Bengaluru: ಬೈಕಿಂದ ಬಿದ್ರೂ ನೆರವು ನೀಡದ ಸ್ನೇಹಿತನಿಗೆ ಇರಿತ

ದ್ವಿಚಕ್ರ ವಾಹನದಲ್ಲಿ ಜತೆಗೆ ಹೋಗುವಾಗ ಆಯತಪ್ಪಿ ಬಿದ್ದಿದ್ದ ಗೆಳೆಯ; ನಂದಿನಿ ಲೇಔಟ್‌ನಲ್ಲಿ ಘಟನೆ

Team Udayavani, Aug 3, 2024, 1:25 PM IST

10-crime

ಬೆಂಗಳೂರು: ಕಳವು ಮಾಡಿದ ಬೈಕ್‌ನಲ್ಲಿ ಹೋಗುವಾಗ ಆಯತಪ್ಪಿ ಬಿದ್ದರೂ ನೆರವಿಗೆ ಬಾರಲಿಲ್ಲ. ಬೈಕ್‌ ಚಾಲನೆಗೂ ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನಿಗೆ ಚಾಕುವಿನಿಂದ ಇರಿದಿದ್ದ ಆರೋಪಿಯನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾರಾಯಿಪಾಳ್ಯ ನಿವಾಸಿ ಸಾದಿಕ್‌ ಅಲಿಯಾಸ್‌ ಡ್ಯಾನಿ(24) ಬಂಧಿತ ಆರೋಪಿ. ಶಿವಾಜಿನಗರದ ಸೈಯದ್‌ ನಾಜೀಂ(23) ಎಂಬಾತ ಚಾಕು ಇರಿತಕ್ಕೊಳಗಾಗಿದ್ದು, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜು.21ರಂದು ಈ ಘಟನೆ ನಡೆದಿದೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಆರೋಪಿ ಸಾದಿಕ್‌ನನ್ನು ಬಂಧಿಸಲಾಗಿದೆ.

ಏನಿದು ಘಟನೆ?: ಆರೋಪಿ ಸಾದಿಕ್‌ ಮತ್ತು ನಾಜೀಂ ಕೆಲ ವರ್ಷಗಳಿಂದ ಸ್ನೇಹಿತರಾಗಿದ್ದು, ಅಪರಾಧ ಹಿನ್ನೆಲೆವುಳ್ಳವರಾಗಿದ್ದಾರೆ. ಜುಲೈ 21ರಂದು ಗೋರಿಪಾಳ್ಯದಲ್ಲಿ ಇಬ್ಬರು ಸೇರಿ ದ್ವಿಚಕ್ರ ವಾಹನ ಕಳವು ಮಾಡಿದ್ದಾರೆ. ಬಳಿಕ ಕದ್ದ ಬೈಕ್‌ನಲ್ಲೇ ನಂದಿನಿ ಲೇಔಟ್‌ ಕಡೆಗೆ ಹೊರಟ್ಟಿದ್ದು. ಮಾರ್ಗ ಮಧ್ಯೆ ಮತ್ತೂಂದು ಬೈಕ್‌ ಕದ್ದು ತಲಾ ಒಂದು ಬೈಕ್‌ನಲ್ಲಿ ದಾಸರಹಳ್ಳಿ ಕಡೆಗೆ ಬಂದಿದ್ದಾರೆ. ಅದಕ್ಕೂ ಮೊದಲು ನಾಜೀಂ ಚಲಾಯಿಸುತ್ತಿದ್ದ ಬೈಕ್‌ ಚಾಲನೆಗೆ ಸಾದಿಕ್‌ ಕೇಳಿದ್ದ. ಆದರೆ, ನಾಜೀಂ ಕೊಟ್ಟಿರಲಿಲ್ಲ.

