Bengaluru: ಲಂಚಕ್ಕೆ ಬೇಡಿಕೆ: ವಿಶೇಷ ತಹಶೀಲ್ದಾರ್‌ಗೆ 3 ವರ್ಷ ಜೈಲು

ಜಮೀನು ವ್ಯಾಜ್ಯ ಇತ್ಯರ್ಥಕ್ಕೆ 20 ಲಕ್ಷ ರೂ. ಲಂಚ ಬೇಡಿಕೆ ಆರೋಪ ; ಲಂಚ ಸ್ವೀಕರಿಸುವಾಗ ಕಾರ್ಯಾಚರಣೆ

Team Udayavani, Sep 13, 2024, 3:07 PM IST

16-

ಬೆಂಗಳೂರು: ಜಮೀನಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಅರ್ಜಿದಾರರ ಪರ ಆದೇಶ ನೀಡಲು 20 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌ ಹಾಗೂ ಅವರ ಸಹಾಯಕನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ 23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿ ಬಿ.ಎಸ್‌.ವೆಂಕಟಾಚಲಪತಿ ಹಾಗೂ ಇವರ ಸಹಾಯಕ ಮಧುಸೂದನ್‌ ಶಿಕ್ಷೆಗೆ ಒಳಗಾದವರು.

ಏನಿದು ಪ್ರಕರಣ?: ಹುಳಿಮಾವು ನಿವಾಸಿ ಎಚ್‌ .ಪಿ.ಮಂಜುನಾಥ್‌ ಹಾಗೂ ಅವರ ಸಹೋದರರ ಮಕ್ಕಳಿಗೂ ಗೊಟ್ಟಿಗೆರೆ ಗ್ರಾಮದಲ್ಲಿ 1 ಎಕರೆ 37 ಗುಂಟೆ ಜಮೀನಿನ ವಿಚಾರದ ಸಂಬಂಧ ವಿಶೇಷ ತಹಶೀಲ್ದಾರ್‌ ಕಚೇರಿಯಲ್ಲಿ ಕೇಸು ನಡೆಯುತ್ತಿತ್ತು. ಮಂಜುನಾಥ್‌ ತಂದೆ ನಿಧನರಾದ ಬಳಿಕ 2016ರಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ್‌ಗೆ ಕೇಸನ್ನು ಬೇಗ ಮುಗಿಸಿ ಕೊಡುವಂತೆ ಮನವಿ ಪತ್ರ ಸಲ್ಲಿಸಿದ್ದರು.

ಬಿ.ಎಸ್‌.ವೆಂಕಟಾಚಲಪತಿ ಭೇಟಿ ಮಾಡಿ ಕೆಲಸದ ಬಗ್ಗೆ ವಿಚಾರಿಸಿದಾಗ ತನ್ನ ಸಹಾಯಕ ಮಧುಸೂದನ್‌ ಅವರನ್ನು ಕರೆಯಿಸಿ ಇವರನ್ನು ಭೇಟಿ ಮಾಡುವಂತೆ ಮಂಜುನಾಥ್‌ಗೆ ಸೂಚಿಸಿದ್ದರು. ಅದರಂತೆ ಮಧುಸೂದನ್‌ ಭೇಟಿ ಮಾಡಿದಾಗ ಮಂಜುನಾಥ್‌ ಪರ ಆದೇಶ ಮಾಡಲು 20 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬಿ.ಎಸ್‌.ವೆಂಕಟಾಚಲಪತಿಯನ್ನು ಮಂಜುನಾಥ್‌ ಪ್ರಶ್ನಿಸಿದಾಗ ಅವರು ಸಹ 15 ಲಕ್ಷಕ್ಕೆ ಬೇಡಿಕೆಯಿಟ್ಟು ಮುಂಗಡವಾಗಿ 5 ಲಕ್ಷ ರೂ. ತಂದು ಕೊಟ್ಟರೆ ನಿಮ್ಮ ಪರವಾಗಿ ಆದೇಶಮಾಡುತ್ತೇನೆ. ಉಳಿದ ಹಣವನ್ನು ನೀಡಿದ ಬಳಿಕ ಆರ್ಡರ್‌ ಕಾಪಿ ಕೊಡುವುದಾಗಿ ಲಂಚದ ಹಣಕ್ಕೆ ಒತ್ತಾಯಿಸಿದ್ದರು. ಮಂಜುನಾಥ್‌ ಈ ಹಿಂದೆಯಿದ್ದ ಎಸಿಬಿಗೆ ದೂರು ನೀಡಿದ್ದರು. 2017ರಲ್ಲಿ ಎಸಿಬಿ ದಾಳಿ ನಡೆಸಿದಾಗ ವೆಂಕಟಾಚಲಪತಿ ಪರ ಲಂಚ ಸ್ವೀಕರಿಸುತ್ತಿದ್ದ ಮಧುಸೂದನ್‌ ಸಿಕ್ಕಿ ಬಿದ್ದಿದ್ದರು.

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.