Bengaluru: ಗಾಜು ಲೇಪಿತ ಗಾಳಿಪಟದ ದಾರ ಸಿಲುಕಿ ಬೈಕ್ ಸವಾರನಿಗೆ ಗಾಯ
ಪೊಲೀಸರಿಗೆ ಗಾಯದ ಫೋಟೋ ಕಳುಹಿಸಿದ ಸವಾರ
Team Udayavani, Sep 6, 2024, 4:09 PM IST
ಬೆಂಗಳೂರು: ಗಾಜು ಮಿಶ್ರಿತ ಮಾಂಜ ದಾರ ಬಳಕೆಗೆ ನಿಷೇಧವಿದ್ದರೂ ಗಾಳಿಪಟ ಹಾರಿಸಲು ಅದನ್ನು ಬಳಸಲಾಗಿದ್ದು, ಅದರಿಂದ ಬೈಕ್ನಲ್ಲಿ ಹೋಗುತ್ತಿದ್ದ ವಾಹನ ಸವಾರನ ಕುತ್ತುಗೆಗೆ ಮತ್ತು ಕೈಗೆ ಗಾಯವಾಗಿ ರಕ್ತಸ್ರಾವವಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಈ ಸಂಬಂಧ ಗಾಯಗೊಂಡಿರುವ ಬೈಕ್ ಸವಾರ ಎಂ.ಇ.ನಾಸಿಮಿ ಎಂಬುವರು ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಸಮೇತ ಪ್ರಕಟಿಸಿ ಅದನ್ನು ಬೆಂಗಳೂರು ನಗರ ಪೊಲೀಸರ ಎಕ್ಸ್ ಖಾತೆಗೆ ಟ್ಯಾಗ್ ಮಾಡಿ ಕ್ರಮಕ್ಕೆ ಕೋರಿದ್ದಾರೆ.
ನಾನು ಥಣಿಸಂದ್ರದ ಸಿಎಂಎ ಕನ್ವೆಂಷನ್ ಹಾಲ್ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಮಕ್ಕಳ ಹಾರಿಸಿದ ಗಾಜು ಲೇಪಿತ ಗಾಳಿಪಟದ ದಾರದಿಂದ ನನ್ನ ಕುತ್ತಿಗೆಗೆ ಗಾಯವಾಗಿದೆ. ನಾನು ವಾಹನ ಚಲಾಯಿಸುವಾಗ ಎಲ್ಲ ಸುರಕ್ಷಿತ ಕ್ರಮ ಗಳನ್ನು ಅನುಸರಿಸಿದ್ದರೂ ದಾರವು ನನ್ನ ಕುತ್ತಿಗೆ ಮತ್ತು ಕೈಗೆ ಗಂಭೀರವಾದ ಗಾಯ ಗೊಳಿಸಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಇಂತಹ ಅಪಾಯಕಾರಿಯಾದ ದಾರವನ್ನು ಜನನಿಬಿಡ ಪ್ರದೇಶದಲ್ಲಿ ಬಳಸುವುದನ್ನು ನಿಷೇಧಿಸಬೇಕು ಎಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಜತೆಗೆ ಪಾಲಕರು ಇಂತಹ ಅಪಾಯಕಾರಿಯಾದ ದಾರವನ್ನು ಬಳಕೆ ಮಾಡದಂತೆ ಮಕ್ಕಳಿಗೆ ಬುದ್ದಿ ಹೇಳಬೇಕು, ಜತೆಗೆ ಎಚ್ಚರವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ನಗರ ಪೊಲೀಸರು ಸಂಬಂಧಪಟ್ಟ ಅಧಿಕಾರಿಯ ಗಮನಕ್ಕೆ ತಂದು ಕ್ರಮ ಜರುಗಿಸುವಂತೆ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.