Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

ನಗರದಲ್ಲಿ 2320 ಅನಧಿಕೃತ ಪೇಯಿಂಗ್‌ ಗೆಸ್ಟ್‌ಗಳ ಗುರುತು ; ಮಾರ್ಗಸೂಚಿ ಪಾಲಿಸದ ಪಿಜಿಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ

Team Udayavani, Oct 11, 2024, 4:23 PM IST

15-pg

ಬೆಂಗಳೂರು: ಬಿಬಿಎಂಪಿ ಮಾರ್ಗಸೂಚಿ ಪಾಲಿಸದ ಸುಮಾರು 2,320 ಅನಧಿಕೃತ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯಲಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಪಿಜಿಗಳಿಗೆ ಭೇಟಿ ನೀಡಿ ಪಾಲಿಕೆ ಮಾರ್ಗ ಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. 2320 ಅನಧಿಕೃತ ಪಿಜಿಗಳಿದ್ದು, ಅವುಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

2193 ಅಧಿಕೃತ ಪಿಜಿಗಳು:ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2193 ಅಧಿಕೃತ ಪಿಜಿಗಳಿವೆ. ಈ ಪೈಕಿ 1578 ಪಿಜಿಗಳು ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದು, 615 ಪಿ.ಜಿ.ಗಳು ನಿಯಮ ಪಾಲಿಸುತ್ತಿಲ್ಲ. ಮಾರ್ಗಸೂಚಿ ಪಾಲಿಸದ 1011 ಅಧಿಕೃತ ಪಿಜಿಗಳಿಗೆ ನೋಟಿಸ್‌ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2320 ಅನಧಿಕೃತ ಪಿಜಿಗಳಿವೆ. ಇದರಲ್ಲಿ 1674 ಪಿ.ಜಿ.ಗಳು ಮಾರ್ಗಸೂಚಿ ಪಾಲಿಸುತ್ತಿದ್ದು, 646 ಪಿಜಿಗಳು ಪಾಲಿಸುತ್ತಿಲ್ಲ. ಇದು ವರೆಗೆ ನಿಯಮ ಮೀರಿದ 2320 ಅಧಿಕೃತ ಪಿಜಿಗಳಿಗೆ ನೋಟಿಸ್‌ ನೀಡಲಾಗಿದೆ.

ಪಾಲಿಕೆಯಿಂದ ಉದ್ದಿಮೆ ಪರವಾನಗಿ ಪಡೆಯದೆ ಅನಧಿಕೃತವಾಗಿ ನಡೆಸುತ್ತಿರುವ ಹಾಗೂ ಮಾರ್ಗಸೂಚಿ ಗಳನ್ನು ಪಾಲಿಸದ ಪಿಜಿ ಉದ್ದಿಮೆಗಳಿಗೆ 2 ರಿಂದ 3 ಬಾರಿ ನೋಟಿಸ್‌ ನೀಡಲಾಗಿದೆ. ಆದರೂ ನಿಯಮ ಪಾಲಿಸಿಲ್ಲ. ಈ ಸಂಬಂಧ ಪಿಜಿಗಳನ್ನು ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್‌ 305 ಮತ್ತು 308ರಡಿಯಲ್ಲಿ ತಕ್ಷಣದಿಂದ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಅದರಂತೆ 1 ಅಧಿಕೃತ ಪಿಜಿ ಹಾಗೂ 20 ಅನಧಿಕೃತ ಸೇರಿ 21 ಪಿಜಿಗಳನ್ನು ಮುಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪಿ.ಜಿ.ಗಳಿಗೆ ಬಿಬಿಎಂಪಿಯ ಮಾರ್ಗಸೂಚಿಗಳೇನು?

 ಪೇಯಿಂಗ್‌ ಗೆಸ್ಟ್‌ಗಳ ಪ್ರವೇಶ, ನಿರ್ಗಮನ ಮತ್ತು ಆವರಣಗಳ ಸುತ್ತಮುತ್ತಲೂ ನಡೆಯುವ ಘಟನೆಗಳನ್ನು ಚಿತ್ರೀಕರಿಸುವ ಸಿಸಿ ಕ್ಯಾಮೆರಾ ಅಳವಡಿಸಿ, ಫೋಟೇಜ್‌ ಗಳನ್ನು 30 ದಿನಗಳ ಬ್ಯಾಕಪ್‌ ಇರುವಂತೆ ಅಳವಡಿಸುವುದು.

 ವಾಸಕ್ಕೆ ಸಂಬಂಧಿತ ಕಟ್ಟಡದ ನಿಯಮಗಳ ಪ್ರಕಾರ, ಪ್ರತಿಯೊಬ್ಬ ನಿವಾಸಿಯು ತಲಾ 70 ಚದರ ಅಡಿಗಳಿಗಿಂತ ಕನಿಷ್ಠ ಜಾಗವನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳ ಬೇಕು. ಕಟ್ಟಡದಲ್ಲಿ ಒದಗಿಸಲಾದ /ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು.

 ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವತ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು.

 ಪೇಯಿಂಗ್‌ ಗೆಸ್ಟ್‌ ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು.

 ಪೇಯಿಂಗ್‌ ಗೆಸ್ಟ್‌ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಲೈಸೆ ನ್ಸ್‌ ಪಡೆಯಬೇಕು.

 ಉದ್ದಿಮೆದಾರರು/ ಮಾಲಿಕರು ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಪಕ್ಷ ಒಬ್ಬ ಸಿಬ್ಬಂದಿಯನ್ನಾ ದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಬೇಕು.

 ಪಿಜಿ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಗಿ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲಿಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರ ಪಡೆದಿರಬೇಕು.

 ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್‌ ಗೆಸ್ಟ್‌ ಕಟ್ಟಡಗಳಲ್ಲಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆ 1533 ಮತ್ತು ಪೊಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ 101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರಬೇಕು.

 ಪಿಜಿ ಮಾಲಿಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಿಸಲು ಕ್ರಮವಹಿಸಬೇಕು.

ಟಾಪ್ ನ್ಯೂಸ್

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bng

ಮಾರುಕಟ್ಟೆಯಲ್ಲಿ ದಸರಾ ಹಬ್ಬದ ರಂಗು; ಕಳೆದ ವಾರಕ್ಕೆ ಹೋಲಿಸಿದರೆ ತರಕಾರಿ, ಹೂ ಬೆಲೆ ಹೆಚ್ಚಳ

8-bng

Bengaluru: ಬೇಕರಿ ಮಾಲಿಕರ ಬೆದರಿಸಿ ಸುಲಿಗೆ ಮಾಡುತ್ತಿದ್ದ ಯುಟ್ಯೂಬರ್‌ ಬಂಧನ

6-dasara

Dasara ಹಬ್ಬಕ್ಕೆ ಊರಿಗೆ ಹೊರಟ ಲಕ್ಷಾಂತರ ಜನ: ಹಲವೆಡೆ ಭಾರೀ ಸಂಚಾರ ದಟ್ಟಣೆ

5-bng

Bengaluru: ಜಾಗತಿಕ ವಿವಿ ರ್‍ಯಾಂಕಿಂಗ್‌: ದೇಶದಲ್ಲಿ ಐಐಎಸ್‌ಸಿಗೆ ಅಗ್ರಪಟ್ಟ

4-bng

Bengaluru: ಆರ್‌ಬಿಐಗೇ ನಕಲಿ ನೋಟು ನೀಡಿ ವಂಚನೆ ಯತ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

20

Mangaluru ಜಂಕ್ಷನ್‌ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.