Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

ತ್ಯಾಗರಾಜನಗರದ ರಿಗ್ರೆಟ್‌ ಅಯ್ಯರ್‌ ಮನೆಯಲಿ ರಾಮನ ಕುರಿತ ಆಕರ್ಷಕ ಬೊಂಬೆಗಳ ಪ್ರದರ್ಶನ ; 11 ತಲೆಮಾರಿನಿಂದ ಬೊಂಬೆಗಳ ಜೋಡಣೆ

Team Udayavani, Oct 5, 2024, 3:45 PM IST

16-bng

ಬೆಂಗಳೂರು: ನಾಡಿನ ಪ್ರಖ್ಯಾತ ಹಬ್ಬಗಳಲ್ಲಿ ಒಂದಾದ ದಸರಾ ಬಂತೆಂದರೆ, ಸಾಂಸ್ಕೃತಿಕ ನಗರಿ ಮೈಸೂರಿನಂತೆ ಉದ್ಯಾನ ನಗರಿ ಬೆಂಗಳೂರಿನ ಮನೆ-ಮನೆಗಳಲ್ಲಿ ಹಲವು ಅವತಾರ, ರೂಪಗಳುಳ್ಳ ವಿಭಿನ್ನ ಮಾದರಿ ವಿಷಯಗಳನ್ನು ಒಳಗೊಂಡ ಬೊಂಬೆಗಳನ್ನು ಪ್ರದರ್ಶನ ಮಾಡಲಾಗಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಆರಂಭವಾಗುತ್ತಿದ್ದಂತೆ ಇತ್ತ ರಾಜ್ಯದೆಲ್ಲೆಡೆ ದಸರಾ ಕಳೆಗಟ್ಟುತ್ತದೆ. ಅದೇ ರೀತಿ, ಬೆಂಗಳೂರಿನ ತ್ಯಾಗರಾಜ ನಗರ 3ನೇ ಬ್ಲಾಕ್‌ ನಿವಾಸಿ ರಿಗ್ರೆಟ್‌ ಅಯ್ಯರ್‌ ಅವರ ಮನೆಯಲ್ಲಿ ಸುಮಾರು 11 ತಲೆಮಾರಿನಿಂದ ಪಟ್ಟದ ಗೊಂಬೆಗಳ ಪಾರಂಪರಿಕವನ್ನು ಕಾಪಾಡಿಕೊಂಡು ಬಂದಿದ್ದು, ಅವರ ಪತ್ನಿ ವಿಜಯಲಕ್ಷ್ಮಿ ರಿಗ್ರೆಟ್‌ ಅಯ್ಯರ್‌ ಅವರು ಕಳೆದ 37 ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ಒಟ್ಟಾರೆ 364ನೇ ಪರಂಪರೆ ಉತ್ಸವ ಇದಾಗಿದೆ. ಈ ಬಾರಿ ಅವರ ಮನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಸುದ್ದಿಯಾಗಿರುವ “ಅಯೋಧ್ಯೆ ಶ್ರೀರಾಮ ಮಂದಿರ; ಶ್ರೀರಾಮಲಲ್ಲಾ ವಿಗ್ರಹ’ ಮಾದರಿಯ ಗೊಂಬೆಗಳು ಹಾಗೂ ಅಲ್ಲಿ ಬಳಸಿದ ವಸ್ತುಗಳ ಸಂಗ್ರಹ ಆಕರ್ಷಕವಾಗಿವೆ.

