ್ಮನ್ನು ಕೇಳಲು ನೀನು ಯಾರು’ ಎಂದು ಪ್ರಶ್ನಿಸಿದ್ದಾರೆ. ಆಗ ಸಂತೋಷ್‌ ಗೌಡ, “ನಾನು ಈ ಕಚೇರಿ ಕಟ್ಟಡ ಮತ್ತು ಆವರಣಕ್ಕೆ ಎಸ್ಟೇಟ್‌ ಅಧಿಕಾರಿಯಾಗಿರುವುದರಿಂದ ಪ್ರಶ್ನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಿಂದೇನು ಎಂದು ಮರು ಪ್ರಶ್ನೆ ಹಾಕಿದ ಅಪರಿಚಿತರು, ಈ ಸ್ವತ್ತಿನ ದಾಖಲೆಗಳು ನಮ್ಮ ಬಳಿ ಇವೆ. ನಾವು ಚಿತ್ರೀಕರಣ ಮಾಡುತ್ತೇವೆ ಎಂದಿದ್ದಾರೆ.

ಸಂತೋಷ್‌ ಗೌಡ ಎಚ್ಚರಿಕೆ ನೀಡಿದರೂ, ಅಪರಿಚಿತರು ಚಿತ್ರೀಕರಣಕ್ಕೆ ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಅಪರಿಚಿತರನ್ನು ಸಂತೋಷ್‌ ಗೌಡ ಕಚೇರಿಯೊಳಗೆ ಕರೆದೊಯ್ದು ಚಿತ್ರೀಕರಣದ ಬಗ್ಗೆ ಪ್ರಶ್ನೆ ಮಾಡಿದಾಗ, ಈ ಸ್ವತ್ತಿನ ಮಾಲೀಕರಾದ ಗಣಪತಿ ಮತ್ತು ಜಹೀರ್‌ ಎಂಬವವರು ನಮಗೆ ಜಿಪಿಎ ಮಾಡಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನ: ಈ ಹಿನ್ನೆಲೆಯಲ್ಲಿ ಆರೋಪಿಗಳು ಈ ಸ್ವತ್ತನ್ನು ಅಕ್ರಮವಾಗಿ ಮಾರಾಟ ಮಾಡುವ ದುರುದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಚೇರಿ ಆವರಣ ಅತಿಕ್ರಮ ಪ್ರವೇಶ ಮಾಡಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಅಲ್ಲದೆ, ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಂತೋಷ್‌ ಗೌಡ ಆರೋಪಿಸಿ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌.ಪಿ ಕಚೇರಿಗೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ●ಎಚ್‌.ಟಿ ಶೇಖರ್‌, ಕೇಂದ್ರ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Bengaluru: ಡೆಂಘೀ ತಡೆಗೆ ಮನೆ ಮನೆ ಸಮೀಕ್ಷೆ- ಮುಖ್ಯ ಆಯುಕ್ತ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Ramachandrapura-matha

Sri Raghaweshwara Swamiji: 29ಕ್ಕೆ ಭಾವರಾಮಾಯಣ ರಾಮಾವತರಣ ಕೃತಿ ಬಿಡುಗಡೆ

Pavithra

Renukaswamy case: ಪುತ್ರಿ ನೋಡಿ ಪವಿತ್ರಾ ಕಣ್ಣೀರು; ಕ್ಷಮೆಯಾಚನೆ

Renukaswamy

Renukaswamy, 17 ಆರೋಪಿಗಳ ಹೆಸರಲ್ಲಿ ಡೂಪ್ಲಿಕೇಟ್‌ ಸಿಮ್‌ ಖರೀದಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.