Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

3 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ವೈದ್ಯ ; "ನನ್ನ ಸಾವಿಗೆ ನಾನೇ ಕಾರಣ' ಎಂದು ಡೆಟ್‌ನೋಟ್ ಬರೆದು ಸಾವು ‌;ಮತ್ತೂಂದು ಘಟನೆಯಲ್ಲಿ ರೈಲಿಗೆ ತಲೆಕೊಟ್ಟು ಸ್ಟಾಫ್ ನರ್ಸ್‌ ಆತ್ಮಹತ್ಯೆ ; 15 ದಿನಗಳ ಹಿಂದೆ ಬೆಂಗ್ಳೂರಿಗೆ ಬಂದಿದ್ದ

Team Udayavani, Apr 19, 2024, 11:42 AM IST

7-bng

ಬೆಂಗಳೂರು: ನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವೈದ್ಯ, ಸ್ಟಾಫ್ ನರ್ಸ್‌ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ರೈಲು ನಿಲ್ದಾಣ ಸಮೀಪ ಡಾ.ಅನಂತ್‌ಪ್ರಸಾದ್‌ ಎಂಬ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಅನಂತ ಪ್ರಸಾದ್‌, ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದು, ಪತ್ನಿ ಜತೆ ಹೆಬ್ಟಾಳ ಬಳಿಯ ಕೆಂಪಾಪುರದಲ್ಲಿ ವಾಸವಾಗಿದ್ದರು. ಏರ್‌ಪೋರ್ಟ್‌ ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಆತ್ಮಹತ್ಯೆಗೂ ಮೊದಲು “ನನ್ನ ಸಾವಿಗೆ ನಾನೇ ಕಾರಣ’ ಎಂದು ವೈದ್ಯ ಅನಂತ ಪ್ರಸಾದ್‌ ಡೆತ್‌ ನೋಟ್‌ ಬರೆದಿಟ್ಟಿದ್ದಾರೆ. ಅವರ ಪ್ಯಾಂಟ್‌ ಜೇಬಿನಲ್ಲಿ ಆ ಡೆತ್‌ನೋಟ್‌ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸ ಲಾಗಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು. ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಟಾಫ್ ನರ್ಸ್‌ ಆತ್ಮಹತ್ಯೆ: ಮತ್ತೂಂದು ಪ್ರಕರಣದಲ್ಲಿ ದೀಪಾಂಜಲಿನಗರದ ರೈಲ್ವೆ ಸೇತುವೆ ಬಳಿ ವಿಜಯಪುರ ಜಿಲ್ಲೆ ಮೂಲದ ಸಾಫ್ಟ್ ನರ್ಸ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಕಾರಜೋಳ ಗ್ರಾಮದ ಚನ್ನಬಸು ಅಶೋಕ್‌(22) ಆತ್ಮಹತ್ಯೆ ಮಾಡಿಕೊಂಡವ.

ಬುಧವಾರ ಸಂಜೆ ರೈಲಿಗೆ ಸಿಲುಕಿ ಚನ್ನಬಸು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳೀಯರು ಗಮನಿಸಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಆತನ ಜೇಬಿನಲ್ಲಿದ್ದ ಆಧಾರ್‌, ಪಾನ್‌ಕಾರ್ಡ್‌ ನಿಂದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಅಶೋಕ್‌ 5 ತಿಂಗಳ ಹಿಂದೆ ನರ್ಸಿಂಗ್‌ ಕೋರ್ಸ್‌ ಮುಗಿಸಿದ್ದು, ಇತ್ತೀಚೆಗೆ ಕೆ.ಆರ್‌.ಪುರದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸಾಫ್ಟ್ ನರ್ಸ್‌ ಆಗಿ ಕೆಲಸ ಸಿಕ್ಕಿತ್ತು. ಹೀಗಾಗಿ, 15 ದಿನಗಳ ಹಿಂದಷ್ಟೇ ನಗರಕ್ಕೆ ಬಂದು ಮಾಗಡಿ ರಸ್ತೆಯಲ್ಲಿರುವ ಚೋಳರಪಾಳ್ಯದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ.

ಎಂದಿನಂತೆಯೇ ಬುಧವಾರ ಕೆಲಸಕ್ಕೆ ತೆರಳುವಾಗ ಸಂಜೆ ಮನೆಗೆ ಬರುವುದಿಲ್ಲ. ಸ್ನೇಹಿತರ ಭೇಟಿಗೆ ಹೋಗುತ್ತೇನೆ ಎಂದು ಚಿಕ್ಕಮ್ಮನಿಗೆ ತಿಳಿಸಿದ್ದ. ತಡರಾತ್ರಿಯಾದರೂ ಮನೆಗೆ ಬಾರದರಿಂದ ಅನುಮಾನಗೊಂಡ ಆತನ ಚಿಕ್ಕಮ್ಮ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ ಆಫ್ ಆಗಿತ್ತು.

ಇತ್ತ ಗುರುವಾರ ಬೆಳಗ್ಗೆ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾದ ಬಳಿಕ ಆತನ ಚಿಕ್ಕಮ್ಮನಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು. ಮೆಜೆಸ್ಟಿಕ್‌ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.