ಭಾರತೀಯರ 500 ವರ್ಷಗಳ ಕನಸು ನನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರದ ಪ್ರತಿಕೃತಿಯನ್ನು ಇಡಲಾಗಿದ್ದು, ಇದನ್ನು ಮಣ್ಣಿನಲ್ಲಿ ತಯಾರಿಸಲಾಗಿದೆ. ಜತೆಗೆ 9 ಇಂಚಿನ ಶ್ರೀರಾಮನ ಕಂಚಿನ ಉತ್ಸವ ಮೂರ್ತಿ, ರಾಮಮಂದಿರದ ನಿರ್ಮಾಣದ ಕಾಲದಲ್ಲಿ 30 ಅಡಿ ಆಳದಲ್ಲಿ ಬಳಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಗುವಲಕಾನಹಳ್ಳಿಯಿಂದ ಕಳುಹಿಸಿಕೊಟ್ಟ 17 ಸಾವಿರ ಕಲ್ಲಿನ ಮಾದರಿಯನ್ನು ಇಲ್ಲಿ ಕಾಣಬಹುದು. ಇಷ್ಟೇ ಅಲ್ಲದೇ, ರಾಮ ಮಂದಿರ ಪ್ರಾರಂಭ ಕಾರ್ಯಕ್ರಮದ ಆಮಂತ್ರಣ, ಅಲ್ಲಿಯ ಹರಿಯುವ ನದಿಯ ತೀರ್ಥ, ಟ್ರೈಬಲ್‌ ರಾಮ, ರಾಮ ಮಂದಿರ ನಿರ್ಮಾಣದ ವೇಳೆ ಸುಮಾರು 30 ಅಡಿ ಆಳದಲ್ಲಿ ದೊರೆತ ಮಣ್ಣು, ಅಕ್ಷತೆಯನ್ನು ಒಳಗೊಂಡಂತೆ ರಾಮಮಂದಿರ, ಮುಂಭಾಗದ ಮೆಟ್ಟಿಲು ಪ್ರತಿಕೃತಿಯನ್ನು ಪ್ರದರ್ಶಿಸಲಾಗಿದೆ ಎಂದು ರಿಗ್ರೇಟ್‌ ಅಯ್ಯರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಇಷ್ಟೇ ಅಲ್ಲದೇ, ಇವರ ಮನೆಯಲ್ಲಿ 40 ಜೊತೆ (ಒಟ್ಟು 80) ಪಟ್ಟದ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇದರಲ್ಲಿ ದಸರಾ ಹಬ್ಬದ ವಿಶೇಷವಾಗಿರುವ ಅಂಬಾರಿ, ಆಟಿಕೆಗಳು, ಮರದ ಆಟಿಕೆಗಳು, ಬಿದಿರು ಹಾಗೂ ಮಣ್ಣಿನಿಂದ ಮಾಡಿರುವ ಗೊಂಬೆಗಳು, ಹಿತ್ತಾಳೆ ಗೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಲಾಗಿದೆ. ದಸರಾ ಹಬ್ಬದ ಪ್ರಯುಕ್ತ ನವದಿನಗಳ ಕಾಲ ಲಕ್ಷ್ಮಿ, ಸರಸ್ವತಿ, ಪಾರ್ತಿಗೆ ಕಳಸ ಪೂಜೆ, ಸಪ್ತ ಮಾತೃಕೆಯರು, ಅಷ್ಟ ಲಕ್ಷ್ಮಿಯರು, ನವ ದುರ್ಗೆಯರಿಗೆ ಪಾಡ್ಯದ ದಿನದಿಂದ ದಶಮಿವರೆಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಎಂದು ವಿಜಯಲಕ್ಷ್ಮಿ ರಿಗ್ರೆಟ್‌ ಅಯ್ಯರ್‌ ತಿಳಿಸುತ್ತಾರೆ.

ದಸರಾ ಹಬ್ಬ ಸಮೀಪಿಸುತ್ತಿದ್ದಂತೆ ಸುಮಾರು 8 ದಿನಗಳ ಮೊದಲೇ ಈ ವರ್ಷದ ವಿಶೇಷದ ಬಗ್ಗೆ ಆಲೋಚಿಸಿ, ಅದಕ್ಕೆ ಬೇಕಾದ ಪೂರ್ವ ತಯಾರಿಗಳನ್ನು ಸಿದ್ಧತೆ ಮಾಡಿಕೊಳ್ಳುತ್ತೇವೆ. ಈ ಬಾರಿ ಪಟ್ಟದ ಗೊಂಬೆಗಳಲ್ಲಿಯೇ ಮರದಿಂದ ತಯಾರಿಸಿದ ರಾಮಲಲ್ಲಾ ವಿಶೇಷವಾಗಿದೆ. ಪಾಡ್ಯದಿಂದ (ಅ.3) ದಶಮಿ (ಅ.12) ವರೆಗೆ ಪ್ರದರ್ಶನಕ್ಕೆ ಇಡಲಾಗಿದ್ದು, ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ●ವಿಜಯಲಕ್ಷ್ಮಿ ರಿಗ್ರೆಟ್‌ ಅಯ್ಯರ್‌, ತ್ಯಾಗರಾಜ ನಗರ ನಿವಾಸಿ

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

13-bng-rave-party

Bengaluru: ರೇವ್‌ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.