ಈ ಮಧ್ಯೆ ಮಾರ್ಗ ಮಧ್ಯೆ ಆರೋಪಿ ಸಾದಿಕ್‌ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದಿದ್ದಾನೆ. ಅಷ್ಟರಲ್ಲಿ ನಾಜೀಂ ಮತ್ತೂಂದು ದ್ವಿಚಕ್ರ ವಾಹ ನದಲ್ಲಿ ಮುಂದಕ್ಕೆ ಹೋಗಿದ್ದ. ಎಷ್ಟು ಹೊತ್ತಾದರೂ ಸಾದಿಕ್‌ ಬಾರದ ಹಿನ್ನೆಲೆಯಲ್ಲಿ ಕೆಲ ಹೊತ್ತಿನ ಬಳಿಕ ನಾಜೀಂ ಹಿಂದಕ್ಕೆ ಬಂದಿದ್ದಾನೆ. ಈ ವೇಳೆ ಕೋಪಗೊಂಡಿದ್ದ ಸಾದಿಕ್‌, ನಾನು ಬಿದ್ದರೂ ನೆರವಿಗೆ ಬಾರಲಿಲ್ಲ ಎಂದು ಗಲಾಟೆ ಮಾಡಿ ನಾಜೀಂಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಈ ನಡುವೆ ಸಾದಿಕ್‌ ಕದ್ದ ದ್ವಿಚಕ್ರ ವಾಹನದಲ್ಲಿ ಮಾಗಡಿಗೆ ಹೋಗುತ್ತಿದ್ದ. ಆಗ ಸ್ಥಳೀಯರ ಜತೆಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾನೆ. ಈ ವೇಳೆ ಮಾಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಸಾದಿಕ್‌ ಬಳಿ ಚಾಕು ಇರುವುದನ್ನು ಕಂಡು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಇತ್ತ ಶಿವಾಜಿನಗರ ಠಾಣೆ ಪೊಲೀಸರು, ಸಾದಿಕ್‌ ಬಂಧನದ ಸುದ್ದಿ ತಿಳಿದು, ಬಾಡಿ ವಾರೆಂಟ್‌ ಮೇಲೆ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಲ್ಲೆ ಬಳಿಕ ಜೊತೆಗೇ ಆಸ್ಪತ್ರೆಗೆ ತೆರಳಿದ್ದ ಗೆಳೆಯರು

ಚಾಕು ಇರಿತದಿಂದ ನಾಜೀಂಗೆ ರಕ್ತಸ್ರಾವವಾದ್ದರಿಂದ ಸಾರಾಯಿಪಾಳ್ಯದ ಆಸ್ಪತ್ರೆಗೆ ಹೋಗಿದ್ದಾರೆ. ಈ ವೇಳೆ ಇಬ್ಬರು ಜತೆಯಲ್ಲೇ ತೆರಳಿ ದ್ವಿಚಕ್ರವಾಹನದಿಂದ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆ ನೀಡುವಂತೆ ಕೇಳಿದ್ದಾರೆ. ಬಳಿಕ ಅಲ್ಲಿ ಬ್ಯಾಂಡೇಜ್‌ ಮಾಡಿಸಿಕೊಂಡು ನಾಜೀಂ ಮನೆ ಕಡೆಗೆ ತೆರಳಿದ್ದಾನೆ. ಸಾದಿಕ್‌ ಸಹ ಹೊರಟು ಹೋಗಿದ್ದಾನೆ. ಮರು ದಿನ ನಾಜೀಂ ಗಾಯಗೊಂಡಿರುವುದನ್ನು ಕಂಡು ಆತನ ಸಹೋದರ ಪ್ರಶ್ನಿಸಿ, ಬೌರಿಂಗ್‌ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ವಿಷಯ ತಿಳಿದು ಶಿವಾಜಿನಗರ ಠಾಣೆ ಪೊಲೀಸರು ಆಸ್ಪತ್ರೆಗೆ ತೆರಳಿ ನಾಜೀಂನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.